ಇನ್ನೂ ನಾಲ್ವರು ಬಂದು ಸೇರುತ್ತಾರೆ; ಜಾರಕಿಹೊಳಿ ಇನ್ನೊಂದು ಬಾಂಬ್
ಟ್ರಬಲ್ ಶೂಟರ್ ಭೇಟಿ ಯಾಗಲ್ಲ ಎಂದ ರೆಬೆಲ್ಗಳು ...
Team Udayavani, Jul 10, 2019, 10:21 AM IST
ಮುಂಬಯಿ : ‘ಯಾವುದೇ ಕಾರಣಕ್ಕೂ ನಾವು ಸಚಿವ ಡಿ.ಕೆ.ಶಿವಕುಮಾರ್ ಅವರನ್ನ ಭೇಟಿ ಮಾಡುವುದಿಲ್ಲ, ಸಾಕಷ್ಟು ತೊಂದರೆ ನೀಡಿದ್ದಾರೆ. ಇನ್ನುನಮಗೆ ತೊಂದರೆ ನೀಡುವುದು ಬೇಡ’ ಎಂದು ರೆಬೆಲ್ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಬುಧವಾರ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷದ ಟ್ರಬಲ್ ಶೂಟರ್ ಆಗಿರುವ ಡಿ.ಕೆ.ಶಿವಕುಮಾರ್ ಅವರು ಮುಂಬಯಿಯ ರಿನಾಯ್ಸೆನ್ಸ್ ಹೊಟೇಲ್ನಲ್ಲಿ ಕಾಂಗ್ರೆಸ್-ಜೆಡಿಎಸ್ನ 10 ಮಂದಿ ಅತೃಪ್ತ ಶಾಸಕರ ಭೇಟಿಗೆ ಮುಂದಾದ ಬೆನ್ನಲ್ಲೇ ಜಾರಕಿಹೊಳಿ ಈ ಹೇಳಿಕೆ ನೀಡಿದ್ದಾರೆ.
‘ಡಿಕೆಶಿ ಒಂದು ಕಾಲದಲ್ಲಿ ನನ್ನ ಆತ್ಮೀಯ ಸ್ನೇಹಿತ, ಈಗ ಯಾವುದೇ ಮಾತುಕತೆ ನಡೆಸುವುದು ಬೇಡ. ನಮಗೆ ಅವರೊಂದಿಗೆ ಮುಂದುವರಿಯುವುದು ಇಷ್ಟವಿಲ್ಲ.ಅವನಿಗೆ ದೇವರು ಒಳ್ಳೆಯದು ಮಾಡಲಿ’ ಎಂದರು.
‘ನಮ್ಮನ್ನು ಬಿಜೆಪಿಯವರು ಕರೆ ತಂದಿಲ್ಲ. ನಾವು ನಮ್ಮ ಸ್ವಂತ ಕರ್ಚಿನಲ್ಲಿ ಬಂದಿದ್ದೇವೆ. ನಮ್ಮನ್ನು ಬೆಳೆಸಿದವರು ಸಿದ್ದರಾಮಯ್ಯ , ಅವರು ಎಲ್ಲಿಯೇ ಇದ್ದರೂ ನಮ್ಮ ನಾಯಕರು, ಅವರು ಸುಳ್ಳು ಹೇಳುವವರಲ್ಲ’ ಎಂದರು.
‘ಸ್ಪೀಕರ್ ರಮೇಶ್ ಕುಮಾರ್ ಅವರ ಮೇಲೆ ಬಹಳ ಗೌರವವಿದೆ . ತಕ್ಷಣ ನಮ್ಮ ರಾಜೀನಾಮೆಯನ್ನು ಅಂಗೀಕರಿಸಿ’ ಎಂದು ಮನವಿ ಮಾಡಿದ್ದಾರೆ.
‘ಇನ್ನೂ ನಾಲ್ಕು ಮಂದಿ ಶಾಸಕರು ಬಂದು ನಮ್ಮನ್ನು ಸೇರಲಿದ್ದಾರೆ‘ ಎಂದು ಬಾಂಬ್ ಸಿಡಿಸಿದರು.
ಸಚಿವರಾದ ಜಿ.ಟಿ.ದೇವೇಗೌಡ ಮತ್ತು ಜೆಡಿಎಸ್ ಶಾಸಕ ಶಿವಲಿಂಗೇಗೌಡ ಅವರು ಸಚಿವಡಿ.ಕೆ.ಶಿವಕುಮಾರ್ ಅವರೊಂದಿಗೆ ಮುಂಬಯಿಗೆ ತೆರಳಿದ್ದು, ಮೂವರಿಗೂ ಹೊಟೇಲ್ ಪ್ರವೇಶಕ್ಕೆ ಪೊಲೀಸರು ತಡೆ ಒಡ್ಡಿದ್ದಾರೆ. ಅತೃಪ್ತ ಶಾಸಕರು ಡಿ.ಕೆ.ಶಿವಕುಮಾರ್ ಮತ್ತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಲತ್ಕಾರಯುತವಾಗಿ ನಮ್ಮನ್ನು ಕರೆದೊಯ್ಯುತ್ತಾರೆ ಎಂದು ದೂರು ನೀಡಿದ ಹಿನ್ನಲೆಯಲ್ಲಿ ತಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ
ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ ಟಿಕೆಟ್ ಡೌಟ್
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!
MUST WATCH
ಹೊಸ ಸೇರ್ಪಡೆ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ
ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ ಟಿಕೆಟ್ ಡೌಟ್
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ