ಪ್ರಮಾಣಕ್ಕೆ ಕರ್ನಾಟಕ ಮಾದರಿ
Team Udayavani, Dec 16, 2018, 6:00 AM IST
ಭೋಪಾಲ/ಐಜ್ವಾಲ್: ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಡಿ.17ರಂದು ನೂತನ ಮುಖ್ಯಮಂತ್ರಿಗಳ ಪ್ರಮಾಣ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು, ಕರ್ನಾಟಕದ ಮಾದರಿಯಲ್ಲೇ ಈ ಪ್ರಮಾಣ ವಚನ ಕಾರ್ಯಕ್ರಮಗಳು ಆಯೋಜಿಸಲಾಗುತ್ತಿದೆ.
ಮೇ ತಿಂಗಳಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಪದಗ್ರಹಣದ ವೇಳೆ ಬಿಎಸ್ಪಿ, ಎಸ್ಪಿ, ಟಿಎಂಸಿ, ಡಿಎಂಕೆ, ಆರ್ಜೆಡಿ, ಎನ್ಸಿಪಿ, ಟಿಡಿಪಿ ನಾಯಕರು ಭಾಗವಹಿಸುವ ಮೂಲಕ ಪ್ರತಿಪಕ್ಷಗಳಲ್ಲಿನ ಒಗ್ಗಟ್ಟನ್ನು ಪ್ರದರ್ಶಿಸಿದ್ದರು. ಬೆಂಗಳೂರಿನಲ್ಲಿ ನಡೆದಿದ್ದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿಯೇ ಬಿಜೆಪಿ ನೇತೃತ್ವದ ಎನ್ಡಿಎ ವಿರುದ್ಧ ಮಹಾ ಮೈತ್ರಿಕೂಟ ರಚಿಸುವ ಯೋಚನೆಯೂ ಟಿಸಿಲೊಡೆದಿತ್ತು. ಡಿ.17ರಂದು (ಸೋಮವಾರ) ಅದೇ ಮಾದರಿಯ ಪ್ರಮಾಣ ವಚನ ಆಯೋಜಿಸಲು ಕಾಂಗ್ರೆಸ್ ನಿರ್ಧರಿಸಿದೆ.
ಅದರಂತೆ, ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್, ಆರ್ಜೆಡಿ ನಾಯಕ ತೇಜಸ್ವಿ ಯಾದವ್, ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ಎಸ್ಪಿ ಅಧ್ಯಕ್ಷ ಅಖೀಲೇಶ್ ಯಾದವ್, ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ ಕೇಜ್ರಿವಾಲ್, ಬಿಎಸ್ಪಿ ನಾಯಕಿ ಮಾಯಾವತಿ ಸೇರಿದಂತೆ ಪ್ರಮುಖರಿಗೆ ಆಹ್ವಾನ ನೀಡಲಾಗಿದೆ. ಈ ಆಹ್ವಾನಕ್ಕೆ ಮಾಯಾವತಿ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಅಖೀಲೇಶ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅನಿವಾರ್ಯ ಕಾರಣಗಳಿಂದಾಗಿ ಮಮತಾ ಬ್ಯಾನರ್ಜಿ ಬರುತ್ತಿಲ್ಲ. ಆದರೆ ಅವರು ತಮ್ಮ ಪ್ರತಿನಿಧಿಯೊಬ್ಬರನ್ನು ಕಳುಹಿಸಿಕೊಡಲಿದ್ದಾರೆ.
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟವನ್ನೆದುರಿಸಲು ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ರಚಿಸಲು ಉದ್ದೇಶಿಸಿರುವ ಮಹಾ ಮೈತ್ರಿಕೂಟದ ಬಲವರ್ಧನೆಗೆ ಈ ಪ್ರಮಾಣ ವಚನ ಕಾರ್ಯಕ್ರಮ ನೆರವಾಗುವಂತೆ ಮಾಡುವುದು ಕಾಂಗ್ರೆಸ್ ಉದ್ದೇಶ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ
Election: ಕೇರಳದಲ್ಲಿ “ರಾಹುಲ್ ಗಾಂಧಿ ಡಿಎನ್ಎ ಪರೀಕ್ಷೆ’ ವಿವಾದ
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು