ಜ್ಯೋತಿರಾದಿತ್ಯ ರಾಜೀನಾಮೆ ಪಕ್ಷಕ್ಕೆ ದೊಡ್ಡ ಆಘಾತ: ಪೃಥ್ವಿರಾಜ್‌ ಚವಾಣ್‌


Team Udayavani, Mar 10, 2020, 6:36 PM IST

ಜ್ಯೋತಿರಾದಿತ್ಯ ರಾಜೀನಾಮೆ ಪಕ್ಷಕ್ಕೆ ದೊಡ್ಡ ಆಘಾತ: ಪೃಥ್ವಿರಾಜ್‌ ಚವಾಣ್‌

ಮುಂಬಯಿ:ಯುವ ಕಾಂಗ್ರೆಸ್‌ ನಾಯಕ ಜ್ಯೋತಿರಾದಿತ್ಯ ಶಿಂಧೆ ರಾಜೀನಾಮೆ ಪಕ್ಷಕ್ಕೆ ದೊಡ್ಡ ಹೊಡೆತವಾಗಿದೆ. ಅದು ಪಕ್ಷಕ್ಕೆ ಆಘಾತದ ಸಂಗಂತಿ. ಇದನ್ನು ಹೇಗೆ ತಡೆಯಬಹುದು ಎಂದು ನನಗೆ ತಿಳಿದಿಲ್ಲ ಎಂದು ಕಾಂಗ್ರೆಸ್‌ ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್‌ ಚವಾಣ್‌ ಹೇಳಿದ್ದಾರೆ.

ಲೋಕಸಭೆಯಲ್ಲಿಯ ಸೋಲು, ಮುಖ್ಯಮಂತ್ರಿ ಹು¨ªೆಯಿಂದ ವಂಚನೆ ಮತ್ತು ಪಕ್ಷದ ವತಿಯಿಂದ ಯಾವುದೇ ದೊಡ್ಡ ಜವಾಬ್ದಾರಿ ನೀಡದ ಕಾರಣ ಜ್ಯೋತಿರಾದಿತ್ಯ ಶಿಂಧೆ ಕಳೆದ ಹಲವು ದಿನಗಳಿಂದ ನಿರಾಶೆಗೊಂಡಿದ್ದರು. ಈ ಮಧ್ಯೆ, ಅವರು ತಮ್ಮ ಟ್ವಿಟರ್‌ ಖಾತೆಯಿಂದ ಕಾಂಗ್ರೆಸ್‌ ಚಿಹ್ನೆಯನ್ನು ತೆಗೆದುಹಾಕಿ ಅಸಮಾಧಾನದ ಸಂಕೇತವನ್ನು ನೀಡಿದರು ಅನಂತರ ಯಾವುದೇ ಪ್ರಯೋಜನವಾಗದ ಕಾರಣ ಸೋಮವಾರ ಶಿಂಧೆ ಅವರು, ತಮ್ಮ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆಯನ್ನು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ನೀಡಿದರು. ಶಿಂಧೆ ಅವರಂತ ನಾಯಕರು ಪಕ್ಷವನ್ನು ತೊರೆದಿದ್ದು, ಕಾಂಗ್ರೆಸ್‌ನಲ್ಲಿ ಚಿಂತೆಯ ವಾತಾವರಣ ಸೃಷ್ಟಿಯಾಗಿದೆ.

ಪೃಥ್ವಿರಾಜ್‌ ಚವಾಣ್‌ ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಶಿಂಧೆ ಅವರ ರಾಜೀನಾಮೆಗೆ ಕಳವಳ ವ್ಯಕ್ತಪಡಿಸಿದರು. ‘ಶಿಂಧೆ ಅವರ ಮನದಲ್ಲಿ ಕಳೆದ ಹಲವಾರು ದಿನಗಳಿಂದ ಅಸಮಾಧಾನದ ವಾತಾವರಣ ನಿರ್ಮಾಣವಾಗುತ್ತಿದೆ. ಅವರು ಮಧ್ಯಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಲು ಬಯಸಿದ್ದರು. ಆದರೆ, ಅವರಿಗೆ ಆ ಅವಕಾಶ ಸಿಗಲಿಲ್ಲ. ಲೋಕಸಭೆಯಲ್ಲಿನ ಸೋಲಿನಿಂದ ಅವರು ತೀವ್ರ ನಿರಾಶೆಗೊಂಡರು. ಅವರ ದಿಲ್ಲಿಯೊಂದಿಗಿನ ಸಂಬಂಧ ಮುರಿಯಿತು. ಅವರು ರಾಜ್ಯಸಭೆಗೆ ಹೋಗಲು ಬಯಸಿದ್ದರು. ಆದರೆ, ಅದೂ ಪೂರ್ಣಗೊಂಡಿಲ್ಲ. ಆದ್ದರಿಂದ ಅವರು ಬೇರೆ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಅಶೋಕ್‌ ಚವಾಣ್‌ ಹೇಳಿದ್ದಾರೆ.

ಶಿಂಧೆ ಅವರ ಸಂಪೂರ್ಣ ಕುಟುಂಬ ಬಿಜೆಪಿಯಲ್ಲಿದ್ದರೂ, ಅವರ ತಂದೆ ಮಾಧವರಾವ್‌ ಮತ್ತು ಜ್ಯೋತಿರಾದಿತ್ಯ ಸ್ವತಃ ಕಾಂಗ್ರೆಸ್‌ಗೆ ನಿಷ್ಠರಾಗಿದ್ದರು. ಹಲವು ವರ್ಷಗಳಿಂದ ಪಕ್ಷದಲ್ಲಿ ಸಕ್ರಿಯರಾಗಿದ್ದಾರೆ. ಅವರು ಬದ್ಧ ನಾಯಕ.ಪಕ್ಷವು ಅವರಿಗೆ ಯಾವುದೇ ಮಹತ್ವದ ನೀಡದಿದ್ದಾಗ ಅಸಮಾದಾನಗೊಂಡಿರುವುದರಲ್ಲಿ ಸಂದೇಹವಿಲ್ಲ ಎಂದು ಚವಾಣ್‌ ಹೇಳಿದ್ದಾರೆ.

ಜ್ಯೋತಿರಾದಿತ್ಯ ಅವರಿಗೆ ಕಾಂಗ್ರೆಸ್‌ನಲ್ಲಿ ಯಾವುದೇ ಸ್ಥಾನಮಾನ ದೊರೆಯಲಿಲ್ಲ. ಅವರಲ್ಲದೆ ಹೆಚ್ಚಿನವರಿಗೆ ಪಕ್ಷದ ಸಂಘಟನೆಯಲ್ಲಿ ಯಾವುದೇ ಜವಾಬ್ದಾರಿ ದೊರೆಯಲಿಲ್ಲ. ಶಿಂಧೆ ಅವರ ಬೆಂಬಲವಿಲ್ಲದೆ ಮಧ್ಯಪ್ರದೇಶದಲ್ಲಿ ಕಮಲ್‌ ನಾಥ್‌ ಮುಖ್ಯಮಂತ್ರಿಯಾಗಿರುವುದು ಸುಲಭವಾಗಿಲ್ಲ. ಇದನ್ನು ಪರಿಗಣಿಸಿ ಅವರು ಬಿಜೆಪಿಗೆ ಸೇರಲು ನಿರ್ಧರಿಸಿರಬಹುದು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅಥವಾ ಅಮಿತ್‌ ಶಾ ಅವರು ಶಿಂಧೆ ಅವರಿಗೆ ಯಾವ ಭರವಸೆ ನೀಡುತ್ತಾರೆ, ಅದು ಎಲ್ಲವೂ ಅವಲಂಬಿತವಾಗಿರುತ್ತದೆ ಎಂದು ಚವಾಣ್‌ ಹೇಳಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.