ದೇಶಾದ್ಯಂತ ಕಾರ್ಗಿಲ್ ವಿಜಯ್ ದಿವಸ್ ಸಂಭ್ರಮ;ಹುತಾತ್ಮ ಯೋಧರಿಗೆ ಗೌರವ
Team Udayavani, Jul 26, 2017, 10:43 AM IST
ನವದೆಹಲಿ:ಪಾಕಿಸ್ತಾನದ ವಿರುದ್ಧ ಕಾರ್ಗಿಲ್ ಯುದ್ಧದಲ್ಲಿ ಭರ್ಜರಿ ಜಯಭೇರಿ ಸಾಧಿಸಿರುವ ಸ್ಮರಣಾರ್ಥವಾಗಿ ಬುಧವಾರ ದೇಶಾದ್ಯಂತ ಕಾರ್ಗಿಲ್ ವಿಜಯ್ ದಿವಸ್ ಅನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಹುತಾತ್ಮ ವೀರ ಯೋಧರನ್ನು ನೆನೆದು ಗೌರವ ಸಮರ್ಪಿಸಲಾಯಿತು.
ರಾಷ್ಟ್ರರಾಜಧಾನಿಯ ಇಂಡಿಯಾ ಗೇಟ್ ನಲ್ಲಿರುವ (ಅಮರ್ ಜವಾನ್ ಜ್ಯೋತಿ) ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ರಕ್ಷಣಾ ಸಚಿವ ಅರುಣ್ ಜೇಟ್ಲಿ, ಇಂಡಿಯನ್ ಆರ್ಮಿ ಮುಖ್ಯಸ್ಥ ಬಿಪಿನ್ ರಾವತ್, ಭಾರತೀಯ ವಾಯುಪಡೆಯ ಮುಖ್ಯಸ್ಥ ಮಾರ್ಷಲ್ ಬಿರೇಂದರ್ ಸಿಂಗ್ ಮತ್ತು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಸುನಿಲ್ ಲಾನ್ಬಾ ಗೌರವ ಅರ್ಪಿಸಿದರು.
1999ರ ಜುಲೈ 26ರಂದು ಭಾರತೀಯ ಸೇನಾಪಡೆ ಜಮ್ಮು ಕಾಶ್ಮೀರದ ಲಡಾಕ್ ಪ್ರಾಂತ್ಯ ಸೇರಿದಂತೆ ಹಿಮಾಲಯ ಪ್ರದೇಶದಲ್ಲಿ ಸುಮಾರು 60 ದಿನಗಳ ಕಾಲ ಪಾಕ್ ಸೇನೆಯ ವಿರುದ್ಧ ಹೋರಾಡಿ ಜಯಶಾಲಿಯಾಗಿತ್ತು. ಆ ನಿಟ್ಟಿನಲ್ಲಿ ಜುಲೈ 26ರಂದು ಕಾರ್ಗಿಲ್ ವಿಜಯ್ ದಿವಸ್ ಅನ್ನು ದೇಶಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ