ಸೇನೆಗೆ ಸೇರಿಕೊಳ್ಳಲು ಕಾಶ್ಮೀರಿಗರ ಉತ್ಸಾಹ

ಉಗ್ರರ ಕರೆಯನ್ನೂ ನಿರ್ಲಕ್ಷಿಸಿದ ಯುವಕರು

Team Udayavani, Jul 11, 2019, 5:27 AM IST

w-31

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ಅಲ್ ಖೈದಾ ಉಗ್ರ ಸಂಘಟನೆಯ ಮುಖ್ಯಸ್ಥ ಅಯ್ಮನ್‌ ಅಲ್ ಜವಾಹಿರಿಯ ಕರೆಯನ್ನು ನಿರ್ಲಕ್ಷಿಸಿ ಕಾಶ್ಮೀರದ ಯುವಕರು ಭಾರತೀಯ ಸೇನೆಗೆ ಸೇರಲು ಉತ್ಸಾಹದಿಂದ ಮುಂದಾಗುತ್ತಿರುವುದು ಕಾಶ್ಮೀರದ ಒಟ್ಟು ಚಿತ್ರಣದಲ್ಲಿ ಉಂಟಾದ ಮಹತ್ವದ ಬದಲಾವಣೆಯ ಸೂಚಕವಾಗಿದೆ.

ಮಂಗಳವಾರ ಉಗ್ರ ಅಲ್ ಜವಾಹಿರಿ 14 ನಿಮಿಷದ ವೀಡಿಯೋ ಬಿಡುಗಡೆ ಮಾಡಿ ಭಾರತದ ವಿರುದ್ಧ ಜಿಹಾದ್‌ ಸಾರುವ ಬಗ್ಗೆ ಕರೆ ನೀಡಿದ್ದ. ಅದರ ಮರುದಿನವೇ, ಅಂದರೆ ಬುಧವಾರ ಕಾಶ್ಮೀರದಲ್ಲಿ ಸೇನೆ ಹಮ್ಮಿಕೊಂಡಿದ್ದ ನೇಮಕಾತಿ ಆಂದೋಲನದಲ್ಲಿ ಸಾವಿರಾರು ಕಾಶ್ಮೀರಿ ಯುವಕರು ಸೇನೆಗೆ ಸೇರಲು ಅತ್ಯುತ್ಸಾಹದಿಂದ ಮುಂದೆ ಬಂದಿದ್ದಾರೆ. ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಬುಧವಾರ ಆರಂಭವಾದ ನೇಮಕಾತಿ ಕ್ಯಾಂಪೇನ್‌ ಜು.16ರ ವರೆಗೂ ನಡೆಯಲಿದೆ.

5,500 ಯುವಕರು ಹಾಜರ್‌: ಬುಧವಾರ ಆರಂಭವಾದ ನೇಮಕಾತಿ ಕ್ಯಾಂಪೇನ್‌ಗೆ 5,500 ಕಾಶ್ಮೀರಿ ಯುವಕರು ಹಾಜರಾಗಿದ್ದಾರೆ. ಅಷ್ಟೇ ಅಲ್ಲ, ನೇಮಕಾತಿ ಕ್ಯಾಂಪೇನ್‌ಗೆ ಆಗಮಿಸಿದ ಯುವಕರು ಇತರ ಕಾಶ್ಮೀರಿಗರೂ ಸೇನೆಗೆ ಸೇರಲಿ ಎಂದು ಆಗ್ರಹಿಸಿದ್ದಾರೆ. ಭಾರತೀಯ ಸೇನೆಗೆ ಸೇರುವುದು ನನ್ನ ಕನಸು. ಸೇನೆಗೆ ಸೇರಲು ನಾನು ತುಂಬಾ ಉತ್ಸುಕನಾಗಿದ್ದೇನೆ. ಈಗಾಗಲೇ ಮೊದಲ ಹಂತದಲ್ಲಿ ಪಾಸಾಗಿದ್ದೇನೆ ಎಂದು ಓರ್ವ ಯುವಕ ಹೇಳಿಕೊಂಡಿದ್ದಾನೆ. ಕಾಶ್ಮೀರದಲ್ಲಿ ತುಂಬಾ ನಿರುದ್ಯೋಗ ಇದೆ. ನಾನು ಸೇನೆಗೆ ಸೇರಿದರೆ ನನ್ನ ಕುಟುಂಬಕ್ಕೆ ಆಸರೆಯಾಗುತ್ತದೆ. ನೇಮಕಾತಿಯಲ್ಲಿ ತುಂಬಾ ಸ್ಪರ್ಧೆ ಇದೆ. ಆದರೂ ಎಲ್ಲ ಯುವಕರೂ ಅರ್ಜಿ ಹಾಕಲಿ ಎಂದು ನೇಮಕಾತಿ ಕ್ಯಾಂಪೇನ್‌ಗೆ ಆಗಮಿಸಿದ ಕೆಲವು ಯುವಕರು ಹೇಳಿಕೊಂಡಿದ್ದಾರೆ.

ಭಾರತದ ಸೇನೆ ವಿರುದ್ಧ ಜೆಹಾದ್‌ಗೆ ಕರೆ

ಜುಲೈ 9ರಂದು 14 ನಿಮಿಷಗಳ ವೀಡಿಯೋ ಬಿಡುಗಡೆ ಮಾಡಿರುವ ಅಲ್ಖೈದಾ ಮುಖ್ಯಸ್ಥ ಅಲ್ ಜವಾಹಿರಿ, ಭಾರತದಲ್ಲಿ ಸೇನೆ ಮತ್ತು ಸರಕಾರದ ವಿರುದ್ಧ ದಾಳಿ ನಡೆಸುವಂತೆ ಕಾಶ್ಮೀರದ ಉಗ್ರ ಸಂಘಟನೆಗಳಿಗೆ ಸೂಚನೆ ನೀಡಿದ್ದ. ಈ ಸಂದರ್ಭದಲ್ಲಿ ಕಾಶ್ಮೀರ ಹೋರಾಟವು ಭಾರತದ ಸೇನೆ ಮತ್ತು ಸರಕಾರದ ಮೇಲೆ ದಾಳಿಯನ್ನೇ ಕೇಂದ್ರೀಕರಿಸಿರಬೇಕು. ಭಾರತದ ಆರ್ಥಿಕತೆ ಮತ್ತು ಮಾನವ ಸಂಪನ್ಮೂಲವನ್ನು ನಾಶ ಮಾಡಬೇಕು ಎಂದು ಜವಾಹಿರಿ ವಿಡಿಯೋದಲ್ಲಿ ಹೇಳಿದ್ದಾನೆ. ಪಾಕಿಸ್ಥಾನದ ಸರಕಾರ ಮತ್ತು ಸೇನೆಯನ್ನು ಅಮೆರಿಕದ ಬಾಲಬಡುಕರು ಎಂದು ಜರೆದಿರುವ ಜವಾಹಿರಿ, ಪಾಕಿಸ್ಥಾನದ ಕಾಶ್ಮೀರ ನೀತಿಯು ತಾಲಿಬಾನ್‌ ರೀತಿ ಇರಬೇಕು ಎಂದೂ ಹೇಳಿದ್ದಾನೆ. ಇನ್ನೊಂದೆಡೆ ಪಾಕಿಸ್ಥಾನ ಸೇನೆಯ ವಿರುದ್ಧ ಜವಾಹಿರಿ ಕಿಡಿ ಕಾರಿದ್ದಾನೆ. ಪಾಕಿಸ್ಥಾನವು ಕಾಶ್ಮೀರಕ್ಕೆ ಸ್ವಾತಂತ್ರ್ಯ ನೀಡುವ ನಿಟ್ಟಿನಲ್ಲಿ ನಿರೀಕ್ಷಿತ ಕೆಲಸ ಮಾಡುತ್ತಿಲ್ಲ. ಅಫ್ಘಾನಿಸ್ಥಾನದಲ್ಲಿ ಅಮೆರಿಕದ ಮಾತು ಕೇಳಿಕೊಂಡು ಉಗ್ರರ ವಿರುದ್ಧ ಹೋರಾಟ ನಡೆಸುತ್ತಿದೆ. ಬಂಗಾಲವನ್ನೂ ಇದೇ ಸೇನೆ ಭಾರತಕ್ಕೆ ನೀಡಿತು. ಹೀಗಾಗಿ ಸೇನೆಯ ಮೇಲೆ ವಿಶ್ವಾಸ ಇಡಲಾಗದು ಎಂದು ಜವಾಹಿರಿ ಕಿಡಿಕಾರಿದ್ದಾನೆ.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.