ಕಾಶ್ಮೀರಿ ಪಂಡಿತರಿಗೆ ಅನ್ಯಾಯ; ರಾಹುಲ್‌ ಗಾಂಧಿ

ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ದೊರಕಿಸಲು ಸರ್ವ ಪ್ರಯತ್ನ

Team Udayavani, Jan 23, 2023, 9:52 PM IST

ಕಾಶ್ಮೀರಿ ಪಂಡಿತರಿಗೆ ಅನ್ಯಾಯ; ರಾಹುಲ್‌ ಗಾಂಧಿ

ಜಮ್ಮು: ಕೇಂದ್ರ ಸರ್ಕಾರದ ಆಡಳಿತದಲ್ಲಿ ಕಾಶ್ಮೀರಿ ಪಂಡಿತರು ಅನ್ಯಾಯ ಎದುರಿಸುತ್ತಿದ್ದಾರೆ. ಅವರಿಗೆ ಸೂಕ್ತ ನ್ಯಾಯ ದೊರಕಬೇಕಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪ್ರತಿಪಾದಿಸಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ ನಡೆದ ಭಾರತ್‌ ಜೋಡೋ ಯಾತ್ರೆ ಸಮಾರಂಭದಲ್ಲಿ ಮಾತನಾಡಿದ ಅವರು, “ಜಮ್ಮು ಮತ್ತು ಕಾಶ್ಮೀರಕ್ಕೆ ಪುನಃ ರಾಜ್ಯ ಸ್ಥಾನಮಾನ ದೊರಕಿಸುವ ನಿಟ್ಟಿನಲ್ಲಿ ಕಾಂಗ್ರೆಸ್‌ ತನ್ನ ಸಂಪೂರ್ಣ ಶಕ್ತಿ ವಿನಿಯೋಗಿಸಲಿದೆ,’ ಎಂದು ಹೇಳಿದರು.

“ರಾಜ್ಯದ ಸ್ಥಾನಮಾನ ನೀಡದೇ ಇಲ್ಲಿನ ನಾಗರಿಕರ ಹಕ್ಕುಗಳನ್ನು ಕಸಿಯಲಾಗಿದೆ. ರಾಜ್ಯದಲ್ಲಿ ನಿರುದ್ಯೋಗ ತಾಂಡವಾಡುತ್ತಿದೆ. ಇಲ್ಲಿನ ವ್ಯಾಪಾರವನ್ನು ಹೊರಗಿನವರು ನಿಯಂತ್ರಿಸುತ್ತಿದ್ದಾರೆ. ಯುವಕರು ತಾವು ವೈದ್ಯ, ಎಂಜನಿಯರ್‌ ಮತ್ತು ವಕೀಲರಾಗಬೇಕೆಂದು ಕನಸು ಕಾಣುತ್ತಿದ್ದಾರೆ. ಆದರೆ ಅದಕ್ಕೆ ಸೂಕ್ತ ಸೌಲಭ್ಯಗಳು ಇಲ್ಲವಾಗಿದೆ,’ ಎಂದು ದೂರಿದರು.

“ಕಾಶ್ಮೀರಿ ಪಂಡಿತರ ನಿಯೋಗ ನನ್ನನ್ನು ಭೇಟಿ ಮಾಡಿತು. ಈ ವೇಳೆ ಕಾಶ್ಮೀರಿ ಪಂಡಿತರನ್ನು ಕೇಂದ್ರೀಕರಿಸಿ ನಡೆಯುತ್ತಿರುವ ಹತ್ಯೆಗಳು ಹಾಗೂ ಪ್ರಧಾನಿಗಳ ಪ್ಯಾಕೇಜ್‌ ಅಡಿ ಉದ್ಯೋಗ ಪಡೆದವರ ಪ್ರತಿಭಟನೆ ಬಗ್ಗೆ ತಿಳಿಸಿದರು,’ ಎಂದರು.

ಕ್ಷಮೆಗೆ ಒತ್ತಾಯ:
“ಸಮಸ್ಯೆಗಳ ಬಗ್ಗೆ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿಂಗ್‌ ಅವರ ಬಳಿ ನಿಯೋಗ ತಿಳಿಸಿದಾಗ, “ಭಿಕ್ಷೆ ಬೇಡದಂತೆ’ ಅವರು ಹೇಳಿರುವುದನ್ನು ಕೇಳಿ ದಿಗ್ಭ್ರಮೆಯಾಯಿತು. ಕೂಡಲೇ ಲೆಫ್ಟಿನೆಂಟ್‌ ಗವರ್ನರ್‌ ಕಾಶ್ಮೀರಿ ಪಂಡಿತರ ಕ್ಷಮೆಯಾಚಿಸಬೇಕು,’ ಎಂದು ಒತ್ತಾಯಿಸಿದರು.

“ಸಂಸತ್‌ನಲ್ಲಿ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಚರ್ಚಿಸಲು ನಮಗೆ ಅವಕಾಶ ನೀಡಲಿಲ್ಲ. ಹೀಗಾಗಿ ಭಾರತ್‌ ಜೋಡೋ ಯಾತ್ರೆ ಹಮ್ಮಿಕೊಳ್ಳಲು ತೀರ್ಮಾನಿಸಲಾಯಿತು. 3,500 ಕಿ.ಮೀ. ಯಾತ್ರೆ ನಡೆಸಿ ಜನರ ಸಂಕಷ್ಟಗಳನ್ನು ಆಲಿಸಲಾಗಿದೆ,’ ಎಂದರು. ಯಾತ್ರೆ ಜಮ್ಮು ನಗರ ಪ್ರವೇಶಿಸುತ್ತಿದ್ದಂತೆ ಅವರು ಖ್ಯಾತ ರಘುನಾಥ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಸಿದರು.

ಸೂಕ್ತ ಹುಡುಗಿ ಸಿಕ್ಕಿದರೆ ಮದುವೆ:
ಯೂಟ್ಯೂಬ್‌ ಸಂದರ್ಶನವೊಂದರಲ್ಲಿ ಮದುವೆ ಯಾವಾಗ ಆಗುತ್ತಿರಿ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಾಹುಲ್‌ ಗಾಂಧಿ, “ಸೂಕ್ತ ಹುಡುಗಿ ದೊರೆತ ತಕ್ಷಣ ಮದುವೆ ಆಗುತ್ತೇನೆ. ಅವಳು ನನ್ನ ಎಲ್ಲಾ ಕೆಲಸಗಳಲ್ಲೂ ಸಾಥ್‌ ನೀಡಬೇಕು. ಪ್ರೀತಿ ನೀಡುವ ಜತೆಗೆ ಬುದ್ಧಿವಂತೆ ಆಗಿರಬೇಕು. ನನ್ನ ತಾಯಿ ಮತ್ತು ಅಜ್ಜಿಯ ಗುಣಗಳು ಇರಬೇಕು,’ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.