ನ್ಯಾಯಾಂಗ ನಿಂದನೆ; ಸುಪ್ರೀಂನಲ್ಲಿ ಬೇಷರತ್ ಕ್ಷಮೆಯಾಚಿಸಿದ ಕಾಟ್ಜು!
Team Udayavani, Jan 6, 2017, 3:40 PM IST
ಹೊಸದಿಲ್ಲಿ : ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ನಿಂದನಾತ್ಮಕ ಅಭಿಪ್ರಾಯವನ್ನು ತಮ್ಮ ಬ್ಲಾಗ್ನಲ್ಲಿ ಬರೆದು ಕೋರ್ಟ್ ನಿಂದನೆಯ ಕಾನೂನು ಕ್ರಮಕ್ಕೆ ಗುರಿಯಾಗಿದ್ದ ಸರ್ವೋಚ್ಚ ನ್ಯಾಯಾಲಯದ ಮಾಜಿ ನ್ಯಾಯಮೂರ್ತಿ ಮಾರ್ಕಂಡೇಯ ಕಾಟ್ಜು ಅವರು ಸುಪ್ರೀಂ ಕೋರ್ಟಿನಲ್ಲಿ ಬೇಷರತ್ ಕ್ಷಮೆಯಾಚಿಸಿದ್ದಾರೆ. ಅವರ ಕೋರಿರುವ ಕ್ಷಮೆಯನ್ನು ಸುಪ್ರೀಂ ಕೋರ್ಟ್ ಸ್ವೀಕರಿಸಿದೆ.
ಕಾಟ್ಜು ಅವರ ಕ್ಷಮಾಪಣೆಯನ್ನು ಸ್ವೀಕರಿಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಜಸ್ಟಿಸ್ ರಂಜನ್ ಗೊಗೋಯಿ ಮತ್ತು ಯು ಯು ಲಲಿತ್ ಅವರನ್ನು ಒಳಗೊಂಡ ಪೀಠವು, ಕಾಟ್ಜು ವಿರುದ್ಧದ ಕೋರ್ಟ್ ನಿಂದನೆಯ ಕಾನೂನು ಉಪಕ್ರಮವನ್ನು ಕೊನೆಗೊಳಿಸಿ ಆದೇಶ ಹೊರಡಿಸಿದ್ದಾರೆ.
ಜಸ್ಟಿಸ್ ಕಾಟ್ಜು ಅವರನ್ನು ಪ್ರತಿನಿಧಿಸಿದ ಹಿರಿಯ ವಕೀಲ ರಾಜೀವ್ ಧವನ್ ಅವರು ಕಾಟ್ಜು ಅವರ ಉತ್ತರವನ್ನು ಓದಿ ಹೇಳಿ ಅವರ ಕ್ಷಮಾಪಣೆಯನ್ನು ಕೋರ್ಟಿನ ಮುಂದೆ ಮಂಡಿಸಿದರು. ಕಾಟ್ಜು ಅವರಿಗೆ ಈ ಮೊದಲು ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ನೀಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್