ದೈಹಿಕ ಸಂಬಂಧಕ್ಕೆ ನಕಾರ; ಶಿಕ್ಷಕನಿಂದಲೇ 8ನೇ ತರಗತಿ ವಿದ್ಯಾರ್ಥಿನಿಯ ಹತ್ಯೆ!
Team Udayavani, Oct 26, 2019, 1:55 PM IST
ಲಕ್ನೋ: ದೈಹಿಕ ಸಂಬಂಧವನ್ನು ನಿರಾಕರಿಸಿದ್ದರಿಂದ ಎಂಟನೇ ತರಗತಿ ವಿದ್ಯಾರ್ಥಿನಿಯನ್ನು ಶಿಕ್ಷಕನೇ ಗುಂಡಿಟ್ಟು ಹತ್ಯೆಗೈದ ಘಟನೆ ಉತ್ತರಪ್ರದೇಶದ ದೆಹಾಟ್ ಜಿಲ್ಲೆಯ ಕಾನ್ಪುರದಲ್ಲಿ ನಡೆದಿದೆ.
ಶಾಲೆಯಿಂದ ಸಂಜೆ ಮನೆಗೆ ಹೋಗುತ್ತಿದ್ದ ವೇಳೆ ವಿದ್ಯಾರ್ಥಿನಿ ಮೇಲೆ ಶಿಕ್ಷಕನೇ ಮೂರು ಸುತ್ತು ಗುಂಡು ಹಾರಿಸಿದ್ದ. ಒಂದು ಗುಂಡು ಬಾಲಕಿಯ ಕುತ್ತಿಗೆಯನ್ನು ಸೀಳಿ ಹಾಕಿತ್ತು. ಇದರಿಂದ ಬಾಲಕಿ ರಕ್ತಸ್ರಾವದಿಂದ ನೆಲಕ್ಕೊರಗಿದ್ದಳು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಆಕೆ ಗುರುವಾರ ರಾತ್ರಿ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.
ಆರೋಪಿಯನ್ನು ಶಿಕ್ಷಕ ಶೈಲೇಂದ್ರ ರಾಜ್ ಪುತ್ ಎಂದು ಗುರುತಿಸಲಾಗಿದೆ. ದೀರ್ಘಕಾಲದಿಂದ ಶಿಕ್ಷಕ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದು, ಲೈಂಗಿಕ ಬಯಕೆ ಈಡೇರಿಸಲು ಒತ್ತಾಯಿಸುತ್ತಿದ್ದ. ಆದರೆ ವಿದ್ಯಾರ್ಥಿನಿ ಅದನ್ನು ನಿರಾಕರಿಸಿದ್ದಳು. ಅಲ್ಲದೇ ಈ ಬಗ್ಗೆ ದೂರು ನೀಡಿದ್ದರಿಂದ ಶಿಕ್ಷಕನನ್ನು ಮೂರು ತಿಂಗಳ ಕಾಲ ಶಾಲೆಯಿಂದ ಅಮಾನತುಗೊಳಿಸಿದ್ದರು.
ತನ್ನ ವಿರುದ್ಧ ದೂರು ನೀಡಿ ಅಮಾನತುಗೊಳಿಸಿದ್ದಕ್ಕೆ ಆಕ್ರೋಶಗೊಂಡಿದ್ದ ಶಿಕ್ಷಕ ವಿದ್ಯಾರ್ಥಿನಿಯನ್ನು ಗುಂಡಿಟ್ಟು ಹತ್ಯೆಗೈದಿದ್ದ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ರಸ್ತೆಯನ್ನು ತಡೆದು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು.
ಶಿಕ್ಷಕನ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದ್ದು, ತಲೆಮರೆಸಿಕೊಂಡಿರುವ ಶಿಕ್ಷಕನ ಪತ್ತೆಗೆ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ