ನಿರ್ಭಯಾ ರೇಪ್ ಕೇಸ್; “ಆ” ಬಾಲಾಪರಾಧಿ ಎಲ್ಲಿದ್ದಾನೆ, ಹೇಗಿದ್ದಾನೆ…


Team Udayavani, May 5, 2017, 5:15 PM IST

Juvenele.jpg

ನವದೆಹಲಿ:ದೇಶಾದ್ಯಂತ ಸಂಚಲನ ಮೂಡಿಸಿ, ಆಕ್ರೋಶಕ್ಕೆ ಎಡೆಮಾಡಿಕೊಟ್ಟಿದ್ದ ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದಲ್ಲಿ ನಾಲ್ವರು ಅಪರಾಧಿಗಳಿಗೆ ಸುಪ್ರೀಂಕೋರ್ಟ್ ಗಲ್ಲುಶಿಕ್ಷೆ ಖಾಯಂಗೊಳಿಸಿದೆ. ಏತನ್ಮಧ್ಯೆ ಪ್ರಕರಣದಲ್ಲಿ 3 ವರ್ಷ (ಪುನರ್ ವಸತಿ ಕೇಂದ್ರದಲ್ಲಿ) ಶಿಕ್ಷೆ ಅನುಭವಿಸಿ ದೋಷಿಯಾಗಿದ್ದ ಬಾಲಾಪರಾಧಿ ಮಾತ್ರ ಈಗ ಹೊಸ ಜೀವನ ನಡೆಸುತ್ತಿದ್ದಾನೆ!

ನಿರ್ಭಯಾ ಪ್ರಕರಣದ ಕುರಿತ ಯಾವುದೇ ಬೆಳವಣಿಗೆ ಬಾಲಾಪರಾಧಿಗೆ ಗೊತ್ತಿಲ್ಲ. ಈ ಬಾಲಾಪರಾಧಿ ಪ್ರತಿಷ್ಠಿತ ರೆಸ್ಟೋರೆಂಟ್ ವೊಂದರಲ್ಲಿ ಅಡುಗೆ ಕೆಲಸ ಮಾಡುವ ಮೂಲಕ ಜೀವನ ಸಾಗಿಸುತ್ತಿದ್ದು, ಅಂದು ನಿರ್ಭಯಾ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಬಾಲಪರಾಧಿಗೆ ಈಗ 23ರ ಹರೆಯ.

ನಿರ್ಭಯಾ ಅತ್ಯಾಚಾರ ಪ್ರಕರಣದ ಬಾಲಾಪರಾಧಿ ಬಿಡುಗಡೆಗೆ ತಡೆ ಕೋರಿ ಮಹಿಳಾ ಆಯೋಗ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿತ್ತು. ಬಳಿಕ ಸುಪ್ರೀಂಕೋರ್ಟ್ ಬಾಲಾಪರಾಧಿಯನ್ನು ಬಿಡುಗಡೆಗೊಳಿಸಿ ಇನ್ಮುಂದೆ ಪೊಲೀಸರ ರಕ್ಷಣೆ ಮುಂದುವರಿಸಲು ಆಗದ ಕಾರಣಕ್ಕೆ ಆತನನ್ನು ಸರ್ಕಾರೇತರ ಸಂಸ್ಥೆ(ಎನ್ ಜಿಒ)ಗೆ ಒಪ್ಪಿಸಿ ರಹಸ್ಯ ಸ್ಥಳಕ್ಕೆ ಕಳುಹಿಸಿತ್ತು.

ಇದೀಗ ನಿರ್ಭಯಾ ಪ್ರಕರಣದ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸಿದೆ. ಮತ್ತೆ ಬಾಲಾಪರಾಧಿ ಬಗ್ಗೆ ಚಿತ್ತ ಹರಿದಿದೆ. ಆದರೆ ಬಾಲಾಪರಾಧಿ ಈವರೆಗೂ ರಾಷ್ಟ್ರೀಯ ನ್ಯೂಸ್ ಚಾನೆಲ್ ಗಳ  ದೃಷ್ಟಿಗೆ ಬಿದ್ದಿಲ್ಲ. ಆತ ರೆಸ್ಟೋರೆಂಟ್ ನಲ್ಲಿ ಕೆಲಸ ಮಾಡುತ್ತ ಹೊಸ ಜೀವನ ನಡೆಸುತ್ತಿದ್ದಾನೆ ಎಂದು ಮಾಹಿತಿ ನೀಡಿರುವ ಎನ್ ಜಿಒ ಅಧಿಕಾರಿ ಆತನ ಸುರಕ್ಷತೆಯ ದೃಷ್ಟಿಯಿಂದಾಗಿ ಬೇರೆ ಯಾವುದೇ ವಿವರಣೆ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ನಿರ್ಭಯಾ ಪ್ರಕರಣದಲ್ಲಿ ಬಾಲಾಪರಾಧಿ 3 ವರ್ಷ ಜೈಲುಶಿಕ್ಷೆ ಅನುಭವಿಸಿ ಬಿಡುಗಡೆಯಾದ ನಂತರ ದಕ್ಷಿಣ ಭಾರತದ ಡಾಬಾವೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ. 2015 ಡಿಸೆಂಬರ್ 15ರಂದು ಬಿಡುಗಡೆಗೊಂಡ ಬಳಿಕ ಎನ್ ಜಿಒ ಆತನನ್ನು ಕೆಲವು ದಿನಗಳ ಕಾಲ ರಹಸ್ಯವಾಗಿ ಇಟ್ಟುಕೊಂಡಿತ್ತು. ಆ ನಂತರ ಬಾಲಪರಾಧಿಯನ್ನು ದಕ್ಷಿಣ ಭಾರತದತ್ತ ಕಳುಹಿಸಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.

ಆದರೆ ಬಹುತೇಕರಿಗೆ ಆತನ ಹಿನ್ನೆಲೆ ಗೊತ್ತಿಲ್ಲ. ಆತ ದೆಹಲಿಯಿಂದ 240 ಕಿಮೀ ದೂರದಲ್ಲಿನ ಗ್ರಾಮದಲ್ಲಿರುವ ಮನೆ ಬಿಟ್ಟು ಕೆಲಸಕ್ಕೆ ಬಂದಾಗ 11 ವರ್ಷದವನಾಗಿದ್ದನಂತೆ. ಅನಾರೋಗ್ಯ ಪೀಡಿತ ತಾಯಿ, ಸಹೋದರರು, ಹಾಸಿಗೆ ಹಿಡಿದಿದ್ದ ತಂದೆ ಸೇರಿದಂತೆ ಕುಟುಂಬದ 6 ಮಂದಿ ಸದಸ್ಯರನ್ನು ಆತನ ಹಿರಿಯ ಅಕ್ಕ ದುಡಿದು ಸಾಕಬೇಕಾದ ಅನಿವಾರ್ಯತೆ ಇತ್ತು. ಈಗಲೂ ಆ ಕುಟುಂಬ ಅದೇ ಹಳ್ಳಿಯಲ್ಲಿ ವಾಸಿಸುತ್ತಿದೆ ಎಂದು ಅಧಿಕಾರಿ ವಿವರಿಸಿದ್ದಾರೆ. ಏತನ್ಮಧ್ಯೆ ಈತನ ಮೇಲೆ ಗುಪ್ತಚರ ಇಲಾಖೆ ಈಗಲೂ ತೀವ್ರ ನಿಗಾ ಇರಿಸಿರುವುದಾಗಿ ವರದಿ ಹೇಳಿದೆ.

ಟಾಪ್ ನ್ಯೂಸ್

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

5-kalburgi

PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ

4-thekkatte

Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್‌

Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್‌

police crime

Sandeshkhali ಪ್ರಕರಣಕ್ಕೆ ದಿಢೀರ್‌ ತಿರುವು : ಇಬ್ಬರು ಸಂತ್ರಸ್ತೆಯರಿಂದ ದೂರು ವಾಪಸ್‌!

1-wqewqeqeqw

BJP ನಾಯಕಿ ವಿವಾದ: ಒವೈಸಿಗೆ 15 ನಿಮಿಷ ಬೇಕು,ನಮಗಾದ್ರೆ 15 ಸೆಕೆಂಡ್‌

bjp-congress

Hindu ಸಂಖ್ಯೆ ಕುಸಿತ: ಕೈ-ಕಮಲ ವಾಕ್ಸಮರ!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

Kalaburagi; ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.