ತುಂಬಾ ಖುಷಿಯಾಗ್ತಿದೆ…ಏಳು ತಿಂಗಳ ಬಳಿಕ ಕಾಶ್ಮೀರದಲ್ಲಿ ಶಾಲಾ, ಕಾಲೇಜು ಪುನರಾರಂಭ
ಇದೀಗ ವಿದ್ಯಾರ್ಥಿಗಳು ಹೆಚ್ಚಿನ ಸಮಯ ವ್ಯರ್ಥ ಮಾಡುವುದು ಬೇಕಾಗಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Team Udayavani, Feb 24, 2020, 6:11 PM IST
ನವದೆಹಲಿ: ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ಕೇಂದ್ರ ಸರ್ಕಾರ ರದ್ದುಪಡಿಸಿ 7 ತಿಂಗಳ ಬಳಿಕ ಕಾಶ್ಮೀರದಲ್ಲಿ ಸೋಮವಾರದಿಂದ ಶಾಲೆಗಳು ಪುನರಾರಂಭಗೊಂಡಿದೆ. ಸರ್ಕಾರ ಎಲ್ಲಾ ಶಾಲೆಗಳನ್ನು 2019ರ ನವೆಂಬರ್ ನಲ್ಲಿಯೇ ಪುನರಾರಂಭ ಮಾಡಲು ಪ್ರಯತ್ನಿಸಿತ್ತು. ಆದರೆ ಕೆಲವೇ ಕೆಲವು ಶಾಲೆಗಳು ಮಾತ್ರ ಆರಂಭಗೊಂಡಿದ್ದವು ಎಂದು ವರದಿ ತಿಳಿಸಿದೆ.
ಸಾಮಾನ್ಯವಾಗಿ ಕಾಶ್ಮೀರದಲ್ಲಿ ಮೂರು ತಿಂಗಳು ಚಳಿಗಾಲದ ರಜೆಯ ಅವಧಿ ಇದಾಗಿದೆ. ಆದರೆ 2019ರ ಆಗಸ್ಟ್ ನಿಂದ ವಿದ್ಯಾರ್ಥಿಗಳು ಶಾಲಾ, ಕಾಲೇಜುಗಳಿಂದ ದೂರವೇ ಉಳಿಯುವಂತಾಗಿತ್ತು.
ಚಳಿಗಾಲದ ರಜೆಯ ನಂತರ ಶಾಲೆ ಪುನರಾರಂಭಗೊಂಡಿದ್ದರಿಂದ ವಿದ್ಯಾರ್ಥಿಗಳು, ಶಿಕ್ಷಕರು ತುಂಬಾ ಖುಷಿಯಿಂದ ಆಗಮಿಸಿದ್ದರು. ತುಂಬಾ ದೀರ್ಘಕಾಲದಿಂದ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲೆಗೆ ಬರಲು ತಯಾರಿ ನಡೆಸುತ್ತಿದ್ದರು. ಇದೀಗ ವಿದ್ಯಾರ್ಥಿಗಳು ಹೆಚ್ಚಿನ ಸಮಯ ವ್ಯರ್ಥ ಮಾಡುವುದು ಬೇಕಾಗಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಮಗೆ ತುಂಬಾ ಖುಷಿಯಾಗಿದೆ. ನಾವು ತುಂಬಾ ಸಮಯವನ್ನು ಕಳೆದುಕೊಂಡು ಬಿಟ್ಟೆವು. ನಾವು ಪ್ರಥಮ ಪಿಯುಸಿ ವಿದ್ಯಾರ್ಥಿಗಳು. ಕಾಲೇಜು ಪುನರಾರಂಭವಾಗಿರುವುದು ತುಂಬಾ ಸಂತಸದ ವಿಚಾರ ಎಂದು ನಿಡಾ ತಾರಿಖ್ ಪ್ರತಿಕ್ರಿಯೆ ನೀಡಿದ್ದಾಳೆ.
ನಾವು ಶಾಲೆಗೆ ಹೋಗುತ್ತೇವೆ ಎಂಬುದನ್ನು ನಾನು ನಂಬಿರಲಿಲ್ಲವಾಗಿತ್ತು. ಕಳೆದ ಏಳು ತಿಂಗಳಿನಿಂದ ನಾವು ಶಾಲೆಯನ್ನು ಮರೆತೇ ಬಿಟ್ಟಿದ್ದೇವೆ. ಇದೀಗ ಕಳೆದ ಒಂದು ತಿಂಗಳಿನಿಂದ ನಾವು ಏನು ಕಲಿತಿದ್ದೇವೆ ಎಂಬುದನ್ನು ಅಭ್ಯಾಸ ಮಾಡಿಕೊಳ್ಳುತ್ತಿದ್ದೇವೆ ಎಂದು ಮತ್ತೊಬ್ಬ ವಿದ್ಯಾರ್ಥಿ ಗಾಝಾನ್ ಮನೀರ್ ತಿಳಿಸಿದ್ದಾನೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ