ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ನ್ಯಾ| ದಿನೇಶ್ ಮಹೇಶ್ವರಿ
Team Udayavani, Feb 2, 2018, 6:25 AM IST
ಹೊಸದಿಲ್ಲಿ: ಮೇಘಾಲಯ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರನ್ನು ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಾಧೀಶರನ್ನಾಗಿಸಿ ನ್ಯಾಯಮೂರ್ತಿಗಳ ಉನ್ನತಾಧಿಕಾರಿಗಳ ಸಮಿತಿ ಶಿಫಾರಸು ಮಾಡಿದೆ.
ಈ ಕುರಿತಂತೆ, ಜ. 11ರಂದು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ಇತರ ಹಿರಿಯ ನ್ಯಾಯಮೂರ್ತಿಗಳಾದ ಜೆ. ಚಲಮೇಶ್ವರ್ ಹಾಗೂ ರಂಜನ್ ಗಗೊಯ್ ಅವರ ಸಮಿತಿ, ಕರ್ನಾಟಕ ಸಹಿತ ದಿಲ್ಲಿ, ಮೇಘಾಲಯ, ಛತ್ತೀಸ್ಗಢ, ಕೋಲ್ಕತಾ, ತೆಲಂಗಾಣ ಹಾಗೂ ಆಂಧ್ರಪ್ರದೇಶ ಹೈಕೋರ್ಟ್ಗಳಿಗೆ ಮಾಡಿದ್ದ ಶಿಫಾರಸುಗಳನ್ನು ಇದೀಗ ಸುಪ್ರೀಂ ಕೋರ್ಟ್ನ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ.