ಕಂಗನಾಗೆ ದೆಹಲಿ ವಿಧಾನಸಭೆ ಸಮಿತಿ ಸಮನ್ಸ್
Team Udayavani, Nov 25, 2021, 9:30 PM IST
ನವದೆಹಲಿ: ಸಿಖ್ ಧರ್ಮದವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಬಾಲಿವುಡ್ ನಟಿ ಕಂಗನಾ ರಣಾವತ್ಗೆ ದೆಹಲಿ ವಿಧಾನಸಭೆಯ ಶಾಂತಿ ಮತ್ತು ಸೌಹಾರ್ದತೆ ಸಮಿತಿ ಸಮನ್ಸ್ ನೀಡಿದೆ.
ಡಿ.6ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. “ಇಂದಿರಾಗಾಂಧಿಯವರು ಖಲಿಸ್ತಾನಿಗಳನ್ನು ಸೊಳ್ಳೆಗಳಂತೆ ಹೊಸೆದು ಹಾಕಿದ್ದರು’ ಎಂದು ನಟಿ ಇತ್ತೀಚೆಗೆ ಇನ್ಸ್ಟಾಗ್ರಾಂನಲ್ಲಿ ಸಂದೇಶ ಪೋಸ್ಟ್ ಮಾಡಿದ್ದರು. ಇದು ಖಲಿಸ್ತಾನಿಗಳ ಬಗ್ಗೆ ಹೇಳಿರುವ ಹೇಳಿಕೆಯಾಗಿದ್ದು, ನಟಿಯ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಅನೇಕ ದೂರುಗಳು ಬಂದಿರುವುದಾಗಿ ಸಮಿತಿ ತಿಳಿಸಿದೆ.
ಇದೇ ವಿಚಾರದಲ್ಲಿ ಮಹಾರಾಷ್ಟ್ರದ ಮುಂಬೈನಲ್ಲಿ ನಟಿಯ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದೆ.