ವಾರಾಣಸಿಯಲ್ಲಿ ಕನ್ನಡ ಡಿಂಡಿಮ
Team Udayavani, Nov 8, 2019, 6:00 AM IST
ವಾರಾಣಸಿ: ಉತ್ತರ ಪ್ರದೇಶದ ವಾರಾಣಸಿಗೆ ಪ್ರವಾಸ ಹೋದಾಗ ರೈಲು ನಿಲ್ದಾಣಗಳಲ್ಲಿ ಘೋಷಿಸಲಾಗುವ ಹಿಂದಿ ಭಾಷೆ ನಮಗೆ ಅರ್ಥವಾಗುವುದಿಲ್ಲ ಎಂಬ ಕಿರಿಕಿರಿ ಇನ್ನಿಲ್ಲ. ಏಕೆಂದರೆ ಇನ್ನು ಮುಂದೆ ಇಲ್ಲಿನ ರೈಲು ನಿಲ್ದಾಣದಲ್ಲಿ ಕನ್ನಡ ಭಾಷೆಯಲ್ಲೂ ಘೋಷಣೆಗಳನ್ನು ಆಲಿಸಬಹುದು.
ಪ್ರಧಾನಿ ನರೇಂದ್ರ ಮೋದಿ ಅವರ ಲೋಕಸಭಾ ಕ್ಷೇತ್ರವಾದ ವಾರಾಣಸಿಗೆ ದಕ್ಷಿಣ ಭಾರತದಿಂದ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಿರುವ ಕಾರಣ ಇಂಥದ್ದೊಂದು ನಿರ್ಧಾರ ಕೈಗೊಳ್ಳಲಾಗಿದೆ. ಕನ್ನಡ ಮಾತ್ರವಲ್ಲದೆ, ದಕ್ಷಿಣದ ಭಾಷೆಗಳಾದ ತಮಿಳು, ತೆಲುಗು ಹಾಗೂ ಮಲಯಾಳದಲ್ಲೂ ಘೋಷಣೆಗಳನ್ನು ಪ್ರಕಟಿಸಲು ನಿರ್ಧರಿಸಲಾಗಿದೆ. ಹಿಂದಿಯೇತರ ಭಾಷೆ ಮಾತನಾಡುವ ಜನರಿಗೆ ಸುಲಭವಾಗಲೆಂದು ರೈಲ್ವೇ ಇಲಾಖೆ ಈ ಕ್ರಮ ಕೈಗೊಂಡಿದೆ.
ವಾರಾಣಸಿಗೆ ಭೇಟಿ ನೀಡುವ ಪ್ರವಾಸಿಗರ ಪೈಕಿ ಹಿಂದಿ ಯೇತರ ರಾಜ್ಯಗಳ ಜನರೇ ಹೆಚ್ಚು. ಈ ಪೈಕಿ ಬಹುತೇಕರಿಗೆ ಹಿಂದಿ ಅರ್ಥವಾಗುವುದಿಲ್ಲ. ರೈಲು ನಿಲ್ದಾಣಗಳಲ್ಲಿ ಹಿಂದಿ ಯಲ್ಲೇ ಘೋಷಣೆ ಮಾಡಲಾಗುವ ಕಾರಣ ಪ್ರವಾಸಿಗರು ಗೊಂದಲ ಕ್ಕೀಡಾಗುತ್ತಿದ್ದಾರೆ. ಹೀಗಾಗಿ ಅವರ ಅನುಕೂಲಕ್ಕಾಗಿ ಆರಂಭದಲ್ಲಿ 4 ಭಾಷೆಗಳಲ್ಲಿ ಘೋಷಣೆ ಮಾಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ವ್ಯವಸ್ಥೆಯನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಒಡಿಯಾ, ಮರಾಠಿ ಮತ್ತಿತರ ಭಾಷೆಗಳನ್ನು ಸೇರಿಸಲಾಗುವುದು ಎಂದು ಪ್ರಾದೇಶಿಕ ಕಂಟೋನ್ಮೆಂಟ್ ಸ್ಟೇಶನ್ನ ನಿರ್ದೇಶಕ ಆನಂದ್ ಮೋಹನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು