ಕರ್ನಾಟಕದಲ್ಲಿ ಕಾಂಗ್ರೆಸ್ ಸೋಲಿಗೆ ಕೆಸಿಆರ್ ಸುಪಾರಿ?
Team Udayavani, Jan 21, 2023, 6:35 AM IST
ಹೈದರಾಬಾದ್: ಕರ್ನಾಟಕದಲ್ಲಿ ಕಾಂಗ್ರೆಸ್ ಅನ್ನು ಸೋಲಿಸಲು ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್ ಅವರು, ಕೈ ಮುಖಂಡರೊಬ್ಬರಿಗೆ 500 ಕೋ. ರೂ.ಗಳ ಸುಪಾರಿ ನೀಡಿದ್ದಾರೆ ಎಂದು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರೇವಂತ್ ರೆಡ್ಡಿ ಆರೋಪಿಸಿದ್ದಾರೆ.
ಕೆಸಿಆರ್ ಅವರು ಕರ್ನಾಟಕ ಕಾಂಗ್ರೆಸ್ನಲ್ಲಿ ತಳಮಳ ಸೃಷ್ಟಿಸಿ, ಈ ಮೂಲಕ ಬಿಜೆಪಿಗೆ ಅನುಕೂಲ ಕಲ್ಪಿಸಲು ಮುಂದಾಗಿದ್ದಾರೆ. ಇದು ಗೊತ್ತಿದ್ದೂ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು, ಕೆಸಿಆರ್ ಜತೆಗೆ ನಿಂತಿದ್ದಾರೆ ಎಂದು ನೇರವಾಗಿಯೇ ಆಪಾದಿಸಿದ್ದಾರೆ. ಕರ್ನಾಟಕದ ಕಾಂಗ್ರೆಸ್ ಮುಖಂಡರ ಜತೆ ಕೆಸಿಆರ್ ಸಭೆ ನಡೆಸಿ, 500 ಕೋಟಿ ರೂ. ಆಫರ್ ನೀಡಿದ್ದಾರೆ.
ಕನಿಷ್ಠ 25 ಟಿಕೆಟ್ ಆಕಾಂಕ್ಷಿಗಳನ್ನು ಬಂಡಾಯ ಏಳಿಸುವಂತೆ ಮಾಡಿದ್ದಾರೆ ಎಂದು ರೇವಂತ್ ಆಪಾದಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಮತ್ತು ಕೆ.ಸಿ.ಚಂದ್ರಶೇಖರ ರಾವ್ ನಡುವಿನ ಭೇಟಿ ಬಗ್ಗೆ ಮಾಹಿತಿ ಇಲ್ಲ ಎಂದಿದ್ದಾರೆ. ಕೆಸಿಆರ್ ಹೋರಾಟ ಇರುವುದು, ಬಿಜೆಪಿ ವಿರುದ್ಧ, ಕಾಂಗ್ರೆಸ್ ವಿರುದ್ಧವಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ