ಕಾಶ್ಮೀರದ ಭದ್ರತೆ ಅವಲೋಕಿಸಿದ ಶಾ; ಸೇನಾ ಮುಖ್ಯಸ್ಥರೊಂದಿಗೆ ಕೇಂದ್ರ ಗೃಹ ಸಚಿವರ ಚರ್ಚೆ
Team Udayavani, Jun 3, 2022, 10:12 PM IST
ನವದೆಹಲಿ/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಒಂದೇ ವಾರದಲ್ಲಿ 8 ಹಿಂದೂಗಳ ಹತ್ಯೆಯಾದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೇಂದ್ರಾಡಳಿತ ಪ್ರದೇಶದ ಭದ್ರತಾ ವ್ಯವಸ್ಥೆಯ ಅವಲೋಕನಾ ಸಭೆಯನ್ನು ಶುಕ್ರವಾರ ನಡೆಸಿದ್ದಾರೆ.
ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಸೇನಾ ಮುಖ್ಯಸ್ಥ ಮನೋಜ್ ಪಾಂಡೆ ಸೇರಿ ಅನೇಕ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ವಿಜಯ್ ಕುಮಾರ್ ಅಂತ್ಯಕ್ರಿಯೆ:
ಕುಲ್ಗಾಮ ಜಿಲ್ಲೆಯ ಅರ್ರೆàಹ್ ಪ್ರದೇಶದಲ್ಲಿ ಜೂ.2ರಂದು ಉಗ್ರರ ಗುಂಡಿನೇಟಿನಿಂದಾಗಿ ಸಾವನ್ನಪ್ಪಿದ ಬ್ಯಾಂಕ್ ಮ್ಯಾನೇಜರ್ ವಿಜಯ್ ಕುಮಾರ್ ಅವರ ಅಂತ್ಯಕ್ರಿಯೆಯನ್ನು ಶುಕ್ರವಾರ ರಾಜಸ್ಥಾನದ ಹನುಮಾನ್ಗಢದ ಭಗವಾನ್ ಎಂಬ ಹಳ್ಳಿಯಲ್ಲಿ ನಡೆಸಲಾಯಿತು. ವಿಜಯ್ ಕುಮಾರ್ಗೆ ಹುತಾತ್ಮರು ಎಂದು ಸರ್ಕಾರ ಗೌರವಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಹೈಕೋರ್ಟ್ ಮೊರೆ ಹೋದ ಪಂಡಿತರು
ಕಾಶ್ಮೀರದಲ್ಲಿ ಉಗ್ರರ ಗುಂಡಿನೇಟಿಗೆ ಪಂಡಿತರು ಬಲಿಯಾಗುತ್ತಿರುವ ವಿಚಾರದಲ್ಲಿ ಹೈಕೋರ್ಟ್ ಮಧ್ಯಪ್ರವೇಶಿಸಬೇಕೆಂದು ಕಾಶ್ಮೀರ್ ಪಂಡಿತ್ ಸಂಘರ್ಷ ಸಮಿತಿ(ಕೆಪಿಎಸ್ಎಸ್)ಯು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಪಂಡಿತರನ್ನು ಆದಷ್ಟು ಬೇಗ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಸರ್ಕಾರಕ್ಕೆ ಆದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಇದೇ ವೇಳೆ “ಕಾಶ್ಮೀರಿ ಪಂಡಿತರು ಯಾರೂ ಕಾಶ್ಮೀರ ತೊರೆಯಬಾರದು. ಇಲ್ಲೇ ಶಾಂತಿ ಮತ್ತು ಗೌರವಯುತವಾಗಿ ಬದುಕಬೇಕು’ ಎಂದು ಕಾಶ್ಮೀರದ ಗ್ರ್ಯಾಂಡ್ ಮುಫ್ತಿ ನಸೀರ್-ಉಲ್-ಇಸ್ಲಾಂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ