ಕಟ್ಟೆಯೊಡೆದ ದುಃಖ; ಭುಗಿಲೆದ್ದ ಆಕ್ರೋಶ; ಲಾಠಿ ಪ್ರಹಾರ, ಅಶ್ರುವಾಯು

ರಾಹುಲ್‌ ಭಟ್‌ ಹತ್ಯೆ ಖಂಡಿಸಿ ಬೀದಿಗಿಳಿದ ಪಂಡಿತರು

Team Udayavani, May 14, 2022, 2:36 AM IST

ಕಟ್ಟೆಯೊಡೆದ ದುಃಖ; ಭುಗಿಲೆದ್ದ ಆಕ್ರೋಶ; ಲಾಠಿ ಪ್ರಹಾರ, ಅಶ್ರುವಾಯು

ಶ್ರೀನಗರ: ಜಮ್ಮು-ಕಾಶ್ಮೀರದ ಬದ್ಗಾಂನಲ್ಲಿ ಉಗ್ರರು 36 ವರ್ಷದ ಸರಕಾರಿ ಉದ್ಯೋಗಿಯ ಹತ್ಯೆ ಮಾಡಿರುವುದನ್ನು ಖಂಡಿಸಿ ಇಡೀ ಕಾಶ್ಮೀರಿ ಪಂಡಿತ ಸಮುದಾಯ ಬೀದಿಗಿಳಿದಿದೆ.

ತಮ್ಮ ಸಮುದಾಯದ ರಕ್ಷಣೆಗೆ ಆಗ್ರಹಿಸಿ ಗುರುವಾರ ರಾತ್ರಿಯಿಂದಲೇ ಕಣಿವೆಯ ವಿವಿಧೆಡೆ ನಿರಂತರ ಪ್ರತಿಭಟನೆ ಆರಂಭ ವಾಗಿದೆ.

ಶುಕ್ರವಾರ ಬೆಳಗ್ಗೆ ಬದ್ಗಾಂನ ಶೇಖ್‌ಪೋರಾ ಪ್ರದೇಶದಲ್ಲಿ ಜಮಾಯಿಸಿದ ಕಾಶ್ಮೀರಿ ಪಂಡಿತರು ಅಲ್ಲಿಂದ ಶ್ರೀನಗರ ಏರ್‌ಪೋರ್ಟ್‌ನತ್ತ ಹೊರಟಿದ್ದು, ಅವರನ್ನು ತಡೆಯಲು ಪೊಲೀಸರು ಲಾಠಿ ಪ್ರಹಾರ, ಅಶ್ರುವಾಯು ಪ್ರಯೋಗಿಸಬೇಕಾಯಿತು.

ಸಮುದಾಯದ ಬಹುತೇಕ ಮಂದಿ ತಮ್ಮ ತಾತ್ಕಾಲಿಕ ಶಿಬಿರಗಳನ್ನು ತೊರೆದು ರಸ್ತೆಗಿಳಿದಿದ್ದು, ತಮಗೆ ಸುರಕ್ಷೆ ಒದಗಿಸದ ಆಡಳಿತ ಹಾಗೂ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. “ಇದೇನಾ ನಿಮ್ಮ ಪುನರ್ವಸತಿ? ಕೊಲ್ಲಲ್ಪಡಲೆಂದೇ ನಮ್ಮನ್ನು ಇಲ್ಲಿಗೆ ಕರೆತಂದಿರಾ’ ಎಂದೂ ಆಕ್ರೋಶಭರಿತರಾಗಿ ಪ್ರಶ್ನಿಸಿದ್ದಾರೆ.

ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಶುಕ್ರವಾರ ರಾಹುಲ್‌ ಭಟ್‌ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಶುಕ್ರವಾರ ಬೆಳಗ್ಗೆ ದುರ್ಗಾನಗರದಲ್ಲಿ ರಾಹುಲ್‌ ಅಂತ್ಯಕ್ರಿಯೆ ನೆರವೇರಿದೆ.

ಸಾಮೂಹಿಕ ರಾಜೀನಾಮೆ ಪತ್ರ ರವಾನೆ
ರಾಹುಲ್‌ ಹತ್ಯೆ ಖಂಡಿಸಿ ಕಾಶ್ಮೀರಿ ಪಂಡಿತರ ನೌಕರರ ಸಂಘದ ಎಲ್ಲ ಸದಸ್ಯರೂ ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ. ನಮಗೆ ಭದ್ರತೆ ನೀಡಲು ವಿಫ‌ಲರಾಗಿದ್ದೀರಿ. ರಾಜೀನಾಮೆ ನೀಡದೆ ಬೇರೆ ದಾರಿಯಿಲ್ಲ ಎಂದು ಮೋದಿ ಹಾಗೂ ಮನೋಜ್‌ ಸಿನ್ಹಾರನ್ನು ಉದ್ದೇಶಿಸಿ ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.

ಕಾನ್‌ಸ್ಟೆಬಲ್‌ ಹತ್ಯೆ
ಕಾಶ್ಮೀರಿ ಪಂಡಿತನ ಹತ್ಯೆ ಬೆನ್ನಲ್ಲೇ ಪುಲ್ವಾಮಾ ಜಿಲ್ಲೆಯ ಗುಡೂರಾ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ಕಾನ್‌ಸ್ಟೆಬಲ್‌ ರಿಯಾಜ್‌ ಅಹ್ಮದ್‌ ಥೋಕರ್‌ ಅವರನ್ನು ಉಗ್ರರು ಹತ್ಯೆಗೈದಿದ್ದಾರೆ. ಈ ನಡುವೆ, ಉಗ್ರರೊಂದಿಗೆ ನಂಟು ಆರೋಪದಲ್ಲಿ ಪ್ರೊಫೆಸರ್‌, ಪೊಲೀಸ್‌ ಸಿಬಂದಿ ಸಹಿತ ಮೂವರು ಸರಕಾರಿ ನೌಕರರನ್ನು ಜಮ್ಮು-ಕಾಶ್ಮೀರ ಆಡಳಿತ ಕೆಲಸದಿಂದ ವಜಾ ಮಾಡಿದೆ.

ಹಂತಕರ ಹತ್ಯೆ
ಬಂಡಿಪೋರಾದ ಬ್ರಾರ್‌ ಅರಗಮ್‌ನಲ್ಲಿ ಶುಕ್ರವಾರ ಸಂಜೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಲಷ್ಕರ್‌ ಉಗ್ರರನ್ನು ಕೊಲ್ಲಲಾಗಿದೆ. ಈ ಪೈಕಿ ಇಬ್ಬರು ರಾಹುಲ್‌ ಹತ್ಯೆಯಲ್ಲಿ ಭಾಗಿಯಾದವರೆಂದು ಪೊಲೀ ಸರು ತಿಳಿಸಿದ್ದು, ಭಟ್‌ ಹತ್ಯೆಗೆ 24 ಗಂಟೆಗಳಲ್ಲೇ ಪ್ರತೀಕಾರ ತೀರಿಸಿದಂತಾಗಿದೆ.

 

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.