ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಗಂಭೀರ ಬೆದರಿಕೆ: CJI ರಂಜನ್‌ ಗೊಗೊಯ್‌ ಕಳವಳ


Team Udayavani, Apr 20, 2019, 7:39 PM IST

CJI-GOGOI-730

ಹೊಸದಿಲ್ಲಿ : ಭಾರತದ ವರಿಷ್ಠ ನ್ಯಾಯಮೂರ್ತಿ (ಸಿಜೆಐ) ರಂಜನ್‌ ಗೊಗೊಯ್‌ ಅವರಿಂದು ಶನಿವಾರ ಸುಪ್ರೀಂ ಕೋರ್ಟಿನ ವಿಶೇಷ ಪೀಠದಲ್ಲಿದ್ದುಕೊಂಡು ತನ್ನ ವಿರುದ್ಧ ಮಾಡಲಾಗಿರುವ ಲೈಂಗಿಕ ಕಿರುಕುಳದ ಆರೋಪವನ್ನು ತಳ್ಳಿ ಹಾಕಿದರು.

ಮಾಧ್ಯಮದವರು ಈ ರೀತಿಯ ವಿಷಯಗಳನ್ನು ಪ್ರಕಟಿಸುವ ಮುನ್ನ ತುಂಬ ಹೊಣೆಗಾರಿಕೆ ಮತ್ತು ವಿವೇಕವನ್ನು ತೋರಬೇಕು ಹಾಗೂ ಸತ್ಯಾಸತ್ಯತೆಯನ್ನು ಪರಾಮರ್ಶಿಸದೆ ವರದಿ ಪ್ರಕಟಿಸಬಾರದು ಎಂದು ಹೇಳಿದರು.

ಇಂದು ಶನಿವಾರ ಬೆಳಗ್ಗೆ ಸಿಜೆಐ ರಂಜನ್‌ ಗೊಗೊಯ್‌, ಜಸ್ಟಿಸ್‌ ಅರುಣ್‌ ಮಿಶ್ರಾ ಮತ್ತು ಜಸ್ಟಿಸ್‌ ಸಂಜೀವ್‌ ಖನ್ನಾ ಅವರನ್ನು ಒಳಗೊಂಡ ಸುಪ್ರೀಂ ಪೀಠ, ಅತ್ಯಂತ ಸಾರ್ವಜನಿಕ ಪ್ರಾಮುಖ್ಯದ ವಿಷಯವೊಂದರ ವಿಚಾರಣೆ ನಡೆಯಲಿಕ್ಕಿದೆ ಎಂದು ಪ್ರಕಟಿಸಿತ್ತು. ಇದಕ್ಕಾಗಿ ಪೀಠವು ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರನ್ನು ಉಲ್ಲೇಖೀಸಿತ್ತು.

ಈ ಪ್ರಕರಣವು ಕೆಲವೊಂದು ವೆಬ್‌ ಆಧಾರಿತ ಮಾಧ್ಯಮಗಳು, ಮಹಿಳೆಯೊಬ್ಬಳು ಸಿಜೆಐ ವಿರುದ್ಧ ಮಾಡಿದ್ದ ಲೈಂಗಿಕ ಕಿರುಕುಳದ ಆರೋಪ ಕುರಿತ ವರದಿಗೆ ಸಂಬಂಧಿಸಿದ್ದಾಗಿತ್ತು.

ವಿಚಾರಣೆ ವೇಳೆ ಸಿಜೆಐ ಗೊಗೊಯ್‌ ಅವರು, “ಸ್ವತಂತ್ರವಾಗಿ ಉಳಿದುಕೊಂಡು ಬಂದಿರುವ ದೇಶದ ನ್ಯಾಯಾಂಗವನ್ನು ಬುಡಮೇಲು ಮಾಡುವ ಭಾರೀ ದೊಡ್ಡ ಹುನ್ನಾರ ಈ ಪ್ರಕರಣದ ಹಿಂದಿದೆ. ನನ್ನ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿರುವ ಮಹಿಳೆಯು ಕ್ರಿಮಿನಲ್‌ ಹಿನ್ನೆಲೆ ಹೊಂದಿದವಳಾಗಿದ್ದಾಳೆ’ ಎಂದು ಹೇಳಿದರು.

‘ನ್ಯಾಯಾಂಗದಲ್ಲಿ ಕಳೆದ 20 ವರ್ಷಗಳಿಂದ ನಿಸ್ವಾರ್ಥ ಸೇವೆಯಲ್ಲಿ ತೊಡಗಿಕೊಂಡು ಬಂದಿರುವ ನನ್ನ ಬ್ಯಾಂಕ್‌ ಬ್ಯಾಲನ್ಸ್‌ 6.80 ಲಕ್ಷ ರೂ. ಮತ್ತು ಪ್ರಾವಿಡೆಂಟ್‌ ಫ‌ಂಡ್‌ ನಲ್ಲಿ 40 ಲಕ್ಷ ರೂ. ಇದೆ. ನ್ಯಾಯಾಂಗದ ವಿರುದ್ಧ ಪಿತೂರಿ ನಡೆಸುವ ದುಷ್ಟ ಶಕ್ತಿಗಳಿಗೆ ನನ್ನ ಬಗ್ಗೆ ಬೇರೇನೂ ಸಿಗದ ಕಾರಣಕ್ಕೆ ನನ್ನ ವಿರುದ್ಧ ಆರೋಪ ಮಾಡಲು ನಂಬಿಕೆಗೆ ಅರ್ಹವಲ್ಲದ ಮಹಿಳೆಯೊಬ್ಬಳನ್ನು ಬಳಸಿಕೊಂಡಿವೆ’ ಎಂದು ಸಿಜೆಐ ಹೇಳಿದರು.

ಈ ರೀತಿ ತನ್ನ ವಿರುದ್ಧ ಆರೋಪಗಳನ್ನು ಮಾಡಲು ಕಾರಣ ಏನಿರಬಹುದೆಂಬ ಊಹೆಯಲ್ಲಿ ಸಿಜೆಐ ಗೊಗೊಯ್‌ ಅವರು “ಮುಂದಿನ ವಾರ ನಾನು ಕೆಲವೊಂದು ಬಹು ಮುಖ್ಯ ಕೇಸುಗಳ ವಿಚಾರಣೆ ನಡೆಸಲಿದ್ದು ಅದನ್ನು ನಾನು ಕೈಗೊಳ್ಳದಂತೆ ಮಾಡುವ ಯತ್ನ ಇದಾಗಿರಬಹುದು’ ಎಂದು ಹೇಳಿದರು.

ಮುಂದಿನ ವಾರ ಸಿಜೆಐ, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ಕೋರ್ಟ್‌ ನಿಂದನೆ ಕೇಸು, ಮೋದಿ ಬಯೋಪಿಕ್‌ ಬಿಡುಗಡೆ ಕೇಸು, ತಮಿಳು ನಾಡಿನಲ್ಲಿ ಮತದಾರರಿಗೆ ಅಪಾರ ಪ್ರಮಾಣದ ಹಣದ ಆಮಿಷ ಒಡ್ಡಲಾಗಿರುವ ಕಾರಣಕ್ಕೆ ಚುನಾವಣೆ ಮುಂದೂಡಲ್ಪಟ್ಟಿರುವ ಕೇಸುಗಳ ವಿಚಾರಣೆ ಕೈಗೊಳ್ಳಲಿದ್ದಾರೆ.

ತನ್ನ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿರುವ ಮಹಿಳೆಗೆ ಕ್ರಿಮಿನಲ್‌ ಹಿನ್ನೆಲೆ ಇದ್ದು ಆಕೆ ನಾಲ್ಕು ದಿನ ಜೈಲು ಶಿಕ್ಷೆ ಅನುಭವಿಸಿದ್ದಾಳೆ; ಆಕೆಯ ನಡತೆಯ ವಿರುದ್ಧ ಪೊಲೀಸರು ಆಕೆಗೆ ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ ಎಂದು ಸಿಜೆಐ ಹೇಳಿದರು.

ಸಾರ್ವಜನಿಕ ಪ್ರಾಮುಖ್ಯದ ಈ ಪ್ರಕರಣದಲ್ಲಿ ಆದೇಶ ಹೊರಡಿಸುವುದರಿಂದ ಸಿಜೆಐ ಗೊಗೊಯ್‌ ಹಿಂದೆ ಸರಿದರೆ, ಉಳಿದಿಬ್ಬರು ನ್ಯಾಯಮೂರ್ತಿಗಳಾದ ಜಸ್ಟಿಸ್‌ ಮಿಶ್ರಾ ಮತ್ತು ಜಸ್ಟಿಸ್‌ ಖನ್ನಾ ಅವರು ಮಾಧ್ಯಮಕ್ಕೆ “ಅತ್ಯಂತ ಜವಾಬ್ದಾರಿ ಮತ್ತು ವಿವೇಕದಿಂದ ಕಾರ್ಯವೆಸಗಬೇಕೆಂದೂ, ಮಹಿಳೆಯ ದೂರಿನ ಸತ್ಯಾಸತ್ಯತೆಯನ್ನು ಪರಾಮರ್ಶಿಸದೆ ವರದಿ ಪ್ರಕಟಿಸಬಾರದೆಂದೂ ಹೇಳಿದರು.

ಟಾಪ್ ನ್ಯೂಸ್

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.