ಪುತ್ರಿಯರ ಕಣ್ಣೆದುರಲ್ಲೇ ಗುಂಡಿನ ದಾಳಿಗೆ ಒಳಗಾಗಿದ್ದ ಪತ್ರಕರ್ತ ವಿಕ್ರಮ್ ಜೋಶಿ ಸಾವು
Team Udayavani, Jul 22, 2020, 8:41 AM IST
ಗಾಜಿಯಾಬಾದ್: ಕಳೆದ ಸೋಮವಾರ ದೆಹಲಿ ಸಮೀಪದ ಗಾಜಿಯಾಬಾದ್ ನಲ್ಲಿ ದುಷ್ಕರ್ಮಿಗಳ ಗುಂಡಿನ ದಾಳಿಗೆ ಒಳಗಾಗಿದ್ದ ಉತ್ತರಪ್ರದೇಶದ ಪತ್ರಕರ್ತ ಚಿಕಿತ್ಸೆ ಫಲಿಸದೇ ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ.
ಪತ್ರಕರ್ತ ವಿಕ್ರಮ್ ಜೋಶಿ ಅವರು ಕಳೆದ ಸೋಮವಾರ ರಾತ್ರಿ 10:30ರ ವೇಳೆಗೆ ತನ್ನಿಬ್ಬರು ಹೆಣ್ಣುಮಕ್ಕಳ ಜೊತೆ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಅವರನ್ನು ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳ ಗುಂಪೊಂದು ವಿಕ್ರಮ್ ಜೋಶಿ ನಿವಾಸದ ಎದುರಲ್ಲೇ ಪುತ್ರಿಯರ ಕಣ್ಮುಂದೆ ಗುಂಡಿಕ್ಕಿದ್ದರು.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿ ಚಿಕಿತ್ಸೆ ನೀಡಲಾಗಿತ್ತು. ಆದರೇ ಗಂಭೀರವಾಗಿ ಗಾಯಗೊಂಡಿದ್ದರಿಂದ ಇಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಸಂಫೂರ್ಣ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಪ್ರಕರಣದಲ್ಲಿ 9 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಾತ್ರವಲ್ಲದೆ 2 ಪೊಲೀಸರು ಕೂಡ ಸಸ್ಪೆಂಡ್ ಆಗಿದ್ದಾರೆ.
ಘಟನೆ ನಡೆಯುವ 4 ದಿನಗಳ ಮೊದಲು, ತನ್ನ ಕುಟುಂಬ ಸದಸ್ಯರೊಬ್ಬರಿಗೆ ಕೆಲವು ವ್ಯಕ್ತಿಗಳು ಕಿರುಕುಳ ನೀಡುತ್ತಿದ್ಧಾರೆ ಎಂದು ವಿಕ್ರಮ್ ಜೋಶಿ ದೂರು ದಾಖಲಿಸಿದ್ದರು. ಅದಾದ ನಂತರವೇ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು