ಕಾರು ಅಪಘಾತ: ವೈರಲ್ ಹಾಡು ‘ಕಚಾ ಬಾದಮ್’ ಸಿಂಗರ್ ಭುವನ್ ಬಡ್ಯಾಕರ್ ಆಸ್ಪತ್ರೆಗೆ ದಾಖಲು
Team Udayavani, Mar 1, 2022, 8:35 AM IST
ಕೋಲ್ಕತ್ತಾ: ಇತ್ತೀಚೆಗೆ ವೈರಲ್ ಆದ ಕಚಾ ಬಾದಮ್ ಹಾಡಿನ ಗಾಯಕ ಭುವನ್ ಬಡ್ಯಾಕರ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಫೆಬ್ರವರಿ 28 ರಂದು ಭುವನ್ ಬಡ್ಯಾಕರ್ ಅವರು ಕಾರು ಅಪಘಾತಕ್ಕೀಡಾಗಿದ್ದರು.
ಭುವನ್ ಅವರು ಇತ್ತೀಚೆಗೆ ಖರೀದಿಸಿದ ತಮ್ಮ ಸೆಕೆಂಡ್ ಹ್ಯಾಂಡ್ ಕಾರನ್ನು ಹೇಗೆ ಓಡಿಸಬೇಕೆಂದು ಕಲಿಯುತ್ತಿದ್ದಾಗ ಈ ಘಟನೆ ನಡೆದಿದೆ. ಎದೆನೋವು ಕಾಣಿಸಿಕೊಂಡಿದ್ದು, ಸದ್ಯ ಅವರನ್ನು ಸೂರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭುವನ್ ಬಡ್ಯಾಕರ್ ಅವರ ಕಚಾ ಬದಮ್ ಹಾಡು ವೈರಲ್ ಆದ ನಂತರ ರಾತ್ರೋರಾತ್ರಿ ಇಂಟರ್ನೆಟ್ ಸೆನ್ಸೇಷನ್ ಆದರು. ಪಶ್ಚಿಮ ಬಂಬಾಳದ ಬೀರ್ಭುಮ್ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಕಡಲೆಕಾಯಿ ಮಾರಾಟ ಮಾಡುವ ಮೂಲಕ ಖರೀದಿದಾರರನ್ನು ಆಕರ್ಷಿಸಲು ಬಡ್ಯಾಕರ್ ಕಚಾ ಬಾದಮ್ ಹಾಡನ್ನು ರಚಿಸಿದ್ದರು. ಅವರ ಹಾಡನ್ನು ನಂತರ ರೀಮಿಕ್ಸ್ ಮಾಡಿ, ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಲಾಗಿದ್ದು, ಅದು 50 ಮಿಲಿಯನ್ ವೀಕ್ಷಣೆಗಳನ್ನು ಪಡೆದಿದೆ.
ಇದನ್ನೂ ಓದಿ:ನಿರ್ಬಂಧದ ಪ್ರಹಾರ; ರಷ್ಯಾ ವಿಲವಿಲ; ದಿನವಿಡೀ ಮುಚ್ಚಿದ ಸ್ಟಾಕ್ಎಕ್ಸ್ಚೇಂಜ್
ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಲಕ್ಷ್ಮೀನಾರಾಯಣಪುರ ಪಂಚಾಯತ್ನ ಕುರಲ್ಜುರಿ ಗ್ರಾಮದ ದುಬ್ರಾಜ್ಪುರ ಬ್ಲಾಕ್ನ ನಿವಾಸಿಯಾದ ಭುವನ್ ಅವರ ಐವರು ಕುಟುಂಬದಲ್ಲಿ ಅವರ ಪತ್ನಿ, ಇಬ್ಬರು ಪುತ್ರರು ಮತ್ತು ಒಬ್ಬ ಪುತ್ರಿ ಇದ್ದಾರೆ. ಅವರು ಸಣ್ಣ ಟ್ರಿಂಕೆಟ್ಗಳು ಮತ್ತು ಮುರಿದ ಗೃಹೋಪಯೋಗಿ ವಸ್ತುಗಳನ್ನು ವಿನಿಮಯವಾಗಿ ಕಡಲೆಕಾಯಿಯನ್ನು ಮಾರಾಟ ಮಾಡುತ್ತಾರೆ. ಕಡಲೆಕಾಯಿ ಮಾರಲು ದೂರದ ಹಳ್ಳಿಗಳಿಗೆ ಸೈಕಲ್ ತುಳಿಯುತ್ತಿದ್ದರು. ಪ್ರತಿ ದಿನ 3- 4 ಕೆಜಿ ಕಡಲೆಕಾಯಿ ಮಾರಾಟ ಮಾಡಿ 200-250 ರೂ. ಗಳಿಸುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ