ಕಾಶ್ಮೀರಿಗರ ಆತಂಕ ದೂರ ಮಾಡಬೇಕಿದೆ
Team Udayavani, Sep 25, 2019, 5:30 AM IST
ಹೊಸದಿಲ್ಲಿ/ಜಮ್ಮು: ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ವಾಪಸ್ ಪಡೆದ ಕಾರಣ ಕಾಶ್ಮೀರಿ ಗರು ದೇಶದ ಇತರರೊಂದಿಗೆ ಬೆರೆಯಲು ಅನುಕೂಲ ಕಲ್ಪಿಸಿದಂತಾಗಿದೆ. ಸಂವಿಧಾನದ 370ನೇ ವಿಧಿ ರದ್ದು ಬಳಿಕ ಜಮ್ಮು ಮತ್ತು ಕಾಶ್ಮೀರದ ಜನರಲ್ಲಿ ತಾವು ತಮ್ಮ ಭೂಮಿ ಹಾಗೂ ಉದ್ಯೋಗ ಕಳೆದುಕೊಳ್ಳುತ್ತೇವೆ ಎಂಬ ಆತಂಕ ಮನೆ ಮಾಡಿದೆ. ಇಂಥ ಆತಂಕವನ್ನು ದೂರ ಮಾಡುವ ಕೆಲಸವನ್ನು ಮಾಡಬೇಕಾಗಿದೆ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ವಿದೇಶಿ ಮಾಧ್ಯಮಗಳನ್ನು ಪ್ರತಿನಿಧಿಸುವ ಪತ್ರಕರ್ತರೊಂದಿಗೆ ಮಂಗಳವಾರ ನಡೆದ ಸಂವಾದದಲ್ಲಿ ಮಾತನಾಡಿದ ಭಾಗವತ್, ಹಿಂದೆಲ್ಲ ಕಾಶ್ಮೀರಿಗರು ಪ್ರತ್ಯೇಕವಾಗಿದ್ದರು. ಆದರೆ, ಈಗ ಸರಕಾರದ ನಿರ್ಧಾರದಿಂದಾಗಿ ಅವರು ಮತ್ತು ದೇಶದ ಇತರೆ ಜನರ ನಡುವೆ ಇದ್ದ ಗೋಡೆಯೊಂದು ತೆರವಾದಂತಾಗಿದೆ ಎಂದಿದ್ದಾರೆ.
ಇದೇ ವೇಳೆ, ಥಳಿಸಿ ಹತ್ಯೆಗೈಯ್ಯುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಎಲ್ಲ ರೀತಿಯ ಹಿಂಸಾಚಾರಗಳನ್ನೂ ಆರೆಸ್ಸೆಸ್ ಖಂಡಿಸುತ್ತದೆ ಎಂದಿದ್ದಾರೆ.
ಉಗ್ರರನ್ನು ಗುರುತಿಸು: ಕಣಿವೆ ರಾಜ್ಯದಲ್ಲಿ ನಾಗರಿಕರ ಮೇಲೆ ದೌರ್ಜನ್ಯ ಎಸಗುತ್ತಿರುವ ಉಗ್ರರನ್ನು ಪತ್ತೆಹಚ್ಚಿ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಮ್ಮು-ಕಾಶ್ಮೀರ ಪೊಲೀಸ್ ಮುಖ್ಯಸ್ಥ ದಿಲ್ಬಾಘ… ಸಿಂಗ್ ಮಂಗಳವಾರ ತಿಳಿಸಿದ್ದಾರೆ.
ಪರಿಸ್ಥಿತಿ ಹೀನಾಯವಾಗಿದೆ ಎಂದ ಆಜಾದ್: ಜಮ್ಮು-ಕಾಶ್ಮೀರಕ್ಕೆ 6 ದಿನಗಳ ಪ್ರವಾಸ ಕೈಗೊಂಡಿರುವ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್, “ಕಣಿವೆರಾಜ್ಯದ ಸ್ಥಿತಿ ಹೀನಾಯವಾಗಿದೆ’ ಎಂದು ಹೇಳಿದ್ದಾರೆ. ಜತೆಗೆ, 6 ದಿನಗಳ ಪ್ರವಾಸ ಮುಗಿದ ಬಳಿಕ ಹೇಳಬೇಕಾದ್ದನ್ನು ಹೇಳುತ್ತೇನೆ. ಸದ್ಯಕ್ಕೆ ಯಾವ ಪ್ರತಿಕ್ರಿಯೆಯನ್ನೂ ನೀಡುವುದಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್