2 ತಿಂಗಳ ಬಳಿಕ ಕರ್ನಾಟಕ-ಗೋವಾ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಆರಂಭ
Team Udayavani, Jun 22, 2021, 1:44 PM IST
ಪಣಜಿ: ಕೋವಿಡ್ ಮಹಾಮಾರಿಯ ಹಿನ್ನೆಲೆಯಲ್ಲಿ ಲಾಕ್ಡೌನ್ ಜಾರಿಯಾದ ನಂತರ ಕಳೆದ ಸುಮಾರು 2 ತಿಂಗಳಿಂದ ಬಂದ್ ಆಗಿದ್ದ ಕರ್ನಾಟಕ-ಗೋವಾ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಮಂಗಳವಾರದಿಂದ ಪುನರಾರಂಭಗೊಂಡಿದೆ.
ಅನಮೋಡ ಘಾಟ್ ಮಾರ್ಗವಾಗಿ ಕರ್ನಾಟಕದಿಂದ ಮಂಗಳವಾರ ಬೆಳಿಗ್ಗೆ ಗೋವಾಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಆಗಮಿಸಿದೆ. ಇದರಿಂದಾಗಿ ಕಳೆದ ಸುಮಾರು ಎರಡು ತಿಂಗಳ ಹಿಂದೆ ತಮ್ಮ ಊರಿಗೆ ತೆರಳಿದ್ದ ಕರ್ನಾಟಕ ಮೂಲದ ಕಾರ್ಮಿಕರು ಗೋವಾದತ್ತ ಮುಖಮಾಡಿದ್ದಾರೆ. ಕರ್ನಾಟಕ ಗೋವಾ ಸಾರಿಗೆ ಸಂಚಾರ ಸ್ಥಗಿತಗೊಂಡಿದ್ದರಿಂದ ಜನರಿಗೆ ಹೆಚ್ಚಿನ ತೊಂದರೆಯುಂಟಾಗಿತ್ತು.
ಇದನ್ನೂ ಓದಿ: ಗೋವಾ ಬೆಳಗಾವಿ ಸಂಪರ್ಕ ಸೇತುವೆ: ಚೋರ್ಲಾ ಘಾಟ್ನಲ್ಲಿ ಗುಡ್ಡ ಕುಸಿತ
ಮಂಗಳವಾರ ಗೋವಾಕ್ಕೆ ಕೇವಲ ಉತ್ತರ ಕರ್ನಾಟಕ ಭಾಗದಿಂದ ಮಾತ್ರ ಕೆ.ಎಸ್.ಆರ್.ಟಿ.ಸಿ ಬಸ್ ಆಗಮಿಸಿದ್ದು, ಕಾರವಾರದಿಂದ ಗೋವಾಕ್ಕೆ ಯಾವುದೇ ಕೆ.ಎಸ್.ಆರ್.ಟಿ.ಸಿ ಬಸ್ ಆಗಮಿಸಿಲ್ಲ.
ಗೋವಾ ಗಡಿ ಭಾಗದಲ್ಲಿ ಹೊರ ರಾಜ್ಯದಿಂದ ಆಗಮಿಸುವ ಪ್ರಯಾಣಿಕರಿಕೆ ಗೋವಾ ಸರ್ಕಾರ ಆರ್ಟಿಪಿಸಿಆರ್ ನೆಗೆಟಿವ್ ವರದಿ ಅಥವಾ ಐಸಿಎಂಆರ್ ಪ್ರಮಾಣಿತ ಯಾವುದೇ ತಪಾಸಣಾ ವರದಿ ಖಡ್ಡಾಯಗೊಳಿಸಿದೆ. ಇಂತಹ ಸಂದರ್ಭದಲ್ಲಿ ಕರ್ನಾಟಕದಿಂದ ಗೋವಾಕ್ಕೆ ಹೇಗೆ ಬಸ್ ಆಗಮಿಸಿದೆ..? ಎಂಬುದು ಸದ್ಯ ರಾಜ್ಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್