ಹರಿದು ಬಂದ ಜನಸಾಗರ, ಕರುಣಾನಿಧಿಗೆ ಅಂತಿಮ ವಿದಾಯ, CM ಗೈರು
Team Udayavani, Aug 8, 2018, 6:58 PM IST
ಚೆನ್ನೈ: ದ್ರಾವಿಡ ಮುನ್ನೇತ್ರ ಕಳಗಂ ಪರಮೋಚ್ಚ ನಾಯಕ, ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ(94ವರ್ಷ) ಅವರ ಪಾರ್ಥಿವ ಶರೀರಕ್ಕೆ ಯಾವುದೇ ವಿಧಿ, ವಿಧಾನ ಇಲ್ಲದೇ ಮೌನ ಆಚರಣೆ ಬಳಿಕ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು
ಶ್ರೀಗಂಧದ ಮರದಿಂದ ವಿಶೇಷವಾಗಿ ಶವ ಪೆಟ್ಟಿಗೆಯನ್ನು ಸಿದ್ಧಪಡಿಸಲಾಗಿತ್ತು. ಪೆಟ್ಟಿಗೆ ಮೇಲೆ ಕರುಣಾನಿಧಿ ಅವರು ಸುಮಾರು 30 ವರ್ಷಗಳ ಹಿಂದೆ ಬರೆದಿದ್ದ ‘ವಿಶ್ರಾಂತಿ ಇಲ್ಲದೆ ದುಡಿಯುವವನಿಗೆ ಇದು ವಿಶ್ರಾಂತಿಯ ತಾಣ ಎಂದು ಬರೆದಿದ್ದರು. ಅದೇ ಸಾಲನ್ನು ಪೆಟ್ಟಿಗೆ ಮೇಲೆ ಬರೆಯಿಸಲಾಗಿತ್ತು.
ಮರೀನಾ ಬೀಚ್ ನಲ್ಲಿ ಗುರು ಅಣ್ಣಾದೊರೈ ಸಮಾಧಿ ಸಮೀಪವೇ ಎಂ.ಕರುಣಾನಿಧಿ ಅವರ ಸಮಾಧಿ ಮಾಡಲು ಸಿದ್ಧತೆ ಮಾಡಿದ್ದು, ಕರುಣಾನಿಧಿ ಕುಟುಂಬಸ್ಥರು, ಸೇನಾಪಡೆಗಳು ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.
ಚೆನ್ನೈನ ರಾಜಾಜಿ ಹಾಲ್ ನಿಂದ ಕರುಣಾನಿಧಿ ಅವರ ಪಾರ್ಥಿವ ಶರೀರದ ಅಂತಿಮ ಮೆರವಣಿಗೆ ಹೊರಟು ಕಾಮರಾಜ್ ರಸ್ತೆಯ ಮೂಲಕ ಮರೀನಾ ಬೀಚ್ ವರೆಗೆ ಕೊಂಡೊಯ್ಯಲಾಯಿತು. ಮೆರವಣಿಗೆ ಸಾಗುವ ಸುಮಾರು ಮೂರು ಕಿಲೋ ಮೀಟರ್ ದೂರದವರೆಗೆ ಜನಸಾಗರ ತುಂಬಿತ್ತು.
ಮರೀನಾ ಬೀಚ್ ನಲ್ಲಿ ಅಣ್ಣಾದೊರೈ ಸಮಾಧಿ ಸಮೀಪವೇ ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಸಿಎಂ ಕರುಣಾನಿಧಿ ಅವರ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಗಣ್ಯರಿಂದ ಅಂತಿಮ ನಮನ:
ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಕರ್ನಾಟಕ ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸೇರಿದಂತೆ ಹಲವು ಗಣ್ಯರು ಕರುಣಾನಿಧಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ನಮನ ಸಲ್ಲಿಸಿದರು.
ಅಂತ್ಯಕ್ರಿಯೆಗೆ ಸಿಎಂ ಗೈರು:
ಮಾಜಿ ಸಿಎಂ ಕರುಣಾನಿಧಿ ಅವರ ಅಂತ್ಯಸಂಸ್ಕಾರದ ವೇಳೆ ತಮಿಳುನಾಡು ಹಾಲಿ ಸಿಎಂ ಪಳನಿಸ್ವಾಮಿ ಗೈರುಹಾಜರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ