ಕಾಶ್ಮೀರ ಕಣಿವೆಯಲ್ಲಿ ಹಿಂದೂಗಳು ಸುರಕ್ಷಿತವಾಗಿಲ್ಲ
ಉಗ್ರರಿಂದ ಹತ್ಯೆಗೀಡಾದ ಕೃಷನ್ ಸೋದರಿ ಅಳಲು
Team Udayavani, Oct 16, 2022, 10:00 PM IST
ಶ್ರೀನಗರ:“ಕಾಶ್ಮೀರದಲ್ಲಿ ಹಿಂದೂಗಳು ಸುರಕ್ಷಿತವಾಗಿಲ್ಲ. ಎಲ್ಲ ಕಾಶ್ಮೀರಿ ಪಂಡಿತರನ್ನೂ ಭಯೋತ್ಪಾದಕರು ಕೊಂದು ಹಾಕುತ್ತಾರೆ.
ಹೀಗೆಂದು ಹೇಳಿದ್ದು ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ನಲ್ಲಿ ಶನಿವಾರ ಉಗ್ರರಿಂದ ಹತ್ಯೆಗೀಡಾದ ಕಾಶ್ಮೀರಿ ಪಂಡಿತ ಪುರನ್ ಕೃಷನ್ ಭಟ್ ಅವರ ಸಹೋದರಿ ನೀಲಂ.
56 ವರ್ಷದ ಕೃಷನ್ ಅವರ ಅಂತ್ಯಕ್ರಿಯೆ ಭಾನುವಾರ ಜಮ್ಮುವಿನಲ್ಲಿ ನೆರವೇರಿದೆ. ಈ ವೇಳೆ ಭಾವೋದ್ವೇಗಕ್ಕೊಳಗಾಗಿ ಮಾತನಾಡಿದ ನೀಲಂ, “ನಮ್ಮ ನೆರೆಹೊರೆಯಲ್ಲಿರುವ ಮುಸ್ಲಿಮರಿಗೂ ನಮ್ಮನ್ನು ರಕ್ಷಿಸಲು ಸಾಧ್ಯವಾಗುತ್ತಿಲ್ಲ. ಉಗ್ರರು ಎಲ್ಲ ಕಾಶ್ಮೀರಿ ಪಂಡಿತರನ್ನು ಕೊಲ್ಲಲು ಹೊಂಚು ಹಾಕಿ ಕಾಯುತ್ತಿದ್ದಾರೆ.
ಹೀಗಾಗಿ, ಎಲ್ಲರೂ ಕಣಿವೆ ಬಿಟ್ಟು ಹೋಗಿ ಎಂದು ನಾನು ಬೇಡಿಕೊಳ್ಳುತ್ತೇನೆ’ ಎಂದು ಗೋಗರೆದಿದ್ದಾರೆ. ಕೃಷನ್ ಅವರ ಸಾವಿನ ಸುದ್ದಿ ಕೇಳುತ್ತಿದ್ದಂತೆ, ಸ್ಥಳೀಯ ಮುಸ್ಲಿಂ ನೆರೆಹೊರೆಯವರೂ ಅವರ ಮನೆಗೆ ಧಾವಿಸಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.
ಇಸ್ಲಾಂಗೆ ವಿರುದ್ಧ:
ಇದೇ ವೇಳೆ, ಕೃಷನ್ ಅವರ ಹತ್ಯೆಯು ಭೀಕರ ಹಾಗೂ ಖಂಡನೀಯ ಎಂದು ಹೇಳಿರುವ ಕಣಿವೆಯ ಮುಸ್ಲಿಂ ಧಾರ್ಮಿಕ ಮುಖಂಡರು, “ಇಂಥ ಕೃತ್ಯಗಳು ಇಸ್ಲಾಂನ ಮೂಲ ಆಶಯಗಳಿಗೆ ವಿರುದ್ಧವಾದದ್ದು’ ಎಂದು ಹೇಳಿದ್ದಾರೆ. ಒಬ್ಬ ಅಮಾಯಕನನ್ನು ಕೊಲ್ಲುವುದು ಇಡೀ ಮಾನವತೆಯನ್ನೇ ಹತ್ಯೆ ಮಾಡಿದ್ದಕ್ಕೆ ಸಮ. ಇಂಥದ್ದನ್ನು ಇಸ್ಲಾಂ ಯಾವತ್ತೂ ಬೆಂಬಲಿಸುವುದಿಲ್ಲ ಎಂದು ಇಮಾಮ್ಗಳು ಮತ್ತು ಖತೀಬರು ಹೇಳಿದ್ದಾರೆ.
ಕಾಶ್ಮೀರದಲ್ಲಿ ಮೊಂಬತ್ತಿ ಮೆರವಣಿಗೆ
ಭಾನುವಾರ ಕಾಶ್ಮೀರ ಕಣಿವೆಯ ಹಲವು ಪ್ರದೇಶಗಳಲ್ಲಿ ಕೃಷನ್ ಹತ್ಯೆ ಖಂಡಿಸಿ ಮೊಂಬತ್ತಿ ಮೆರವಣಿಗೆಗಳು ನಡೆದಿವೆ. ಶ್ರೀನಗರ, ಬಾರಾಮುಲ್ಲಾ, ಬಂಡಿಪೋರಾ, ಅನಂತ್ನಾಗ್, ಕುಲ್ಗಾಂ, ಕುಪ್ವಾರಾ, ಗಂದೇರ್ಬಾಲ್ ಮತ್ತು ಶೋಪಿಯಾನ್ ಜಿಲ್ಲೆಗಳಲ್ಲಿ ಮೌನ ಪ್ರತಿಭಟನೆಗಳು ನಡೆದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ