ಕರ್ನಾಟಕ ಕೊಟ್ಟದ್ದು 16 ಟಿಎಂಸಿ ನೀರು
Team Udayavani, Jul 6, 2017, 3:45 AM IST
ಹೊಸದಿಲ್ಲಿ/ಚೆನ್ನೈ: ತನ್ನ ಪಾಲಿಗೆ ಬರಬೇಕಾದ ಕಾವೇರಿ ನೀರನ್ನು ಕರ್ನಾಟಕ ಬಿಡುತ್ತಿಲ್ಲ ಎಂದು ಮತ್ತೆ ಕ್ಯಾತೆ ತೆಗೆದಿರುವ ತಮಿಳುನಾಡು ಸರಕಾರ ಬುಧವಾರ ಸುಪ್ರೀಂ ಕೋರ್ಟಿಗೆ ಮೊರೆ ಹೋಗಿದೆ.
ಕೋರ್ಟ್ ಆದೇಶದ ಪ್ರಕಾರ 25 ದಿನಗಳಲ್ಲಿ ಕರ್ನಾಟಕ 22.5 ಟಿಎಂಸಿ ನೀರು ಹರಿಸ ಬೇಕಿದೆಯಾದರೂ ಈವರೆಗೆ ಹರಿಸಿರುವುದು 16.58 ಟಿಎಂಸಿ ನೀರು ಮಾತ್ರ ಎಂದು ತಮಿಳುನಾಡು ತನ್ನ ಅರ್ಜಿಯಲ್ಲಿ ಆರೋಪಿಸಿದೆ. ನ್ಯಾ| ದೀಪಕ್ ಮಿಶ್ರಾ ನೇತೃತ್ವದ ನ್ಯಾಯ ಪೀಠದ ಮುಂದೆ ಸಲ್ಲಿಕೆಯಾದ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಲಾಗಿದೆ. ಕಾವೇರಿ ನದಿ ನೀರು ಹಂಚಿಕೆ ಬಗ್ಗೆ ತಮಿಳುನಾಡು ಅರ್ಜಿಯ ಕುರಿತ ಅಂತಿಮ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜು. 11ರಿಂದ ಆರಂಭಿಸಲಿದ್ದು, ಮುಂದಿನ 15 ಕೆಲಸದ ದಿನಗಳಲ್ಲಿ ನಡೆಸಲಿದೆ.
ಕಳೆದ ಅಕ್ಟೋಬರ್ನಲ್ಲಿ ಸುಪ್ರೀಂಕೋರ್ಟ್ ಕರ್ನಾಟಕ ಸರಕಾರಕ್ಕೆ ಪ್ರತಿ ದಿನ ತಮಿಳುನಾಡಿಗೆ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುವಂತೆ ಆದೇಶ ನೀಡಿತ್ತು. ಅದಕ್ಕಿಂತಲೂ ಮುಂಚೆ ಅಂದರೆ 2016ರ ಸೆ. 30ರಂದು ಕೋರ್ಟ್ ಕರ್ನಾಟಕವನ್ನು ತರಾಟೆಗೆ ತೆಗೆದುಕೊಂಡಿತ್ತು.
ಮೇಕೆದಾಟುಗೆ ತಗಾದೆ: ಕಾವೇರಿ ನದಿ ನೀರು ಹಂಚಿಕೆ ವಿಚಾರ ಇತ್ಯರ್ಥವಾಗುವವರೆಗೆ ಕರ್ನಾಟಕದ ಮೇಕೆದಾಟು ಯೋಜನೆಗೆ ಅನುಮತಿ ನೀಡಬಾರದು ಎಂದು ಕೇಂದ್ರವನ್ನು ಪಳನಿಸ್ವಾಮಿ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ