25ರವರೆಗೆ ಕಾರ್ತಿಗೆ ನ್ಯಾಯಾಂಗ ಬಂಧನ
Team Udayavani, Mar 13, 2018, 7:30 AM IST
ಹೊಸದಿಲ್ಲಿ: ಐಎನ್ಎಕ್ಸ್ ಮಾಧ್ಯಮ ಲಂಚ ಪ್ರಕರಣದಲ್ಲಿ ಬಂಧಿತರಾಗಿರುವ ಕೇಂದ್ರದ ಮಾಜಿ ಸಚಿವ ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರನ್ನು ಸಿಬಿಐನ ವಿಶೇಷ ಕೋರ್ಟ್ ಮತ್ತೆ 13 ದಿನಗಳ ಕಾಲ ನ್ಯಾಯಾಂಗ ವಶಕ್ಕೆ ಒಪ್ಪಿಸಿದೆ. ಅದಕ್ಕೆ ಪೂರಕವಾಗಿ ಅವರನ್ನು ಹೊಸದಿಲ್ಲಿಯ ತಿಹಾರ್ ಜೈಲಿಗೆ ವರ್ಗಾಯಿಸಲಾಗಿದೆ.
ಇದೇ ವೇಳೆ, ತಮಗೆ ಪ್ರತ್ಯೇಕ ಸೆಲ್ ಮತ್ತು ಮನೆಯ ಆಹಾರ ನೀಡಬೇಕು ಎಂಬ ಕಾರ್ತಿ ಅವರ ಬೇಡಿಕೆಯನ್ನು ವಿಶೇಷ ಕೋರ್ಟ್ ತಿರಸ್ಕರಿಸಿದೆ. ಆದರೆ ಕಾರಾಗೃಹದ ವೈದ್ಯರ ಪರಿಶೀಲನೆಗೆ ಒಳಪಟ್ಟು ಔಷಧಗಳನ್ನು ತರಿಸಿಕೊಳ್ಳಲು ಅನುಮತಿ ನೀಡಿದೆ. ಮಾ.25ರಂದು ಅವರನ್ನು ಕೋರ್ಟಿಗೆ ಹಾಜರುಪಡಿಸಬೇಕಿದೆ. ಕಾರ್ತಿ ಅವರ 3 ದಿನಗಳ ಸಿಬಿಐ ಕಸ್ಟಡಿ ಅವಧಿ ಮುಕ್ತಾಯವಾಗಿದ್ದಕ್ಕೆ ಅವರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಕಾರ್ತಿಯನ್ನು ಮತ್ತೆ ವಶಕ್ಕೊಪ್ಪಿಸುವಂತೆ ಸಿಬಿಐ ಕೇಳದೆ ಇರುವುದರಿಂದ ಕೋರ್ಟ್ ಅವರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿ ಆದೇಶ ನೀಡಿತು. ಇದೇ ವೇಳೆ ಕಾರ್ತಿ ಅವರು ಪ್ರಕರಣದಲ್ಲಿ ಜಾಮೀನು ನೀಡುವಂತೆ ದಿಲ್ಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ