ತೆಲಂಗಾಣ ಎನ್ ಕೌಂಟರ್, ಗಲ್ಲುಶಿಕ್ಷೆ ಪರ-ವಿರೋಧ ಚರ್ಚೆ; ಸಿಜೆಐ ಬೋಬ್ಡೆ ಮಾತಿನ ಮರ್ಮವೇನು?
Team Udayavani, Dec 7, 2019, 4:38 PM IST
ನವದೆಹಲಿ/ಜೋಧ್ ಪುರ್: ತಕ್ಷಣವೇ ನ್ಯಾಯದಾನ ಮಾಡಲು ಸಾಧ್ಯವಿಲ್ಲ. ಹೀಗೆ ಮಾಡಿದರೆ ನ್ಯಾಯದ ಚಾರಿತ್ರ್ಯ ನಷ್ಟವಾದಂತೆ. ನ್ಯಾಯದ ಹೆಸರಿನಲ್ಲಿ ಪ್ರತೀಕಾರದ ನಡೆ ಸರಿಯಲ್ಲ…ಇದು ಹೈದರಾಬಾದ್ ಎನ್ ಕೌಂಟರ್ ಘಟನೆ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಶಾರದ್ ಅರವಿಂದ್ ಬೋಬ್ಡೆ ಅವರು ಶನಿವಾರ ನೀಡಿರುವ ಪ್ರತಿಕ್ರಿಯೆಯಾಗಿದೆ.
ದಿಶಾ ಅತ್ಯಾಚಾರ, ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ತೆಲಂಗಾಣ ಪೊಲೀಸರು ಎನ್ ಕೌಂಟರ್ ನಲ್ಲಿ ಹತ್ಯೆಗೈದ ಘಟನೆ ನಂತರ ಸಿಜೆಐ ಬೋಬ್ಡೆ ಈ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಆದರೆ ಸಿಜೆಐ ಅವರು ನಿಖರವಾಗಿ ಇದೇ ಘಟನೆಯನ್ನು ಉಲ್ಲೇಖಿಸಿ ಈ ಹೇಳಿಕೆಯನ್ನು ನೀಡಿಲ್ಲ ಎಂದು ವರದಿ ವಿವರಿಸಿದೆ.
ಅತ್ಯಾಚಾರಿ ಆರೋಪಿಗಳನ್ನು ಎನ್ ಕೌಂಟರ್ ನಲ್ಲಿ ಹತ್ಯೆಗೈದಿದ್ದಕ್ಕೆ ಪೊಲೀಸರ ಕ್ರಮದ ಬಗ್ಗೆ ಟೀಕೆಗಳು ವ್ಯಕ್ತವಾಗಿದ್ದವು. ಆದರೆ ದೇಶದ ಬಹುತೇಕರು ಈ ಘಟನೆಯನ್ನು ಸ್ವಾಗತಿಸಿದ್ದರು.
ಸಿಜೆಐ ಬೋಬ್ಡೆ ಮಾತಿನ ಹಿನ್ನಲೆ ಏನು?
ಶನಿವಾರ ರಾಜಸ್ಥಾನದ ನೂತನ ಹೈಕೋರ್ಟ್ ಕಟ್ಟಡವನ್ನು ಉದ್ಘಾಟಿಸಿದ ನಂತರದ ಸಮಾರಂಭದಲ್ಲಿ ಸಿಜೆಐ ಬೋಬ್ಡೆ ಅವರು ದೇಶಾದ್ಯಂತ ನ್ಯಾಯಾಂಗ ಸುಧಾರಣೆ, ಮರಣದಂಡನೆ ಹಾಗೂ ಶೀಘ್ರ ನ್ಯಾಯದ ಬಗ್ಗೆ ಚರ್ಚೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಕೂಡಾ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ನ್ಯಾಯಾಂಗ ಮತ್ತು ದಾವೆ ಕುರಿತ ಬದಲಾವಣೆಯ ಗ್ರಹಿಕೆ ಬಗ್ಗೆ ನಮಗೆ ಅರಿವು ಇದೆ. ಒಂದು ದಾವೆಯನ್ನು ಅಂತಿಮ ಹಂತಕ್ಕೆ ಕೊಂಡೊಯ್ಯಲು ತಗಲುವ ದೀರ್ಘಾವಧಿ ಸಮಯವೇ ದೊಡ್ಡ ಅಡ್ಡಿಯಾಗಿದೆ ಎಂದು ಸಿಜೆಐ ಈ ವೇಳೆ ಅಭಿಪ್ರಾಯವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ