ಕಮಲ್ನಾಥ್ ಎಐಸಿಸಿ ಅಧ್ಯಕ್ಷ?
Team Udayavani, Jul 16, 2021, 6:50 AM IST
ಹೊಸದಿಲ್ಲಿ: ಗಾಂಧಿ ಕುಟುಂಬದ ನಂಬಿಕಸ್ತ, ಕಾಂಗ್ರೆಸ್ ಹಿರಿಯ ನಾಯಕ ಕಮಲ್ನಾಥ್ ಅವರಿಗೆ ಎಐಸಿಸಿ ಅಧ್ಯಕ್ಷ ಗಾದಿ ಒಲಿಯುವುದೇ? ಇಂಥದ್ದೊಂದು ಮಾತು ದಿಲ್ಲಿ ರಾಜಕಾರಣದ ಪಡಸಾಲೆಯಲ್ಲಿ ಓಡಾಡುತ್ತಿದೆ. ಇದಕ್ಕೆ ಪೂರಕವೆಂಬಂತೆ, ಕಮಲ್ನಾಥ್ ಅವರು ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು ಕುತೂಹಲಕ್ಕೆಡೆ ಮಾಡಿಕೊಟ್ಟಿದೆ.
ಎಲ್ಲವೂ ಅಂದುಕೊಂಡಂತಾಗಿದ್ದರೆ ಇಷ್ಟೊತ್ತಿಗೆ ಎಐಸಿಸಿ ಅಧ್ಯಕ್ಷ ಗಾದಿಗೆ ಆಂತರಿಕ ಚುನಾವಣೆ ನಡೆಯಬೇಕಿತ್ತು. ಆದರೆ ಕೊರೊನಾ ಕಾರಣದಿಂದಾಗಿ ಈ ಚುನಾವಣೆ ನಡೆದಿಲ್ಲ. ಆಗಸ್ಟ್ನಲ್ಲಿ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಅತ್ತ ರಾಹುಲ್ ಗಾಂಧಿ ಅವರು ಮತ್ತೆ ಅಧ್ಯಕ್ಷ ಗಾದಿ ವಹಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದು, ಹೀಗಾಗಿ, ಗಾಂಧಿ ಕುಟುಂಬಕ್ಕೆ ತೀರಾ ಆಪ್ತರೆನಿಸಿರುವ ಕಮಲ್ನಾಥ್ರನ್ನೇ ನೇಮಕ ಮಾಡುವ ಸಂಭವವಿದೆ ಎನ್ನಲಾಗುತ್ತಿದೆ.
ಒಂದು ವೇಳೆ ಎಐಸಿಸಿ ಅಧ್ಯಕ್ಷರಾಗದಿದ್ದರೆ, ಕಾರ್ಯಾಧ್ಯಕ್ಷ ಸ್ಥಾನ ನೀಡುವ ಸಾಧ್ಯತೆಗಳೂ ಇವೆೆ. ಕಮಲ್ನಾಥ್ ಅವರ ನೇಮಕದ ಚಿಂತನೆ ಬೆನ್ನ ಹಿಂದೆ ಪಕ್ಷದಲ್ಲಿ ಎದ್ದಿರುವ ಒಡಕನ್ನು ನಿವಾರಿಸುವ ತಂತ್ರಗಾರಿಕೆ ಇದೆ. ಕಮಲ್ನಾಥ್ ಅವರು, ಕಾಂಗ್ರೆಸ್ನಲ್ಲಿ ಬಂಡಾಯಗಾರರೆಂದು ಗುರುತಿಸಿಕೊಂಡಿರುವ ಜಿ23 ನಾಯಕರ ಜತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಹೀಗಾಗಿ ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ಸಾಮರ್ಥ್ಯ ಕಮಲ್ನಾಥ್ಗಿದೆ ಎಂಬುದು ಮೂಲಗಳ ಹೇಳಿಕೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ