ನಟಿ ಕಂಗನಾಗೆ ವೈ ಪ್ಲಸ್ ಭದ್ರತೆ ಕೊಟ್ಟಿದ್ಯಾಕೆ? ಕೇಂದ್ರ ಸಚಿವ ರೆಡ್ಡಿ ಸ್ಪಷ್ಟನೆಯಲ್ಲೇನಿದೆ
ಶಸ್ತ್ರ ಸಜ್ಜಿತ ಹತ್ತು ಮಂದಿ ಕಮಾಂಡೋಗಳು ನಿರಂತರವಾಗಿ ಭದ್ರತೆ ನೀಡಲಿದ್ದಾರೆ.
Team Udayavani, Sep 12, 2020, 2:38 PM IST
ಹೈದರಾಬಾದ್:ಬಾಲಿವುಡ್ ನಟಿ ಕಂಗನಾ ರನೌತ್ ಗೆ ಕೇಂದ್ರ ಸರ್ಕಾರ ವೈ ಪ್ಲಸ್ ಕಮಾಂಡೋ ಭದ್ರತೆಯನ್ನು ನೀಡಿದ್ದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪರ, ವಿರೋಧ ಚರ್ಚೆ ನಡೆದಿತ್ತು.
ಏತನ್ಮಧ್ಯೆ ತನ್ನ ಮಗಳಿಗೆ ಸೂಕ್ತ ಭದ್ರತೆ ನೀಡಬೇಕೆಂದು ಕಂಗನಾ ತಂದೆ ಹಿಮಾಚಲ್ ಪ್ರದೇಶ ಸರ್ಕಾರಕ್ಕೆ ಮನವಿ ಮಾಡಿಕೊಂಡ ನಂತರ ವೈ ಪ್ಲಸ್ ಭದ್ರತೆ ನೀಡಲಾಗಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಜಿ.ಕೃಷ್ಣ ರೆಡ್ಡಿ ತಿಳಿಸಿದ್ದಾರೆ.
ಸುಶಾಂತ್ ಸಿಂಗ್ ಸಾವು ಹಾಗೂ ಡ್ರಗ್ಸ್ ಜಾಲದ ವಿಚಾರದಲ್ಲಿ ನಟಿ ಕಂಗನಾ ಸಾಮಾಜಿಕ ಜಾಲತಾಣದಲ್ಲಿ ಸ್ಟಾರ್ ನಟರು ಹಾಗೂ ಮಹಾರಾಷ್ಟ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರಿಂದ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದು, ಈ ಹಿನ್ನೆಲೆಯಲ್ಲಿ ಕಂಗನಾ ತಂದೆ ರಕ್ಷಣೆ ನೀಡುವಂತೆ ಮನವಿ ಮಾಡಿಕೊಂಡಿರುವುದಾಗಿ ವಿವರಿಸಿದ್ದಾರೆ.
ಇದನ್ನೂ ಓದಿ: ಹಣಕ್ಕೋಸ್ಕರ ಹತ್ಯೆ ಅನುಮಾನ, ಅರ್ಚಕರ ಹತ್ಯೆ ಹಿಂದೆ ಇಸ್ಲಾಮಿಕ್ ಜಿಹಾದ್: ಮುತಾಲಿಕ್
ನಟಿ ಕಂಗನಾ ತಂದೆ ಹಿಮಾಚಲ್ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು. ಅಲ್ಲದೇ ಖುದ್ದು ಮುಖ್ಯಮಂತ್ರಿಯನ್ನು ಭೇಟಿಯಾಗಿ ತನ್ನ ಮಗಳಿಗೆ ಕಿರುಕುಳ, ಬೆದರಿಕೆ ಹಾಕುತ್ತಿರುವ ಬಗ್ಗೆ ವಿವರಿಸಿ, ಮನವಿ ನೀಡಿದ್ದರು. ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಈ ಬಗ್ಗೆ ಕೇಂದ್ರಕ್ಕೆ ಮಾಹಿತಿ ನೀಡಿರುವುದಾಗಿ ರೆಡ್ಡಿ ತಿಳಿಸಿದ್ದಾರೆ.
ಮುಂಬೈ ನಗರಿಯನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿ ಕಂಗನಾ ಹೇಳಿಕೆ ನೀಡಿದ ನಂತರ ಶಿವಸೇನಾದ ಹಲವು ಮುಖಂಡರು ಕಂಗನಾಗೆ ಬೆದರಿಕೆಯೊಡ್ಡಿದ ನಂತರ ಭದ್ರತೆ ನೀಡುವ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ಹೇಳಿದರು.
ಇದನ್ನೂ ಓದಿ: ಕಳ್ಳರನ್ನು ಹಿಡಿದು ಪೊಲೀಸ್ ಠಾಣೆಗೆ ತಂದರೂ ಬಂಧಿಸದ ಪೊಲೀಸರು!
ಬೆದರಿಕೆ ಹಿನ್ನೆಲೆಯಲ್ಲಿ ಕಂಗನಾಗೆ ವೈ ಪ್ಲಸ್ ಭದ್ರತೆ ನೀಡಲಾಗಿದ್ದು, ಶಸ್ತ್ರ ಸಜ್ಜಿತ ಹತ್ತು ಮಂದಿ ಕಮಾಂಡೋಗಳು ನಿರಂತರವಾಗಿ ಭದ್ರತೆ ನೀಡಲಿದ್ದಾರೆ. ನಟಿ ಕಂಗನಾ ನೀಡಿದ್ದ ಕೆಲವು ಪ್ರಚೋದನಕಾರಿ ಹೇಳಿಕೆಗಳು ಶಿವಸೇನಾ ಮತ್ತು ಕಂಗನಾ ನಡುವೆ ವಾಕ್ಸಮರಕ್ಕೆ ಎಡೆ ಮಾಡಿಕೊಟ್ಟಿತ್ತು.
ಸೆಪ್ಟೆಂಬರ್ 9ರಂದು ಬಾಂದ್ರಾದ ಪಾಲಿ ಹಿಲ್ ನಲ್ಲಿರುವ ಕಚೇರಿಯನ್ನು ಬಿಎಂಸಿ ಭಾಗಶಃ ಧ್ವಂಸ ಮಾಡಿದ್ದು, ಈ ಕಾರ್ಯಾಚರಣೆ ವಿರುದ್ಧ ಕಂಗಾನಾ ಕೋರ್ಟ್ ಮೆಟ್ಟಿಲೇರಿದ್ದು, ತಾತ್ಕಾಲಿಕ ತಡೆ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ