ಯೋಧರ ಚಲನವಲನಗಳ ಮಾಹಿತಿ ಗೌಪ್ಯವಾಗಿಡಿ


Team Udayavani, Feb 25, 2019, 12:30 AM IST

military-equipment-india.jpg

ಜಮ್ಮು/ಹೊಸದಿಲ್ಲಿ: “ರೈಲುಗಳಲ್ಲಿ ಸಂಚರಿಸುವ ಯೋಧರು,ಸಾಗಿಸಲಾಗುವ ಸೇನಾ ಸಲಕರಣೆಗಳ ಬಗ್ಗೆ ಯಾವುದೇ ಮಾಹಿತಿ ಸೋರಿಕೆಯಾಗದಂತೆ ನೋಡಿಕೊಳ್ಳಿ.’ಇಂತಹುದೊಂದು ಸೂಚನೆಯನ್ನು ರೈಲ್ವೆ ಇಲಾಖೆಯು ತನ್ನ ವಲಯ ಕಚೇರಿಗಳಿಗೆ ರವಾನಿಸಿದೆ. 

ಪುಲ್ವಾಮಾ ದಾಳಿಯಲ್ಲಿ 40 ಸಿಆರ್‌ಪಿಎಫ್ ಯೋಧರು ಹುತಾತ್ಮರಾದ ಬೆನ್ನಲ್ಲೇ ವಲಯ ಕಚೇರಿಗಳಿಗೆ ರೈಲ್ವೆ ಇಲಾಖೆಯು ಪತ್ರವೊಂದನ್ನು ಬರೆದಿದ್ದು, “ಯೋಧರ ಸಂಚಾರ, ಟ್ಯಾಂಕ್‌, ಗನ್‌ ಮತ್ತಿತರ ಸೇನಾ ಸಲಕರಣೆಗಳ ಸಾಗಾಟದ ಮಾಹಿತಿಯನ್ನು ಗೌಪ್ಯವಾಗಿಟ್ಟುಕೊಳ್ಳಬೇಕು. ಸೇನೆಯ ವಿಶೇಷ ರೈಲುಗಳ ಚಲನವಲನಗಳ ಮಾಹಿತಿ ಯನ್ನು ಯಾರಿಗೂ ನೀಡಬಾರದು. ಹಿರಿಯ ರೈಲ್ವೆ ಅಧಿಕಾರಿ, ರಕ್ಷಣಾ ಇಲಾಖೆ ಅಥವಾ ಗುಪ್ತಚರ ಅಧಿಕಾರಿ ಎಂದು ಹೇಳಿ ಯಾರಾದರೂ ಕರೆ ಮಾಡಿದರೂ, ಮಾಹಿತಿಯನ್ನು ನೀಡಬಾರದು’ ಎಂಬ ಖಡಕ್‌ ಸೂಚನೆಯನ್ನು ನೀಡಲಾಗಿದೆ.

ಈ ಕುರಿತ ನಿರ್ದೇಶನವನ್ನು ತುರ್ತಾಗಿ ಎಲ್ಲ ಸ್ಟೇಷನ್‌ ಮಾಸ್ಟರ್‌ಗಳು, ಕಂಟ್ರೋಲರ್‌ಗಳು ಹಾಗೂ ಸ್ಟೇಷನ್‌ ಸಿಬ್ಬಂದಿಗೆ ರವಾನಿಸಬೇಕು. ಯಾರಾದರೂ ಇದನ್ನು ಉಲ್ಲಂ ಸಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದೂ ಎಚ್ಚರಿಸಲಾಗಿದೆ.

ವದಂತಿ ನಂಬಬೇಡಿ: ಪುಲ್ವಾಮಾ ದಾಳಿಯ ಬಳಿಕದ ಕೆಲವು ಬೆಳವಣಿಗೆಗಳಿಂದ ಜಮ್ಮು- ಕಾಶ್ಮೀರದ ನಿವಾಸಿಗಳಲ್ಲಿ ಆತಂಕ ಉಂಟಾಗಿ ದ್ದು, ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿರುವ ಬಗ್ಗೆ ಎನ್‌ಸಿ ಅಧ್ಯಕ್ಷ ಫಾರೂಕ್‌ ಅಬ್ದುಲ್ಲಾ ಅವರು ಭಾನುವಾರ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಮಾಹಿತಿ ನೀಡಿದ್ದಾರೆ. ಇದೇ ವೇಳೆ, ಯಾವುದೇ ವದಂತಿಗಳನ್ನು ನಂಬಬೇಡಿ. ಶಾಂತವಾಗಿರಿ ಎಂದು ಕಣಿವೆ ರಾಜ್ಯದ ಜನತೆಗೆ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ಕರೆ ನೀಡಿದ್ದಾರೆ.

ಹಿಂಬಾಗಿಲ ಮಾತುಕತೆ?: ಎರಡೂ ದೇಶಗಳ ನಡುವಿನ ಪ್ರಕ್ಷುಬ್ಧ ವಾತಾವರಣವನ್ನು ತಿಳಿಗೊ ಳಿ ಸುವ ನಿಟ್ಟಿನಲ್ಲಿ ಭಾರತ ಮತ್ತು ಪಾಕ್‌ ನಡುವೆ ಹಿಂಬಾಗಿಲ ಮಾತುಕತೆ ನಡೆಯುತ್ತಿ ದೆಯೇ? ಹೌದು ಎನ್ನುತ್ತಿದೆ ಮೂಲಗಳು. ಕಳೆದ ವಾರವಷ್ಟೇ ಪಾಕ್‌ನ ಆಡಳಿತಾರೂಢ ತೆಹ್ರೀಕ್‌-ಇ-ಇನ್ಸಾಫ್ ಪಕ್ಷದ ಹಿರಿಯ ನಾಯಕ ರಮೇಶ್‌ ಕುಮಾರ್‌ ವಂಕ್ವಾನಿ ಅವರು ಭಾರತಕ್ಕೆ ಆಗಮಿಸಿ ಪ್ರಧಾನಿ ಮೋದಿ, ಸಚಿವೆ ಸುಷ್ಮಾ ಸ್ವರಾಜ್‌ ಹಾಗೂ ಸಚಿವ ವಿ.ಕೆ.ಸಿಂಗ್‌ ಅವರನ್ನು ಭೇಟಿಯಾಗಿದ್ದಾರೆ.  ಈ ವೇಳೆ, ಹದಗೆಟ್ಟಿರುವ ಪರಿಸ್ಥಿತಿಯನ್ನು ಸುಧಾರಿ ಸುವ ನಿಟ್ಟಿನಲ್ಲಿ ಚರ್ಚಿಸಲಾಗಿದ್ದು, ಈ ಮಾತು ಕತೆ ಬಳಿಕ ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗಿದೆ ಎಂದು ವಂಕ್ವಾನಿ ಅವರು ತಿಳಿಸಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಸುಪ್ರೀಂ ಮೆಟ್ಟಿಲೇರಿದ ಯೋಧರ ಪುತ್ರಿಯರು
ಭದ್ರತಾ ಪಡೆಯ ಯೋಧರ ಮಾನವ ಹಕ್ಕುಗಳನ್ನು ರಕ್ಷಿಸಲು ಹೊಸ ನೀತಿಯೊಂದನ್ನು ಜಾರಿ ಮಾಡುವಂತೆ ಕೋರಿ ಸೇನಾಧಿಕಾರಿಗಳ ಇಬ್ಬರು ಪುತ್ರಿಯರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. 19 ವರ್ಷದ ಪ್ರೀತಿ ಕೇದಾರ್‌ ಗೋಖಲೆ ಮತ್ತು 20ರ ಹರೆಯದ ಕಾಜಲ್‌ ಮಿಶ್ರಾ ಅರ್ಜಿದಾರರು. ಸೇನಾ ಕರ್ತವ್ಯ ನಿರ್ವಹಿಸುವಾಗ ಪ್ರತಿಭಟನಾಕಾರರು ಅಥವಾ ಇತರರಿಂದ ಯೋಧರ ಮೇಲೆ ದಾಳಿಗಳು ನಡೆಯುತ್ತಿವೆ. ಇಂಥದ್ದನ್ನು ತಡೆಯುವ ನಿಟ್ಟಿನಲ್ಲಿ ಹೊಸ ನೀತಿ ಜಾರಿ ಮಾಡುವಂತೆ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ. ಸೋಮವಾರ ಈ ಅರ್ಜಿ ವಿಚಾರಣೆಗೆ ಬರಲಿದೆ.

ಅರೆಸೇನಾಪಡೆಗಳ ಭತ್ಯೆ ಹೆಚ್ಚಳ
ಜಮ್ಮು-ಕಾಶ್ಮೀರದಲ್ಲಿ ಮತ್ತು ನಕ್ಸಲ್‌ ಪೀಡಿತ ಪ್ರದೇಶಗಳಲ್ಲಿ ನಿಯೋಜಿತರಾಗಿರುವ ಅರೆಸೇನಾ ಪಡೆಗಳ ಯೋಧರ ವಿಶೇಷ ಭತ್ಯೆಯನ್ನು ಹೆಚ್ಚಳ ಮಾಡಿ ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದೆ. ಉನ್ನತ ಅಧಿಕಾರಿಗಳ ಭತ್ಯೆಯನ್ನು ಮಾಸಿಕ 8,100ರೂ. ಮತ್ತು ಕೆಳಹಂತದ ಯೋಧರ ಭತ್ಯೆಯನ್ನು 7,600 ರೂ. ಏರಿಸಲಾಗಿದೆ. ಅಂದರೆ, ಇವರು ಇನ್ನು ಮುಂದೆ ಕ್ರಮವಾಗಿ ಮಾಸಿಕ 25 ಸಾವಿರ ರೂ. ಮತ್ತು 17,300 ರೂ. ಭತ್ಯೆ ಪಡೆಯಲಿದ್ದಾರೆ.

ಪುಲ್ವಾಮಾ ದಾಳಿಯು ಅತಿದೊಡ್ಡ ಭದ್ರತಾ ವೈಫ‌ಲ್ಯ. ಜೈಶ್‌ ಸಂಘಟನೆಯ ಮುಖ್ಯಸ್ಥ ಮಸೂದ್‌ ಅಜರ್‌ ಮೌಲಾನಾ ಅಲ್ಲ, ಅವನೊಬ್ಬ ಶೈತಾನ.
– ಅಸಾದುದ್ದೀನ್‌ ಒವೈಸಿ, ಸಂಸದ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.