ಕರ್ಣನ್ ನೇಪಾಲ,ಬಾಂಗ್ಲಾಗೆ ಎಸ್ಕೇಪ್ ? ರಾಷ್ಟ್ರಪತಿ ರಿಲೀಫ್ ಗೆ ಯತ್ನ
Team Udayavani, May 11, 2017, 3:55 PM IST
ಹೊಸದಿಲ್ಲಿ : ನ್ಯಾಯಾಲಯ ನಿಂದನೆಗಾಗಿ ಸುಪ್ರೀಂ ಕೋರ್ಟ್ನಿಂದ ಆರು ತಿಂಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಕಲ್ಕತ್ತ ಹೈಕೋರ್ಟ್ ನ್ಯಾಯಾಧೀಶ ಜಸ್ಟಿಸ್ ಸಿ ಎಸ್ ಕರ್ಣನ್, ನೇಪಾಲ ಅಥವಾ ಬಾಂಗ್ಲಾದೇಶಕ್ಕೆ ಎಸ್ಕೇಪ್ ಆಗಿರಬಹುದು. ಅವರು ರಿಲೀಫ್ ಗಾಗಿ ರಾಷ್ಟ್ರಪತಿಯನ್ನು ಸಂಪರ್ಕಿಸುವ ಸಿದ್ಧತೆ ನಡೆಸುತ್ತಿರಬಹುದು ಎಂದು ಅವರ ಕಾನೂನು ಸಲಹೆಗಾರ ಇಂದು ಗುರುವಾರ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಇದು ದೇಶದ ಉನ್ನತ ನ್ಯಾಯಾಂಗದಲ್ಲಿ ಏರ್ಪಟ್ಟಿರುವ ಸಂಘರ್ಷಕ್ಕೆ ದೊರಕಿರುವ ಹೊಸ ತಿರುವು ಎಂದು ತಿಳಿಯಲಾಗಿದೆ.
ಜಸ್ಟಿಸ್ ಕರ್ಣನ್ ಅವರನ್ನು ಬಂಧಿಸಿ ಜೈಲಿಗಟ್ಟಲು ಪೊಲೀಸರು ದೇಶದ ವಿವಿಧ ನಗರಗಳಲ್ಲಿ ಭಾರೀ ಹುಡುಕಾಟ ನಡೆಸಿದರಾದರೂ ಕರ್ಣನ್ ಅವರನ್ನು ಪತ್ತೆ ಹಚ್ಚಲು ಅವರಿಗೆ ಸಾಧ್ಯವಾಗಲಿಲ್ಲ.
“ಕುಲಭೂಷಣ್ ಜಾದವ್ ಕೇಸ್ನಲ್ಲಿ ಮಾಡಿರುವ ಹಾಗೆ ರಾಷ್ಟ್ರಪತಿಗಳು ಈ ಪ್ರಕರಣವನ್ನು ಅಂತಾರಾಷ್ಟ್ರೀಯ ನ್ಯಾಯಾಲಯಕ್ಕೆ ಉಲ್ಲೇಖೀಸಬೇಕೆಂದು ನಾವು ಬಯಸುತ್ತೇವೆ; ನಾವು ಮುಂದಿನ ಹಂತದ ಹೋರಾಟಕ್ಕೆ ಸಿದ್ಧತೆ ನಡೆಸುತ್ತಿದ್ದೇವೆ; ಆದುದರಿಂದ ಆತ (ಕರ್ಣನ್) ಅಲ್ಲಿಯ ವರೆಗೆ ಅಡಗಿಕೊಂಡಿರುವ ಅಗತ್ಯವಿದೆ’ ಎಂದು ಮದ್ರಾಸ್ ಹೈಕೋರ್ಟಿನ ವಕೀಲರಾಗಿರುವ ಪೀಟರ್ ರಮೇಶ್ ಕುಮಾರ್ ಮಾಧ್ಯಮದೊಂದಿಗೆ ಮಾತನಾಡುತ್ತಾ ಹೇಳಿದರು.
ಈ ನಡುವೆ ಕರ್ಣನ್ ಅವರ ಕಾನೂನು ಸಲಹಾ ತಂಡವು ಸುಪ್ರೀಂ ಕೋರ್ಟಿಗೆ ಅರ್ಜಿ ಹಾಕಿ ಕರ್ಣನ್ ಅವರಿಗಾಗಿರುವ ಶಿಕ್ಷೆ ಮತ್ತು ಬಂಧನದ ಆದೇಶವನ್ನು ಹಿಂಪಡೆಯುವಂತೆ ಕೇಳಿಕೊಂಡಿದೆ. ಜಸ್ಟಿಸ್ ಕರ್ಣನ್ ಅವರು “ನಾನೋರ್ವ ದಲಿತನಾಗಿರುವ ಕಾರಣಕ್ಕೆ ನನ್ನನ್ನು ಪ್ರತ್ಯೇಕಿಸಿ ಅನುಚಿತವಾಗಿ ನಡೆಸಿಕೊಳ್ಳಲಾಗುತ್ತಿದೆ; ನಿರಂತರ ಮಾನಸಿಕ ಹಿಂಸೆ, ಕಿರುಕುಳ ನೀಡಲಾಗುತ್ತಿದೆ’ ಎಂದು ಉನ್ನತ ನ್ಯಾಯಾಂಗದ ವಿರುದ್ಧ ಪದೇ ಪದೇ ಆರೋಪ ಮಾಡುತ್ತಾ ಬಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್ನದ್ದು: ಮೀನಾಕ್ಷಿ ಲೇಖಿ
Lok Sabha Elections; ಕಾಂಗ್ರೆಸ್ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್ಪಾಲ್
Lok Sabha Election ಫಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.