ರಾಜ್ಯದಲ್ಲಿ ಹತ್ತು ಸಾವಿರ ಕೋಟಿ ಹಾನಿ ಅಂದಾಜು
ಕೇಂದ್ರ ಗೃಹ ಸಚಿವರಿಗೆ ಭೀಕರ ಪ್ರವಾಹದ ವಸ್ತುಸ್ಥಿತಿ ದರ್ಶನ
Team Udayavani, Aug 11, 2019, 6:00 PM IST
ಬೆಳಗಾವಿ: ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ ರಾಜ್ಯದಲ್ಲಿ 10 ಸಾವಿರ ಕೋಟಿ ರೂಪಾಯಿ ಹಾನಿಯಾಗಿರುವ ಬಗ್ಗೆ ಅಂದಾಜಿಸಲಾಗಿದೆ ಎಂದು ಮುಖ್ಯ ಕಾರ್ಯದರ್ಶಿಗಳು ವಿವರಿಸಿದರು.
ಕೇಂದ್ರ ಗೃಹಸಚಿವರು ಪ್ರವಾಹ ಬಾಧಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ಬಳಿಕ ಸಾಂಬ್ರಾ ವಿಮಾನ ನಿಲ್ದಾಣ ದಲ್ಲಿ ನಡೆಸಿದ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು.
ರಾಜ್ಯದಲ್ಲಿ ಪ್ರವಾಹ ಬಾಧಿತ ಜಿಲ್ಲೆಗಳಲ್ಲಿ 4.81 ಲಕ್ಷ ಜನರನ್ನು ಸ್ಥಳಾಂತರ ಮಾಡಲಾಗಿದ್ದು, 22431 ಮನೆಗಳ ಹಾನಿಯಾಗಿದೆ.ಪ್ರಾಥಮಿಕ ಸಮೀಕ್ಷೆಯ ಪ್ರಕಾರ 10 ಸಾವಿರ ಕೋಟಿ ರೂಪಾಯಿ ಹಾನಿ ಅಂದಾಜಿಸಲಾಗಿದೆ.
ಇಡೀ ರಾಜ್ಯದ ಪ್ರವಾಹ ಸ್ಥಿತಿಯನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ವಿವರಿಸಿದರು.
ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಿಗಾಗಿ 19 ಎನ್.ಡಿ.ಆರ್.ಎಫ್. ತಂಡಗಳನ್ನು ನಿಯೋಜಿಸಲಾಗಿದ್ದು, ಕೊಡುಗು ಜಿಲ್ಲೆಯಲ್ಲಿ ಇನ್ನೂ ಎರಡು ಹೆಲಿಕಾಪ್ಟರ್ ಅಗತ್ಯವಿದೆ ಎಂದು ತಿಳಿಸಿದರು.
ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಮುಂದಿನ ಎರಡು ದಿನಗಳಲ್ಲೂ ಮಳೆಯ ಪ್ರಮಾಣ ಕಡಿಮೆಯಿದೆ ಎಂದು ತಿಳಿಸಿದರು.
ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ರಾಜ್ಯ ಸರ್ಕಾರ ತೆಗೆದುಕೊಂಡ ಕ್ರಮಗಳ ಮಾಹಿತಿ ನೀಡಿದರು.
ಛಾಯಾ ಚಿತ್ರಗಳ ವೀಕ್ಷಣೆ:
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಆಗಿರುವ ಅನಾಹುತಗಳ ಛಾಯಾಚಿತ್ರ ಪ್ರದರ್ಶನವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ವೀಕ್ಷಿಸಿದರು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರು, ಜಿಲ್ಲೆಯಲ್ಲಿ ಆಗಿರುವ ಹಾನಿಯ ಕುರಿತು ಮಾಹಿತಿ ನೀಡಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ, ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ, ಶಾಸಕರಾದ ಉಮೇಶ್ ಕತ್ತಿ, ಅಭಯ್ ಪಾಟೀಲ, ಶಶಿಕಲಾ ಜೊಲ್ಲೆ, ದುರ್ಯೋಧನ ಐಹೊಳೆ, ಮಹಾದೇಪ್ಪ ಯಾದವಾಡ, ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ್ ಕೋರೆ ಮತ್ತಿತರರು ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ