ದೇಶದ ಎಲ್ಲ ಧಾರ್ಮಿಕ ಕೇಂದ್ರಗಳ ಬಗ್ಗೆ ನ್ಯಾಯಾಂಗ ಆಡಿಟ್ ಆರಂಭ
Team Udayavani, Aug 24, 2018, 9:20 AM IST
ಹೊಸದಿಲ್ಲಿ: ದೇಶದ ಎಲ್ಲ ಧಾರ್ಮಿಕ ಮತ್ತು ದತ್ತಿ ಸಂಸ್ಥೆಗಳಲ್ಲಿನ ವಿವಿಧ ವಿಚಾರಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗೆ ನೀಡಿರುವ ದೂರುಗಳೇ ಈಗ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಾಗಲಿವೆ. ನೈರ್ಮಲ್ಯ, ಸ್ವತ್ತು, ಪ್ರವೇಶ ಹಾಗೂ ಖಾತೆಗಳಿಗೆ ಸಂಬಂಧಿಸಿದ ಎಲ್ಲ ದೂರುಗಳ ಬಗ್ಗೆ ಜಿಲ್ಲಾಧಿಕಾರಿ ತನಿಖೆ ನಡೆಸಬೇಕು ಮತ್ತು ಇದಕ್ಕೆ ಸಂಬಂಧಿಸಿದ ವರದಿಯನ್ನು ಹೈಕೋರ್ಟ್ಗಳಿಗೆ ಸಲ್ಲಿಸಬೇಕು. ಹೈಕೋರ್ಟ್ ಇವುಗಳನ್ನು ಪಿಐಎಲ್ ಎಂದು ಪರಿಗಣಿಸಬೇಕು ಎಂಬ ಸುಪ್ರೀಂಕೋರ್ಟ್ನ ಮಹತ್ವದ ಆದೇಶ ಈಗ ಕಾರ್ಯರೂಪಕ್ಕೆ ಬಂದಿದೆ.
ಸುಪ್ರೀಂಕೋರ್ಟ್ ಆದೇಶವು ದೇಗುಲಗಳಷ್ಟೇ ಅಲ್ಲ, ಮಸೀದಿಗಳು, ಚರ್ಚ್ಗಳು ಮತ್ತು ಇತರ ಧಾರ್ಮಿಕ ಹಾಗೂ ದತ್ತಿ ಸಂಸ್ಥೆಗಳಿಗೂ ಅನ್ವಯವಾಗುತ್ತದೆ. ಸಂದರ್ಶಕರು ಎದುರಿಸಿದ ಸಂಕಷ್ಟಗಳು, ಆಡಳಿತ ಮಂಡಳಿಯಲ್ಲಿನ ವಿವಾದ, ನೈರ್ಮಲ್ಯ ನಿರ್ವಹಣೆಯಲ್ಲಿ ಲೋಪ, ಭಕ್ತರು ನೀಡಿದ ಕಾಣಿಕೆಗಳನ್ನು ಸರಿಯಾಗಿ ಬಳಕೆ ಮಾಡಿಕೊಳ್ಳದಿರುವುದು ಮತ್ತು ಧಾರ್ಮಿಕ ಸಂಸ್ಥೆಗಳ ಸ್ವತ್ತು ರಕ್ಷಣೆಗೆ ಸಂಬಂಧಿಸಿದ ದೂರುಗಳನ್ನು ಜಿಲ್ಲಾಧಿಕಾರಿಗಳು ಪರಿಶೀಲನೆಗೆ ಪರಿಗಣಿಸಬೇಕು ಎಂದು ಕಳೆದ ತಿಂಗಳು ನ್ಯಾ| ಆದರ್ಶ ಕೆ. ಗೋಯೆಲ್ ಹಾಗೂ ನ್ಯಾ.ಎಸ್ ಅಬ್ದುಲ್ ನಜೀರ್ ಅವರನ್ನೊಳಗೊಂಡ ನ್ಯಾಯಪೀಠ ಆದೇಶಿಸಿತ್ತು. ಸದ್ಯ 20 ಲಕ್ಷಕ್ಕೂ ಹೆಚ್ಚು ದೇಗುಲಗಳು, ಮೂರು ಲಕ್ಷ ಮಸೀದಿಗಳು ಮತ್ತು ಸಾವಿರಕ್ಕೂ ಹೆಚ್ಚು ಚರ್ಚ್ಗಳು ದೇಶಾದ್ಯಂತ ಇದ್ದು, ಇವುಗಳ ಬಗ್ಗೆ ಇರುವ ದೂರುಗಳನ್ನು ನಿರ್ವಹಿಸುವುದು ನ್ಯಾಯಾಂಗಕ್ಕೆ ಸವಾಲಿನ ಕೆಲಸವಾಗಲಿದೆ ಎಂಬ ಕಾಳಜಿಯೂ ಇದೀಗ ವ್ಯಕ್ತವಾಗಿದೆ. ಈಗಾಗಲೇ ಭಾರಿ ಪ್ರಮಾಣದಲ್ಲಿ ಕೋರ್ಟ್ಗಳಲ್ಲಿ ಪ್ರಕರಣಗಳು ಬಾಕಿ ಇವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ