ಕಾಶ್ಮೀರ : ಬಿಜೆಪಿ ಕಾರ್ಯಕರ್ತನ ಹತ್ಯಗೈದಿದ್ದ ಆರೋಪಿ ಎನ್ಕೌಂಟರ್ ನಲ್ಲಿ ಬಲಿ
Team Udayavani, Sep 26, 2021, 1:44 PM IST
ಶ್ರೀನಗರ : ಬಿಜೆಪಿ ಕಾರ್ಯಕರ್ತ ಹಾಗೂ ಆತನ ಕುಟುಂಬದ ಇಬ್ಬರನ್ನು ಹತ್ಯೆ ಮಾಡಿದ್ದ ಆರೋಪಿಯನ್ನು ಎನ್ಕೌಂಟರ್ ಮಾಡಿರುವುದಾಗಿ ಕಾಶ್ಮೀರದ ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಭಾನುವಾರ ಉತ್ತರ ಕಾಶ್ಮೀರದ ಬಂಡಿಪೊರಾ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ ನಲ್ಲಿ ಇಬ್ಬರು ಹತರಾಗಿದ್ದಾರೆ. ಇದರಲ್ಲಿ ಒಬ್ಬ ಬಿಜೆಪಿ ಕಾರ್ಯಕರ್ತ ಹಾಗೂ ಆತನ ತಂದೆ ಮತ್ತು ಸಹೋದರನ ಹತ್ಯೆ ಮಾಡಿದ ಆರೋಪಿ ಸೇರಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೂವರ ಹತ್ಯೆ ಮಾಡಿದ್ದ ಪಾಪಿ :
ಕಳೆದ ವರ್ಷದ ಜುಲೈ ತಿಂಗಳಿನಲ್ಲಿ ಈ ಘಟನೆ ನಡೆದಿತ್ತು. ಜಮ್ಮು-ಕಾಶ್ಮೀರದ ಬಿಜೆಪಿ ಕಾರ್ಯಕಾರಣಿ ಸಮಿತಿಯ ಸದಸ್ಯ ಶೇಖ್ ವಾಸಿಮ್ ಬರಿ ಹಾಗೂ ಆತನ ತಂದೆ ಶೇಕ್ ಬಷಿರ್ ಹಾಗೂ ಸಹೋದರ ಶೇಕ್ ಉಮರ್ ನನ್ನು ಹತ್ಯೆ ಮಾಡಲಾಗಿತ್ತು. ದಿ. ಶೇಕ್ ವಾಸಿಮ್ ನಾಲ್ಕು ವರ್ಷಗಳಿಂದ ಬಿಜೆಪಿ ಕಾರ್ಯಕರ್ತನಾಗಿದ್ದ. ನಂತರ ಬಂಡಿಪೊರಾ ಜಿಲ್ಲೆಯ ಬಿಜೆಪಿ ಅಧ್ಯಕ್ಷನಾಗಿ ನೇಮಕಗೊಂಡಿದ್ದ. ಮನೆಯಿಂದ ಸ್ವಲ್ಪ ದೂರದಲ್ಲಿದ್ದ ಸ್ವಂತ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ವೇಳೆ ತಂದೆ, ಸಹೋದರ ಹಾಗೂ ಈತನನ್ನು ಹತ್ಯೆ ಮಾಡಲಾಗಿತ್ತು.
ಇನ್ನು ಘಟನೆ ಬಗ್ಗೆ ಮಾಹಿತಿ ನೀಡಿರುವ ಬಂಡಿಪೊರಾ ಜಿಲ್ಲೆಯ ಪೊಲೀಸರು, ಇಂದು ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಬಲಿಯಾಗಿದ್ದಾರೆ. ಇವರ ಪೈಕಿ ಓರ್ವ ಬಿಜೆಪಿ ಕಾರ್ಯಕರ್ತ ಶೇಕ್ ವಾಸಿಂ ಹತ್ಯೆಯ ಆರೋಪಿಯಾಗಿದ್ದಾನೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ