ಕಾಶ್ಮೀರಕ್ಕೆ ಒಂದಲ್ಲ 50 ಬಾರಿ ಭೇಟಿ ಕೊಡುವೆ: ರಾಜನಾಥ್‌


Team Udayavani, Sep 12, 2017, 8:20 AM IST

rajnath-singh.jpg

ಶ್ರೀನಗರ: “ಅಗತ್ಯಬಿದ್ದರೆ ಜಮ್ಮು ಮತ್ತು ಕಾಶ್ಮೀರಕ್ಕೆ ಒಂದಲ್ಲ 50 ಬಾರಿ ಭೇಟಿ ನೀಡಲೂ ಸಿದ್ಧನಿದ್ದೇನೆ. ರಾಜ್ಯದಲ್ಲಿ ಸಹಾನುಭೂತಿ (ಕಂಪ್ಯಾಷನ್‌), ಸಂಪರ್ಕ (ಕಮ್ಯುನಿಕೇಷನ್‌), ಸಹಬಾಳ್ವೆ (ಕೊ-ಎಕ್ಸಿಸ್ಟೆನ್ಸ್‌) ಎಂಬ ಮೂರು “ಸಿ’ಗಳ ಮೂಲಕ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು.’ ಹೀಗೆಂದು ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ.

ಜಮ್ಮು-ಕಾಶ್ಮೀರ ಭೇಟಿ ಯಲ್ಲಿರುವ ಅವರು ವಿವಿಧ ಸಂಘಟನೆಗಳು, ರಾಜಕೀಯ ಪಕ್ಷಗಳ ನಾಯಕರ ಜತೆಗೆ ಸರಣಿ ಸಭೆ ನಡೆಸಿದ ಬಳಿಕ ಸೋಮವಾರ ಮಾತನಾಡಿದರು. ಕಣಿವೆ ರಾಜ್ಯದಲ್ಲಿ ಶಾಂತಿಯ ಒಸರು ಇನ್ನೂ ಬತ್ತಿ ಹೋಗಿಲ್ಲ. ಹಿಂದಿನ ಪರಿಸ್ಥಿತಿಗಿಂತ ಹಾಲಿ ದಿನಮಾನಗಳಲ್ಲಿ ರಾಜ್ಯದ ಸ್ಥಿತಿ ಗಣನೀಯ ಪ್ರಮಾಣದಲ್ಲಿ ಸುಧಾರಿಸಿದೆ. ಸಮಸ್ಯೆ ಪರಿಹಾರದ ನಿಟ್ಟಿನಲ್ಲಿ ಅಗತ್ಯ ಬಿದ್ದ ಎಲ್ಲರನ್ನೂ ಭೇಟಿಯಾಗುವೆ. ಅದಕ್ಕಾಗಿ 50 ಬಾರಿ ರಾಜ್ಯಕ್ಕೆ ಭೇಟಿ ನೀಡಲೂ ಸಿದ್ಧವೆಂದು ಹೇಳಿದ್ದಾರೆ ಕೇಂದ್ರ ಗೃಹ ಸಚಿವ.

ಕಣಿವೆ ರಾಜ್ಯದಲ್ಲಿ 18 ವರ್ಷಕ್ಕಿಂತ ಕೆಳಗಿನವರನ್ನು ಇತರ ಅಪರಾಧಿಗಳಂತೆ ಪರಿಗಣಿಸಬಾರದು. ಬಾಲಾಪರಾಧ ಕಾಯ್ದೆ ಯನ್ವವೇ ಅವರನ್ನು ಪರಿಗಣಿಸಬೇಕೆಂದರು. ಮಾತುಕತೆಗೆ ಯಾರಿಗೂ ಅಧಿಕೃತ ಆಹ್ವಾನ ನೀಡುವುದಿಲ್ಲ. ರಾಜ್ಯದಲ್ಲಿ ಶಾಂತಿ ನೆಲೆಸ ಬೇಕೆಂದು ಪ್ರತಿಪಾದಿಸುವ ಸಂಘಟನೆ ಸರಕಾರದ ಜತೆ ಮಾತುಕತೆಗೆ ಬರಬಹುದು ಎಂದು ಆಹ್ವಾನ ನೀಡಿದ್ದಾರೆ ರಾಜನಾಥ್‌. 2014ರ ಬಳಿಕ ಪಾಕಿಸ್ತಾನದ ಜತೆ ಸೌಹಾರ್ದಯುತ ಸಂಬಂಧ ಬೆಳೆಸಲು ಕೇಂದ್ರ ಮುಂದಾಗಿದೆ. ವಾಜಪೇಯಿ ಪ್ರಧಾನಿಯಾಗಿದ್ದಾಗ ಮತ್ತು ಪ್ರಧಾನಿ ಮೋದಿ ನೇತೃತ್ವದ ಸರಕಾರದ ಅವಧಿಯಲ್ಲಿ ಕೂಡ ಆ ದೇಶದ ಜತೆಗೆ ಉತ್ತಮ ಸಂಬಂಧ ಸ್ಥಾಪಿಸಲು ಕ್ರಮ ಕೈಗೊಂಡರೂ, ಅತ್ತಲಿಂದ ಸೂಕ್ತ ಪ್ರತಿಕ್ರಿಯೆ ವ್ಯಕ್ತವಾಗಲಿಲ್ಲ ಎಂದೂ ಹೇಳಿದ್ದಾರೆ. ಇದೇ ವೇಳೆ, ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 35ಎ ವಿಧಿಯ ವಿಚಾರದಲ್ಲಿ ಕಾಶ್ಮೀರಿಗರ ಭಾವನೆಗಳಿಗೆ ವಿರುದ್ಧವಾಗಿ ಹೋಗು ವುದಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.