ಗೋವಾದಲ್ಲಿ ಅಕ್ರಮ ಮೀನುಗಾರಿಕೆ: ಕರ್ನಾಟಕದ ಮೂರು ಮೀನುಗಾರಿಕಾ ಬೋಟ್ ವಶಕ್ಕೆ
Team Udayavani, Nov 15, 2022, 3:55 PM IST
ಪಣಜಿ: ಗೋವಾದ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಕರ್ನಾಟಕದ ಮೂರು ಮೀನುಗಾರಿಕಾ ಬೋಟ್ ಗಳನ್ನು ಗೋವಾದ ಮೀನುಗಾರಿಕಾ ಇಲಾಖೆ ಸೋಮವಾರ ವಶಪಡಿಸಿಕೊಂಡಿದೆ. ಈ ಎಲ್ಲಾ ಮೂರು ಟ್ರಾಲರ್ಗಳನ್ನು ವಶಪಡಿಸಿಕೊಂಡು ಪಣಜಿ ಜೆಟ್ಟಿಗೆ ತರಲಾಗಿದೆ ಎಂದು ಮೀನುಗಾರಿಕಾ ಸಚಿವ ನೀಲಕಂಠ ಹಳರ್ಣಕರ್ ಮಾಹಿತಿ ನೀಡಿದ್ದಾರೆ.
ಈ ಬೋಟುಗಳು ಮೂಲತಃ ಮಲ್ಪೆ (ಕರ್ನಾಟಕ)ದವರು. ಅವರು ಹಿಡಿಯುವ ಎಲ್ಲಾ ಮೀನುಗಳನ್ನು ಹರಾಜು ಮಾಡಲಾಗುತ್ತದೆ. ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದೂ ಸಚಿವ ಹರ್ಣಕರ್ ಪಣಜಿಯಲ್ಲಿ ಸುದ್ಧಿಗಾರರಿಗೆ ತಿಳಿಸಿದ್ದಾರೆ.
ರಾಜ್ಯದಲ್ಲಿ ಅಕ್ರಮ ಎಲ್ ಇಡಿ ಮೀನುಗಾರಿಕೆ ನಡೆಯುತ್ತಿರುವುದು ಬೆಳಕಿಗೆ ಬಂದ ನಂತರ ಮೀನುಗಾರಿಕೆ ಇಲಾಖೆ ತೀವ್ರ ಟೀಕೆಗೆ ಗುರಿಯಾಗಿತ್ತು. ಹೀಗಾಗಿ ಮೀನುಗಾರರ ಖಾತೆ ಸಾಕಷ್ಟು ಕ್ರಿಯಾಶೀಲವಾಗಿದ್ದು, ಅಕ್ರಮ ಮೀನುಗಾರಿಕೆ ತಡೆಗೆ ಕ್ರಮಕೈಗೊಳ್ಳಲಾಗುತ್ತಿದೆ. ಏತನ್ಮಧ್ಯೆ, ಎಲ್ಲಾ ಮೀನುಗಾರಿಕಾ ಜೆಟ್ಟಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದು ಸಚಿವ ನೀಲಕಂಠ ಹರ್ಣಕರ್ ಕೆಲವು ದಿನಗಳ ಹಿಂದೆ ತಿಳಿಸಿದ್ದರು.
ರಾಜ್ಯದಲ್ಲಿ ಸುಸ್ಥಿರ ಮೀನುಗಾರಿಕೆಯನ್ನು ಉತ್ತೇಜಿಸುವ ಅವಶ್ಯಕತೆಯಿದೆ ಮತ್ತು ಯಾವುದೇ ಪರಿಸ್ಥಿತಿಯಲ್ಲಿ ಎಲ್ಇಡಿ ಮೀನುಗಾರಿಕೆಯನ್ನು ನಿಲ್ಲಿಸಲಾಗುವುದು. ಇದಕ್ಕೆ ಸಿಸಿಟಿವಿ ಕ್ಯಾಮೆರಾಗಳು ಪ್ರಮುಖವಾಗಿದ್ದು, ವಾಸ್ಕೋದ ಖಾರಿವಾಡ ಜೆಟ್ಟಿಯಲ್ಲಿ ಕಾಮಗಾರಿ ಆರಂಭವಾಗಿದೆ. ರಾಜ್ಯದ ಇತರೆ ಜೆಟ್ಟಿಗಳ ಕಾಮಗಾರಿಯೂ ಶೀಘ್ರದಲ್ಲೇ ಆರಂಭವಾಗಲಿದೆ. ಜೆಟ್ಟಿಯಲ್ಲಿ ಎಲ್ಇಡಿ ಮೀನುಗಾರಿಕೆ ನಡೆದಿರುವ ಬಗ್ಗೆ ಯಾವುದೇ ಸಾಕ್ಷ್ಯಾಧಾರಗಳು ಕಂಡುಬಂದರೆ, ಆ ಜೆಟ್ಟಿಯಲ್ಲಿ ಮೀನುಗಾರಿಕೆ ಇಲಾಖೆಯ ಅಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ನೀಲಕಂಠ ಹಳರ್ಣಕರ್ ಹೇಳಿದರು.
ಇದನ್ನೂ ಓದಿ : ಮೊರ್ಬಿ ಸೇತುವೆ ದುರಂತ- ಜಾಣತನ ಪ್ರದರ್ಶಿಸಬೇಡಿ;ಅಧಿಕಾರಿಗಳಿಗೆ ಗುಜರಾತ್ ಹೈಕೋರ್ಟ್ ತರಾಟೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
MUST WATCH
ಹೊಸ ಸೇರ್ಪಡೆ
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್