ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ಕತ್ತು ಸೀಳಿ ಕೊಂದ ಬಾಲಕ ಅರೆಸ್ಟ್
Team Udayavani, Dec 26, 2018, 11:49 AM IST
ಪುದುಚೇರಿ : 25 ವರ್ಷ ಪ್ರಾಯದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಆಕೆಯ ಕತ್ತು ಸೀಳಿ ಕೊಂದ ಆರೋಪದ ಮೇಲೆ ಅಪ್ರಾಪ್ತ ವಯಸ್ಸಿನ, 17 ವರ್ಷ ಪ್ರಾಯದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಕುಯವರಪಾಳ್ಯ ಎಂಬಲ್ಲಿನ ಮನೆಯಲ್ಲಿ ತನ್ನ ಮಗಳು ಕತ್ತು ಸೀಳಲ್ಪಟ್ಟ ಸ್ಥಿತಿಯಲ್ಲಿ ಸತ್ತು ಬಿದ್ದಿರುವುದು ಡಿ.18ರಂದು ಪತ್ತೆಯಾಗಿತ್ತು ಎಂದು ಮೃತ ಮಹಿಳೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದಳು ಎಂದು ಹಿರಿಯ ಪೊಲೀಸ್ ಸುಪರಿಂಟೆಂಡೆಂಟ್ ರಹೂಲ್ ಅಳವಾಲ್ ತಿಳಿಸಿದ್ದಾರೆ.
ಪೋಸ್ಟ್ ಮಾರ್ಟಮ್ ವರದಿಯಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಕೊಲ್ಲಲಾಗಿತ್ತೆಂಬ ಎಂಬ ಅಂಶ ಬೆಳಕಿಗೆ ಬಂದಿತ್ತು.
ಕೇಸು ದಾಖಲಿಸಿಕೊಂಡು ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಮೃತ ಮಹಿಳೆಯ ಮನೆ ಸಮೀಪದಲ್ಲೇ ವಾಸಿಸುತ್ತಿದ್ದ 17ರ ಹರೆಯದ ಬಾಲಕನ ಮೇಲೆ ಸಂಶಯ ಬಂದು ಆತನನ್ನು ವಶಕ್ಕೆ ತೆಗೆದುಕೊಂಡು ತೀವ್ರವಾಗಿ ಪ್ರಶ್ನಿಸಿದಾಗ ಆತ ತಾನು ನಡೆಸಿದ್ದ ಅತ್ಯಾಚಾರ ಮತ್ತು ಕೊಲೆ ಕೃತ್ಯವನ್ನು ಒಪ್ಪಿಕೊಂಡ.
ಪಾರಿವಾಳ ಸಾಕಣೆ ಮಾಡಿಕೊಂಡಿದ್ದ ಆರೋಪಿ ಬಾಲಕನು ತನ್ನ ಪಾರಿವಾಳಗಳು ಮಹಿಳೆಯ ಮನೆಯ ಟೆರೇಸಿಗೆ ಬಂದಿವೆಯೇ ಎಂಬುದನ್ನು ಹುಡುಕಾಡುವ ಸಲುವಾಗಿ ಆಗೀಗ ಎಂಬಂತೆ ಬರುತ್ತಿದ್ದ. ಇದಕ್ಕೆ ಮಹಿಳೆಯು ತೀವ್ರವಾಗಿ ವಿರೋಧಿಸಿದ್ದಳು.
ಡಿ.18ರಂದು ಆತ ಈ ರೀತಿ ಆಕೆಯ ಮನೆಗೆ ಬಂದಿದ್ದಾಗ ಮನೆಯಲ್ಲಿ ಮಹಿಳೆ ಒಬ್ಬಳೇ ಇದ್ದಳು. ಇದನ್ನು ಗಮನಿಸಿದ ಆತ ಆಕೆಯ ಮೇಲೆ ಅತ್ಯಾಚಾರ ನಡೆಸಿ ಆಕೆಯ ಕತ್ತು ಸೀಳಿ ಕೊಂದಿದ್ದ. ಆಕೆಯ ಮುಖವನ್ನು ಇಟ್ಟಿಗೆಯಿಂದ ಜಜ್ಜಿ ಆಕೆಯಿಂದ ಅತ್ಯಾಚಾರಕ್ಕೆ ಪ್ರತಿರೋಧಿಸದಂತೆ ಮಾಡಿದ್ದ. ರೇಪ್ ಬಳಿಕ ಆತ ಮಹಿಳೆಯ ಕತ್ತು ಸೀಳಿ ಆಕೆಯನ್ನು ಕೊಂದಿದ್ದ.
ಪೊಲೀಸರು ಕೊಲೆ, ಅತ್ಯಾಚಾರಿ ಆರೋಪಿ ಬಾಲಕನನನ್ನು ವಶಕ್ಕೆ ತೆಗೆದುಕೊಂಡು ಆತನನ್ನು ಬಾಲಾಪರಾಧ ಗೃಹಕ್ಕೆ ಕಳುಹಿಸಿದ್ದಾರೆ. ತನಿಖೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ