ಪತ್ರಕರ್ತ ಅರ್ನಾಬ್ ಮೇಲೆ ದುಷ್ಕರ್ಮಿಗಳ ದಾಳಿ
Team Udayavani, Apr 24, 2020, 1:37 AM IST
ಮುಂಬಯಿ: ಪತ್ರಕರ್ತ ಅರ್ನಾಬ್ ಗೋಸ್ವಾಮಿ ಮೇಲೆ ಮುಂಬಯಿ ನಲ್ಲಿ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ನಡೆದಿದೆ.
ಗುರುವಾರ ಬೆಳಗ್ಗೆ ತಮ್ಮ ಪತ್ನಿ ಜತೆ ಕಾರಿನಲ್ಲಿ ಮನೆಗೆ ತೆರಳುತ್ತಿದ್ದ ಸಂದರ್ಭ ದಲ್ಲಿ ಬೈಕ್ನಲ್ಲಿ ಬಂದ ಇಬ್ಬರು ಆಗಂತುಕರು ಕಾರನ್ನು ಅಡ್ಡಗಟ್ಟಿದ್ದಾರೆ, ಕಾರಿನ ಗಾಜನ್ನು ಒಡೆದು ದಾಳಿ ನಡೆಸಲು ಪ್ರಯತ್ನಿಸಿದ್ದಾರೆ, ಮುಂಬಯಿನ ಗಣಪತ್ರಾವ್ ಕದಮ್ ರಸ್ತೆಯಲ್ಲಿ ನಡೆದ ದಾಳಿಯ ವೇಳೆ ಅರ್ನಾಬ್ ಅಂಗ ರಕ್ಷಕರು ಮತ್ತೂಂದು ಕಾರಿನಲ್ಲಿ ಹಿಂದಿನಿಂದ ಬರುತ್ತಿದ್ದರು.
ಆಗಂತುಕರು ಕಪ್ಪು ಶಾಯಿಯ ಬಾಟಲಿಯೊಂದಿಗೆ ಬಂದಿದ್ದು ಅದನ್ನು ಕಾರಿನತ್ತ ಎಸೆದಿದ್ದಾರೆ. ತತ್ಕ್ಷಣ ಅವರನ್ನು ಅಂಗ ರಕ್ಷಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಘಟನೆ ಬಳಿಕ ವಿಡಿಯೊ ಮೂಲಕ ಮಾತನಾಡಿರುವ ಅರ್ನಾಬ್, ಈ ಕೃತ್ಯವನ್ನು ಎಸಗಿರುವುದು ಯುವ ಕಾಂಗ್ರೆಸ್ ಕಾರ್ಯಕರ್ತರು ಎಂದು ಆರೋಪಿಸಿದ್ದರಲ್ಲದೆ, ಸೋನಿಯಾ ಗಾಂಧಿ ಅವರೇ ನೇರ ಹೊಣೆ ಎಂದು ಟೀಕಿಸಿದ್ದಾರೆ.
ಇತ್ತೀಚೆಗೆ ಪಾಲ್ಘರ್ ಘಟನೆಗೆ ಸಂಬಂಧ ಪಟ್ಟಂತೆ ಅರ್ನಾಬ್ ತಮ್ಮ ಸುದ್ದಿ ಚಾನೆಲ್ನಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಟೀಕೆ ಮಾಡಿದ್ದರು. ಇದರಿಂದ ಸಿಟ್ಟಾಗಿ ಕಾಂಗ್ರೆಸ್ ಯುವ ಕಾರ್ಯಕರ್ತರು ದಾಳಿ ನಡೆಸಿರಬಹುದು ಎಂದು ಹೇಳಲಾಗಿದೆ. ಈ ಬಗ್ಗೆ ಪೊಲೀಸರು ಇದುವರೆಗೆ ಯಾವುದನ್ನೂ ಖಚಿತಪಡಿಸಿಲ್ಲ.
ದಾಳಿ ಖಂಡಿಸಿದ ನಾಯಕರು: ಅರ್ನಾಬ್ ಮೇಲಿನ ದಾಳಿಯನ್ನು ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವು ಪಕ್ಷಗಳ ನಾಯಕರು ಖಂಡಿಸಿದ್ದಾರೆ.
‘ಆಘಾತಕಾರಿ ಸಂಗತಿ, ಪತ್ರಿಕಾ ಮಾಧ್ಯಮದ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾದಂತಾಗಿದೆ’ ಎಂದು ನಡ್ಡಾ ಟ್ವೀಟ್ ಮಾಡಿದ್ದಾರೆ. ಆದರೆ ಕಾಂಗ್ರೆಸ್ ಮಾತ್ರ ಘಟನೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್