ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಗಂಭೀರ ಬೆದರಿಕೆ: CJI ರಂಜನ್‌ ಗೊಗೊಯ್‌ ಕಳವಳ


Team Udayavani, Apr 20, 2019, 7:39 PM IST

CJI-GOGOI-730

ಹೊಸದಿಲ್ಲಿ : ಭಾರತದ ವರಿಷ್ಠ ನ್ಯಾಯಮೂರ್ತಿ (ಸಿಜೆಐ) ರಂಜನ್‌ ಗೊಗೊಯ್‌ ಅವರಿಂದು ಶನಿವಾರ ಸುಪ್ರೀಂ ಕೋರ್ಟಿನ ವಿಶೇಷ ಪೀಠದಲ್ಲಿದ್ದುಕೊಂಡು ತನ್ನ ವಿರುದ್ಧ ಮಾಡಲಾಗಿರುವ ಲೈಂಗಿಕ ಕಿರುಕುಳದ ಆರೋಪವನ್ನು ತಳ್ಳಿ ಹಾಕಿದರು.

ಮಾಧ್ಯಮದವರು ಈ ರೀತಿಯ ವಿಷಯಗಳನ್ನು ಪ್ರಕಟಿಸುವ ಮುನ್ನ ತುಂಬ ಹೊಣೆಗಾರಿಕೆ ಮತ್ತು ವಿವೇಕವನ್ನು ತೋರಬೇಕು ಹಾಗೂ ಸತ್ಯಾಸತ್ಯತೆಯನ್ನು ಪರಾಮರ್ಶಿಸದೆ ವರದಿ ಪ್ರಕಟಿಸಬಾರದು ಎಂದು ಹೇಳಿದರು.

ಇಂದು ಶನಿವಾರ ಬೆಳಗ್ಗೆ ಸಿಜೆಐ ರಂಜನ್‌ ಗೊಗೊಯ್‌, ಜಸ್ಟಿಸ್‌ ಅರುಣ್‌ ಮಿಶ್ರಾ ಮತ್ತು ಜಸ್ಟಿಸ್‌ ಸಂಜೀವ್‌ ಖನ್ನಾ ಅವರನ್ನು ಒಳಗೊಂಡ ಸುಪ್ರೀಂ ಪೀಠ, ಅತ್ಯಂತ ಸಾರ್ವಜನಿಕ ಪ್ರಾಮುಖ್ಯದ ವಿಷಯವೊಂದರ ವಿಚಾರಣೆ ನಡೆಯಲಿಕ್ಕಿದೆ ಎಂದು ಪ್ರಕಟಿಸಿತ್ತು. ಇದಕ್ಕಾಗಿ ಪೀಠವು ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರನ್ನು ಉಲ್ಲೇಖೀಸಿತ್ತು.

ಈ ಪ್ರಕರಣವು ಕೆಲವೊಂದು ವೆಬ್‌ ಆಧಾರಿತ ಮಾಧ್ಯಮಗಳು, ಮಹಿಳೆಯೊಬ್ಬಳು ಸಿಜೆಐ ವಿರುದ್ಧ ಮಾಡಿದ್ದ ಲೈಂಗಿಕ ಕಿರುಕುಳದ ಆರೋಪ ಕುರಿತ ವರದಿಗೆ ಸಂಬಂಧಿಸಿದ್ದಾಗಿತ್ತು.

ವಿಚಾರಣೆ ವೇಳೆ ಸಿಜೆಐ ಗೊಗೊಯ್‌ ಅವರು, “ಸ್ವತಂತ್ರವಾಗಿ ಉಳಿದುಕೊಂಡು ಬಂದಿರುವ ದೇಶದ ನ್ಯಾಯಾಂಗವನ್ನು ಬುಡಮೇಲು ಮಾಡುವ ಭಾರೀ ದೊಡ್ಡ ಹುನ್ನಾರ ಈ ಪ್ರಕರಣದ ಹಿಂದಿದೆ. ನನ್ನ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿರುವ ಮಹಿಳೆಯು ಕ್ರಿಮಿನಲ್‌ ಹಿನ್ನೆಲೆ ಹೊಂದಿದವಳಾಗಿದ್ದಾಳೆ’ ಎಂದು ಹೇಳಿದರು.

‘ನ್ಯಾಯಾಂಗದಲ್ಲಿ ಕಳೆದ 20 ವರ್ಷಗಳಿಂದ ನಿಸ್ವಾರ್ಥ ಸೇವೆಯಲ್ಲಿ ತೊಡಗಿಕೊಂಡು ಬಂದಿರುವ ನನ್ನ ಬ್ಯಾಂಕ್‌ ಬ್ಯಾಲನ್ಸ್‌ 6.80 ಲಕ್ಷ ರೂ. ಮತ್ತು ಪ್ರಾವಿಡೆಂಟ್‌ ಫ‌ಂಡ್‌ ನಲ್ಲಿ 40 ಲಕ್ಷ ರೂ. ಇದೆ. ನ್ಯಾಯಾಂಗದ ವಿರುದ್ಧ ಪಿತೂರಿ ನಡೆಸುವ ದುಷ್ಟ ಶಕ್ತಿಗಳಿಗೆ ನನ್ನ ಬಗ್ಗೆ ಬೇರೇನೂ ಸಿಗದ ಕಾರಣಕ್ಕೆ ನನ್ನ ವಿರುದ್ಧ ಆರೋಪ ಮಾಡಲು ನಂಬಿಕೆಗೆ ಅರ್ಹವಲ್ಲದ ಮಹಿಳೆಯೊಬ್ಬಳನ್ನು ಬಳಸಿಕೊಂಡಿವೆ’ ಎಂದು ಸಿಜೆಐ ಹೇಳಿದರು.

ಈ ರೀತಿ ತನ್ನ ವಿರುದ್ಧ ಆರೋಪಗಳನ್ನು ಮಾಡಲು ಕಾರಣ ಏನಿರಬಹುದೆಂಬ ಊಹೆಯಲ್ಲಿ ಸಿಜೆಐ ಗೊಗೊಯ್‌ ಅವರು “ಮುಂದಿನ ವಾರ ನಾನು ಕೆಲವೊಂದು ಬಹು ಮುಖ್ಯ ಕೇಸುಗಳ ವಿಚಾರಣೆ ನಡೆಸಲಿದ್ದು ಅದನ್ನು ನಾನು ಕೈಗೊಳ್ಳದಂತೆ ಮಾಡುವ ಯತ್ನ ಇದಾಗಿರಬಹುದು’ ಎಂದು ಹೇಳಿದರು.

ಮುಂದಿನ ವಾರ ಸಿಜೆಐ, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ಕೋರ್ಟ್‌ ನಿಂದನೆ ಕೇಸು, ಮೋದಿ ಬಯೋಪಿಕ್‌ ಬಿಡುಗಡೆ ಕೇಸು, ತಮಿಳು ನಾಡಿನಲ್ಲಿ ಮತದಾರರಿಗೆ ಅಪಾರ ಪ್ರಮಾಣದ ಹಣದ ಆಮಿಷ ಒಡ್ಡಲಾಗಿರುವ ಕಾರಣಕ್ಕೆ ಚುನಾವಣೆ ಮುಂದೂಡಲ್ಪಟ್ಟಿರುವ ಕೇಸುಗಳ ವಿಚಾರಣೆ ಕೈಗೊಳ್ಳಲಿದ್ದಾರೆ.

ತನ್ನ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿರುವ ಮಹಿಳೆಗೆ ಕ್ರಿಮಿನಲ್‌ ಹಿನ್ನೆಲೆ ಇದ್ದು ಆಕೆ ನಾಲ್ಕು ದಿನ ಜೈಲು ಶಿಕ್ಷೆ ಅನುಭವಿಸಿದ್ದಾಳೆ; ಆಕೆಯ ನಡತೆಯ ವಿರುದ್ಧ ಪೊಲೀಸರು ಆಕೆಗೆ ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ ಎಂದು ಸಿಜೆಐ ಹೇಳಿದರು.

ಸಾರ್ವಜನಿಕ ಪ್ರಾಮುಖ್ಯದ ಈ ಪ್ರಕರಣದಲ್ಲಿ ಆದೇಶ ಹೊರಡಿಸುವುದರಿಂದ ಸಿಜೆಐ ಗೊಗೊಯ್‌ ಹಿಂದೆ ಸರಿದರೆ, ಉಳಿದಿಬ್ಬರು ನ್ಯಾಯಮೂರ್ತಿಗಳಾದ ಜಸ್ಟಿಸ್‌ ಮಿಶ್ರಾ ಮತ್ತು ಜಸ್ಟಿಸ್‌ ಖನ್ನಾ ಅವರು ಮಾಧ್ಯಮಕ್ಕೆ “ಅತ್ಯಂತ ಜವಾಬ್ದಾರಿ ಮತ್ತು ವಿವೇಕದಿಂದ ಕಾರ್ಯವೆಸಗಬೇಕೆಂದೂ, ಮಹಿಳೆಯ ದೂರಿನ ಸತ್ಯಾಸತ್ಯತೆಯನ್ನು ಪರಾಮರ್ಶಿಸದೆ ವರದಿ ಪ್ರಕಟಿಸಬಾರದೆಂದೂ ಹೇಳಿದರು.

ಟಾಪ್ ನ್ಯೂಸ್

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.