ಜೈಲಿಂದ ಬಿಡುಗಡೆ ಬಳಿಕ ನ್ಯಾ| ಕರ್ಣನ್ ಪುಸ್ತಕ ಪ್ರಕಟ
Team Udayavani, Nov 18, 2017, 8:24 AM IST
ಚೆನ್ನೈ: ಸುಪ್ರೀಂಕೋರ್ಟ್ನಿಂದ 6 ತಿಂಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ನಿವೃತ್ತ ನ್ಯಾಯಮೂರ್ತಿ ಸಿ.ಎಸ್.ಕರ್ಣನ್ ಡಿ.10ರಂದು ಬಿಡುಗಡೆಯಾಗಲಿದ್ದಾರೆ. ಬಳಿಕ ಅವರು ಪುಸ್ತಕ ಬರೆಯಲಿದ್ದಾರೆ. ಅದರಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧ ನೀಡಿರುವ 22 ತೀರ್ಪುಗಳನ್ನು ಪ್ರಕಟಿಸಲಿದ್ದಾರೆ. ಕೋಲ್ಕತಾ ಜೈಲಿನಲ್ಲಿ ಅವರನ್ನು ಭೇಟಿಯಾದ ಬಳಿಕ ಅವರ ವಕ್ತಾರ ಪೀಟರ್ ರಮೇಶ್ ಕುಮಾರ್ ಈ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಎರಡು ಗಂಟೆಗಳ ಕಾಲ ಅವರ ಜತೆ ಚರ್ಚೆ ನಡೆಸಲಾಗಿದೆ. ಭ್ರಷ್ಟ ವ್ಯವಸ್ಥೆಗೆ ಶರಣಾಗದೇ ಇರಲು ಅವರು ನಿರ್ಧರಿಸಿದ್ದಾರೆ. ಅವರು ಬರೆಯುತ್ತಿರುವ ಪುಸ್ತಕ ಅಂತಿಮ ಹಂತದಲ್ಲಿದೆ ಎಂದೂ ರಮೇಶ್ ಹೇಳಿಕೊಂಡಿದ್ದಾರೆ.
ಶೀಘ್ರವೇ ಪುಸ್ತಕ ಪ್ರಕಟಣೆ ಕಾಣುವ ನಿಟ್ಟಿನಲ್ಲಿ ನ್ಯಾ| ಕರ್ಣನ್ ಹಲವು ವ್ಯಕ್ತಿಗಳನ್ನು ಸೇರಿಸಿಕೊಂಡು ಟ್ರಸ್ಟ್ ರಚಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಮೇ 9ರಂದು ಸುಪ್ರೀಂಕೋರ್ಟ್ ನ್ಯಾ| ಕರ್ಣನ್ಗೆ ಶಿಕ್ಷೆ ವಿಧಿಸಿತ್ತು. ರಮೇಶ್ ಕುಮಾರ್ ಕೂಡ 2016ರಲ್ಲಿ ಮದ್ರಾಸ್ ಹೈಕೋರ್ಟ್ನಿಂದ 6 ತಿಂಗಳ ಕಾಲ ಶಿಕ್ಷೆಗೆ ಗುರಿಯಾಗಿದ್ದರು. ಜತೆಗೆ 2 ಸಾವಿರ ದಂಡ ಮತ್ತು ವಕೀಲಿಕೆ ನಡೆಸದಂತೆ ಆದೇಶವನ್ನೂ ಪಡೆದುಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ
Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ
Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ
Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?
Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ
Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ
Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ
Hubli; ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ
Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ