Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Team Udayavani, Apr 30, 2024, 9:05 AM IST
ಕಣ್ಣೂರು: ಕಾರು – ಲಾರಿ ನಡುವಿನ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದಾರುಣ ಘಟನೆ ಕಣ್ಣೂರು ಜಿಲ್ಲೆಯ ಚೆರುಕುನ್ನು ಸಮೀಪದ ಪುನ್ನಚೇರಿ ಎಂಬಲ್ಲಿ ಸೋಮವಾರ ರಾತ್ರಿ (ಏ.29 ರಂದು) ನಡೆದಿದೆ.
ಕಾರು ಚಲಾಯಿಸುತ್ತಿದ್ದ ಕಾಸರಗೋಡು ಕಾಳೀಚನಡುಕ್ಕಂನ ಸಾಸ್ತಂಪಾರದ ಕೆ.ಎನ್.ಪದ್ಮಕುಮಾರ್ (59), ಭೀಮಾನಡಿಯ ಚೂರಿಕಟ್ಟೆಯ ಸುಧಾಕರನ್ (52), ಸುಧಾಕರನ್ ಅವರ ಪತ್ನಿ ಅಜತಾ (35), ಅವರ ತಂದೆ ಕೊಜುಮ್ಮಲ್ ಕೃಷ್ಣನ್ (65) ಮತ್ತು ಅಜಿತಾ ಅವರ ಸಹೋದರ ಅಜಿತ್ ಅವರ ಮಗ ಆಕಾಶ್ (9) ಮೃತಪಟ್ಟಿದ್ದಾರೆ.
ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಬಾಲಕ ಆಕಾಶ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿರುವುದಾಗಿ ಪೊಲೀಸರು ಹೇಳಿದ್ದಾರೆ.
ಚೆರುಕುನ್ನು ಬಳಿಯ ಪುನ್ನಚೇರಿಯ ಪೆಟ್ರೋಲ್ ಪಂಪ್ ಬಳಿ ಈ ಅಪಘಾತ ಸಂಭವಿಸಿದೆ. ಹಿಂಬದಿಯಿಂದ ಬಂದ ಲಾರಿ ಕಾರಿಗೆ ಢಿಕ್ಕಿ ಹೊಡೆದಿದ್ದರಿಂದ ಕಾರು ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತ್ತಿದ್ದ ಮತ್ತೊಂದು ಲಾರಿಗೆ ಢಿಕ್ಕಿ ಹೊಡೆದು ಪಲ್ಟಿಯಾಗಿ ಈ ಘಟನೆ ಸಂಭವಿಸಿದೆ.
ಗ್ಯಾಸ್ ಸಿಲಿಂಡರ್ ತುಂಬಿದ ಲಾರಿ ಮಂಗಳೂರಿನಿಂದ ಬರುತ್ತಿತ್ತು. ಸುಧಾಕರನ್ ಮತ್ತು ಅವರ ಕುಟುಂಬ ಸದಸ್ಯರು ತಮ್ಮ ಮಗ ಸೌರವ್ನನ್ನು ಕೋಝಿಕ್ಕೋಡ್ನಲ್ಲಿರುವ ಶಿಕ್ಷಣ ಸಂಸ್ಥೆಗೆ ಸೇರಿಸಿದ ನಂತರ ಕಾಸರಗೋಡಿಗೆ ಹಿಂತಿರುಗುತ್ತಿದ್ದರು.
ಕಾರಿನೊಳಗೆ ಸಿಲುಕಿದ್ದವರನ್ನು ಕಾರಿನ ಗಾಜು ಒಡೆದು ಸ್ಥಳೀಯರು ಹೊರಗೆ ತೆಗೆಯಲು ಯತ್ನಿಸಿ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಪಘಾತ ಮಾಡಿದ ಲಾರಿಗಳ ಇಬ್ಬರು ಚಾಲಕರನ್ನು ಕನ್ನಪುರಂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್