ಮೊದಲು ಕಂಗನಾ ಮಹಾರಾಷ್ಟ್ರಿಗರ ಕ್ಷಮೆ ಕೇಳಲಿ, ನಂತರ ನಾನು ಯೋಚಿಸುತ್ತೇನೆ: ಸಂಜಯ್ ರಾವತ್
Team Udayavani, Sep 6, 2020, 1:36 PM IST
ಮುಂಬೈ: ಮುಂಬೈಯನ್ನು ಮಿನಿ ಪಾಕಿಸ್ತಾನ ಎಂದು ಹೇಳಿರುವ ನಟಿ ಕಂಗನಾ ರಣಾವತ್ ಮಹಾರಾಷ್ಟ್ರದ ಜನತೆಯ ಮುಂದೆ ಕ್ಷಮೆಯಾಚಿಸಿದರೆ ನಾನು ಕೂಡ ಆಕೆಯ ಕ್ಷಮೆ ಕೇಳುತ್ತೇನೆ ಎಂದು ಶಿವಸೇನೆ ಪಕ್ಷದ ನಾಯಕ ಸಂಜಯ್ ರಾವತ್ ಹೇಳಿಕೆ ನೀಡಿದ್ದಾರೆ.
ತಾವು ಕಂಗನಾ ಬಳಿ ಕ್ಷಮೆ ಕೇಳುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ರಾವತ್, ಕಂಗನಾ ಮಹಾರಾಷ್ಟ್ರಿಗರ ಮುಂದೆ ಕ್ಷಮೆ ಕೇಳಿದರೆ ನಾನು ಮತ್ತೆ ಕ್ಷಮೆ ಕೇಳುವ ಬಗ್ಗೆ ಯೋಚಿಸುತ್ತೇನೆ. ಆಕೆ ಮುಂಬೈಯನ್ನು ಮಿನಿ ಪಾಕಿಸ್ತಾನ ಎಂದು ಕರೆದಿದ್ದಾರೆ. ಅಹಮದಾಬಾದನ್ನು ಕೂಡ ಹೀಗೆ ಹೇಳಲು ಆಕೆಗೆ ಧೈರ್ಯವಿದೆಯೇ ಎಂದು ಪ್ರಶ್ನಿಸಿದ್ದಾರೆ.
ಕಂಗನಾ ಇತ್ತೀಚೆಗೆ ಟ್ವಿಟ್ಟರ್ ನಲ್ಲಿ, ಸಂಜಯ್ ರಾವತ್ ಅವರು ನನಗೆ ಬಹಿರಂಗವಾಗಿ ಬೆದರಿಕೆ ಹಾಕಿದ್ದು ಮುಂಬೈಗೆ ಬರಬೇಡಿ ಎಂದು ಹೇಳಿದ್ದಾರೆ. ಮುಂಬೈ ನಗರಿಯಲ್ಲಿ ಸ್ವಾತಂತ್ರ್ಯ ಹತ್ತಿಕ್ಕಲು ನೋಡಿದ ನಂತರ ಇದೀಗ ಮುಕ್ತವಾಗಿ ಬೆದರಿಕೆ ಹಾಕುತ್ತಿದ್ದಾರೆ. ಮುಂಬೈ ಪಾಕ್ ಆಕ್ರಮಿತ ಕಾಶ್ಮೀರದಂತೆ ಅನಿಸುತ್ತಿದೆ ಎಂದಿದ್ದರು.
ಸುಶಾಂತ್ ಸಿಂಗ್ ರಜಪೂತ್ ಸಾವಿನ ನಂತರ ನಾನು ಮುಂಬೈಯ ಡ್ರಗ್ ಮಾಫಿಯಾ, ಚಲನ ಚಿತ್ರ ಮಾಫಿಯಾ ದಂಧೆ ಬಗ್ಗೆ ಮಾತನಾಡಿದ್ದೇನೆ, ನನಗೆ ಮುಂಬೈ ಪೊಲೀಸರ ಬಗ್ಗೆ ನಂಬಿಕೆಯಿಲ್ಲ. ತನ್ನನ್ನು ಸಾಯಿಸಲು ನೋಡುತ್ತಿದ್ದಾರೆ. ಸುಶಾಂತ್ ಸಿಂಗ್ ಹೇಳಿದ್ದರೂ ಪೊಲೀಸರು ಅವರ ಮಾತನ್ನು ಗಂಭೀರವಾಗಿ ತೆಗೆದುಕೊಳ್ಳಲಿಲ್ಲ. ನನಗೆ ಅಸುರಕ್ಷತೆ ಎನಿಸಿದರೆ ಅದರರ್ಥ ಬಾಲಿವುಡ್, ಮುಂಬೈಯನ್ನು ದ್ವೇಷ ಮಾಡುತ್ತೇನೆಂದೇ ಎಂದು ಕಂಗನಾ ಟ್ವೀಟ್ ನಲ್ಲಿ ಕೇಳಿದ್ದರು.
ಇದಕ್ಕೆ ಉತ್ತರಿಸಿರುವ ಸಂಜಯ್ ರಾವತ್, ಮುಂಬೈ ಕಂಗನಾಗೆ ಸಾಕಷ್ಟು ಹೆಸರು, ಹಣ, ಕೀರ್ತಿಯನ್ನು ನೀಡಿದೆ, ಇಂದು ಮುಂಬೈ ಮತ್ತು ಮುಂಬೈ ಪೊಲೀಸರ ಹೆಸರು ಕೆಡಿಸಲು ಅವರು ನೋಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ