ತಮಿಳುನಾಡಿನಲ್ಲಿ ಹಿಂಸಾಚಾರ, ತಳ್ಳಾಟ: ಕಾಲ್ತುಳಿತಕ್ಕೆ ಇಬ್ಬರು ಬಲಿ
Team Udayavani, Aug 8, 2018, 1:18 PM IST
ಚೆನ್ನೈ: ಡಿಎಂಕೆ ಪರಮೋಚ್ಛ ನಾಯಕ, ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅಂತ್ಯಕ್ರಿಯೆ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ರಾತ್ರಿಯಿಡೀ ಹೈಕೋರ್ಟ್ ನಲ್ಲಿ ನಡೆದ ಹೈಡ್ರಾಮಾಕ್ಕೆ ಬುಧವಾರ ತೆರೆಬಿದ್ದಿದೆ. ಚೆನ್ನೈನ ಮರೀನಾ ಬೀಚ್ ನಲ್ಲಿಯೇ ಕರುಣಾನಿಧಿ ಅವರ ಅಂತ್ಯಕ್ರಿಯೆ ನಡೆಸುವಂತೆ ಕೋರ್ಟ್ ತೀರ್ಪು ನೀಡಿದೆ. ಏತನ್ಮಧ್ಯೆ ಬಸ್, ಕಾರು ಸೇರಿದಂತೆ ವಾಹನಗಳ ಮೇಲೆ ಕಲ್ಲುತೂರಾಟ ನಡೆಸಿರುವ ಘಟನೆ ವರದಿಯಾಗಿದೆ.
ಪೆರಿಯಾರ್ ಪುತ್ಥಳಿ ಬಳಿ ಕಾಲ್ತುಳಿತ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅಲ್ಲದೇ ತಮಿಳುನಾಡಿನಾದ್ಯಂತ ಸುಮಾರು 80ಕ್ಕೂ ಅಧಿಕ ಹಿಂಸಾಚಾರ ಕೇಸ್ ದಾಖಲಾಗಿದೆ ಎಂದು ವರದಿ ವಿವರಿಸಿದೆ.
ಹಿಂಸಾಚಾರ, ನೂಕುನುಗ್ಗಲಿನ ಹಿನ್ನೆಲೆಯಲ್ಲಿ ಪೊಲೀಸರು ಹಲವರನ್ನು ಬಂಧಿಸಿದ್ದು, ಜನರನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ಹಿಂಸಾಚಾರದಲ್ಲಿ ಈವರೆಗೂ 7ಕ್ಕೂ ಅಧಿಕ ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ
ಕರುಣಾನಿಧಿ ಅವರ ಪಾರ್ಥಿವ ಶರೀರದ ದರ್ಶನ ಪಡೆಯಲು ರಾಜಾಜಿನಗರದತ್ತ ಜನರು ತಂಡೋಪತಂಡವಾಗಿ ಆಗಮಿಸುತ್ತಿದ್ದು, ಬ್ಯಾರಿಕೇಡ್ ಗಳನ್ನು ಮುರಿದು ಒಳನುಗ್ಗುತ್ತಿದ್ದಾರೆ. ರಾಜಾಜಿ ಹಾಲ್ ಬಳಿ ಕಾಲ್ತುಳಿತದಲ್ಲಿ 40 ಮಂದಿ ಗಾಯಗೊಂಡಿದ್ದಾರೆ. ಇದರಿಂದಾಗಿ ಪೊಲೀಸರು ಜನರನ್ನು, ಅಭಿಮಾನಿಗಳನ್ನು, ನಿಯಂತ್ರಿಸಲು ಲಘು ಲಾಠಿಪ್ರಹಾರ ನಡೆಸಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್