ಎಸ್ಐಟಿ ಲೋಯಾ ಸಾವಿನ ತನಿಖೆ ನಡೆಸಲಿ: ವಿಪಕ್ಷಗಳು
Team Udayavani, Feb 10, 2018, 11:35 AM IST
ಹೊಸದಿಲ್ಲಿ: ಸಿಬಿಐ ನ್ಯಾಯಾಧೀಶ ಬಿ.ಎಚ್.ಲೋಯಾ ಸಾವು ಪ್ರಕರಣವನ್ನು ಕೋರ್ಟ್ ನಿರ್ದೇಶಿತ ಎಸ್ಐಟಿ ತನಿಖೆಗೆ ನೀಡಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ವಿಪಕ್ಷಗಳ ಸಂಸದರು ರಾಷ್ಟ್ರಪತಿ ರಾಮನಾಥ್ ಕೋವಿಂದ್ಗೆ ಮನವಿ ಮಾಡಿದ್ದಾರೆ. ಸಿಬಿಐ ಅಥವಾ ಎನ್ಐಎ ಮೇಲೆ ಯಾವುದೇ ವಿಶ್ವಾಸವಿಲ್ಲ.
ಸುಪ್ರೀಂಕೋರ್ಟ್ ನೇತೃತ್ವದಲ್ಲಿ ಆಯ್ದ ಅಧಿಕಾರಿಗಳಿಂದ ಸ್ವತಂತ್ರ ತನಿಖೆ ನಡೆಸಬೇಕಿದೆ. ಈ ಬಗ್ಗೆ ರಾಷ್ಟ್ರಪತಿ ಮಧ್ಯಪ್ರವೇಶಿಸಬೇಕು ಎಂದು ಸಂಸದರು ಆಗ್ರಹಿಸಿದ್ದಾರೆ. ನಂತರ ಮಾತನಾಡಿದ ರಾಹುಲ್ ಗಾಂಧಿ, ಈ ಪ್ರಕರಣ ಅನುಮಾನಾಸ್ಪದವಾಗಿದೆ ಎಂದು ಬಹುತೇಕ ಸಂಸದರು ಅಭಿಪ್ರಾಯಪಟ್ಟಿದ್ದಾರೆ ಎಂದಿದ್ದಾರೆ.
ಕಾಂಗ್ರೆಸ್, ಟಿಎಂಸಿ, ಡಿಎಂಕೆ ಸೇರಿದಂತೆ ವಿವಿಧ ಪಕ್ಷದ ಸಂಸದರು ಈ ವೇಳೆ ಹಾಜರಿದ್ದರು. ತನಿಖೆಯನ್ನು ಸಿಬಿಐ ಅಥವಾ ಎನ್ಐಎ ಮೂಲಕ ಮಾಡಬಾರದು. ಈ ಸಂಸ್ಥೆಗಳು ಸರಕಾರದ ಅಧೀನ ಸಂಸ್ಥೆಗಳಂತೆ ಕೆಲಸ ಮಾಡುತ್ತಿವೆ. ನ್ಯಾಯಾಂಗ ನೇತೃತ್ವದ ಸಮಿತಿಯ ತನಿಖೆಯೊಂದೇ ಈ ಪ್ರಕರಣಕ್ಕೆ ನ್ಯಾಯ ಒದಗಿಸಬಲ್ಲದು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ