ಶ್ರೀನಗರ್: ವಾಸಸ್ಥಳದ ಹಕ್ಕುಪತ್ರ ಪಡೆದ ಚಿನ್ನದ ವ್ಯಾಪಾರಿಗೆ ಗುಂಡಿಟ್ಟು ಹತ್ಯೆಗೈದ ಉಗ್ರರು!

ಇತರ ರಾಜ್ಯದವರು ಜಾಗ ಖರೀದಿಸಲು ಅನುಮತಿ ನೀಡಿತ್ತು.

Team Udayavani, Jan 2, 2021, 10:55 AM IST

ಶ್ರೀನಗರ್: ವಾಸಸ್ಥಳದ ಹಕ್ಕುಪತ್ರ ಪಡೆದ ಚಿನ್ನದ ವ್ಯಾಪಾರಿಗೆ ಗುಂಡಿಟ್ಟು ಹತ್ಯೆಗೈದ ಉಗ್ರರು

ಶ್ರೀನಗರ್: ಕಳೆದ ತಿಂಗಳಷ್ಟೇ ವಾಸಸ್ಥಳದ ಹಕ್ಕುಪತ್ರ ಪಡೆದಿದ್ದ ಚಿನ್ನದ ವ್ಯಾಪಾರಿಯನ್ನು ಹಾಡಹಗಲೇ ಜನನಿಬಿಡ ಪ್ರದೇಶದಲ್ಲಿಯೇ ಉಗ್ರರು ಗುಂಡಿಟ್ಟು ಹತ್ಯೆಗೈದಿರುವ ಘಟನೆ ಶ್ರೀನಗರದಲ್ಲಿ ನಡೆದಿರುವುದಾಗಿ ಜಮ್ಮು-ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

65 ವರ್ಷದ ಚಿನ್ನದ ವ್ಯಾಪಾರಿ ಸತ್ಪಾಲ್ ನಿಶ್ಚಲ್ ಕಳೆದ 50 ವರ್ಷಗಳಿಂದ ಜಮ್ಮು-ಕಾಶ್ಮೀರದಲ್ಲಿ ವಾಸವಾಗಿದ್ದರು. ಕಳೆದ ತಿಂಗಳು ಸತ್ಪಾಲ್ ಅವರು ಕೇಂದ್ರದ ಕಾಯ್ದೆಯನ್ವಯ ಕಾಯಂ ವಾಸಸ್ಥಳದ ಹಕ್ಕುಪತ್ರ ಪಡೆದಿದ್ದರು. ಇದರಿಂದ ಆಕ್ರೋಶಗೊಂಡ ಉಗ್ರರು ಚಿನ್ನದ ಮಳಿಗೆಯಲ್ಲಿಯೇ ಗುಂಡಿಟ್ಟು ಹತ್ಯೆಗೈದಿದ್ದರು ಎಂದು ಪೊಲೀಸರು ವಿವರಿಸಿದ್ದಾರೆ.

ಚಿನ್ನದ ವ್ಯಾಪಾರಿಯನ್ನು ಹತ್ಯೆಗೈದ ಹೊಣೆಯನ್ನು ಹೊತ್ತುಕೊಂಡಿರುವ ಉಗ್ರಗಾಮಿ ಸಂಘಟನೆ ಪ್ರಕಟಣೆ ನೀಡಿದ್ದು, ಆಭರಣ ವ್ಯಾಪಾರಿ ವಸಾಹತಿನ ಭಾಗವಾಗಿದ್ದು, ಇನ್ಮುಂದೆ ಯಾರೇ ಆಗಲಿ ಜಮ್ಮು-ಕಾಶ್ಮೀರದಲ್ಲಿ ವಾಸಸ್ಥಾನದ ಹಕ್ಕುಪತ್ರ ಪಡೆದಲ್ಲಿ ಅವರನ್ನು ಆಕ್ರಮಣಕಾರರು ಎಂದು ಪರಿಗಣಿಸಲಾಗುತ್ತದೆ ಎಂದು ತಿಳಿಸಿದೆ.

ಜಮ್ಮು-ಕಾಶ್ಮೀರದಲ್ಲಿ ದೇಶದ ಯಾವುದೇ ರಾಜ್ಯದವರು ಕೂಡಾ ಜಾಗ ಖರೀದಿಸುವ ಕುರಿತು ಕೇಂದ್ರ ಸರ್ಕಾರ ನೂತನ ಕಾಯ್ದೆ ಜಾರಿಗೆ ತಂದಿತ್ತು. 2019ರ ಆಗಸ್ಟ್ ನಲ್ಲಿ ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿ, ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿತ್ತು. ನಂತರ ಇತರ ರಾಜ್ಯದವರು ಜಾಗ ಖರೀದಿಸಲು ಅನುಮತಿ ನೀಡಿತ್ತು.

ಇದನ್ನೂ ಓದಿ:ಶ್ವಾನದ ಹೆಸರಿಗೆ ಆಸ್ತಿ ಬರೆದ ಮಧ್ಯಪ್ರದೇಶ ರೈತ; ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌

ಈವರೆಗೆ ಕಾಶ್ಮೀರ ಕಣಿವೆಯಲ್ಲಿ 10 ಲಕ್ಷ ಸ್ಥಳೀಯ ನಿವಾಸಿಗಳಿಗೆ ವಾಸಸ್ಥಳದ ಹಕ್ಕುಪತ್ರಗಳನ್ನು ನೀಡಲಾಗಿದೆ. ಆದರೆ ಕಾಶ್ಮೀರದಲ್ಲಿ ಎಷ್ಟು ಮಂದಿ ಸ್ಥಳೀಯರಲ್ಲದವರಿಗೆ ಹಕ್ಕು ಪತ್ರ ನೀಡಲಾಗಿದೆ ಎಂಬ ಅಂಕಿಅಂಶವನ್ನು ಸರ್ಕಾರ ಬಿಡುಗಡೆ ಮಾಡಿಲ್ಲ ಎಂದು ವರದಿ ತಿಳಿಸಿದೆ.

ಸತ್ಪಾಲ್ ಕುಟುಂಬ ಮೂಲತಃ ಪಂಜಾಬ್ ನ ಗುರುದಾಸ್ ಪುರದವರು. ಆದರೆ ಕಳೆದ ಹಲವಾರು ದಶಕಗಳಿಂದ ಶ್ರೀನಗರದಲ್ಲಿ ವಾಸವಾಗಿದ್ದರು. ಕುಟುಂಬದ ಹಲವು ಸದಸ್ಯರು ಇಲ್ಲಿ ಚಿನ್ನದ ವ್ಯಾಪಾರ ಮಾಡುತ್ತಿದ್ದಾರೆ. ಕಾಶ್ಮೀರಿ ಪಂಡಿತರನ್ನು ಗುರಿಯಾಗಿರಿಸಿಕೊಂಡು ಉಗ್ರರು ಅಟ್ಟಹಾಸ ನಡೆಸುತ್ತಿದ್ದ ಸಂದರ್ಭದಲ್ಲಿಯೂ ಈ ಕುಟುಂಬ ಶ್ರೀನಗರದಲ್ಲಿಯೇ ವಾಸ್ತವ್ಯ ಮುಂದುವರಿಸಿದ್ದರು ಎಂದು ವರದಿ ಹೇಳಿದೆ.

“ನಾವು ಅವರನ್ನು ಯಾವತ್ತೂ ಹೊರಗಿನವರು ಎಂದು ಪರಿಗಣಿಸಿಯೇ ಇಲ್ಲ. ಅವರು ಕೂಡಾ ಕಾಶ್ಮೀರಿಯೇ ಆಗಿದ್ದರು. ಅವರ ಅಕಾಲಿಕ ಸಾವಿಗೆ ನಾವು ಪ್ರತಿಯೊಬ್ಬರು ಸಂತಾಪ ಸೂಚಿಸುತ್ತಿದ್ದೇವೆ” ಎಂದು ಸ್ಥಳೀಯ ನಿವಾಸಿ ಶಬೀರ್ ಅಹ್ಮದ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.