“ಯೂ ಟರ್ನ್’ ಹೊಡೆಯುವುದರಲ್ಲಿ ಕೇಜ್ರಿವಾಲ್ ನಿಸ್ಸೀಮ: ತೇಜಸ್ವಿ ಸೂರ್ಯ
Team Udayavani, Sep 4, 2022, 7:25 AM IST
ಅಹಮದಾಬಾದ್: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ “ಯೂ ಟರ್ನ್’ ಹೊಡೆಯುವುದರಲ್ಲಿ ದೇಶದಲ್ಲೇ ನಿಸ್ಸೀಮ ನಾಯಕ. ಅವರ ಉಚಿತ ಯೋಜನೆಗಳಿಗೆ ಗುಜರಾತ್ನ ಯುವ ಮತದಾರರು ಮಾರು ಹೋಗುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ವಾಗ್ಧಾಳಿ ನಡೆಸಿದ್ದಾರೆ.
ಗುಜರಾತ್ನ ರಾಜ್ಕೋಟ್ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಕೇಜ್ರಿವಾಲ್ರದ್ದು ವಿಶ್ವಾಸಾರ್ಹತೆ ಮತ್ತು ದೃಢತೆ ಇಲ್ಲದ ರಾಜಕಾರಣ. ಮನೀಶ್ ಸಿಸೋಡಿಯಾ ಅವರ ಬಂಧನವು ಕೇಜ್ರಿವಾಲ್ ಹೇಳುವ ಶುದ್ಧ ರಾಜಕಾರಣದ ಶವಪೆಟ್ಟಿಗೆಯ ಕೊನೆಯ ಮೊಳೆಯಾಗಿದೆ,” ಎಂದು ದೂರಿದರು.
“ದೆಹಲಿಯಲ್ಲಿ ಆಪ್ ನೇತೃತ್ವದ ಸರ್ಕಾರದ ದುರಾಡಳಿತವನ್ನು ಬಿಜೆಪಿ ಬಹಿರಂಗಪಡಿಸಿದೆ. ಕಳೆದ 30 ವರ್ಷಗಳಿಂದ ಗುಜರಾತ್ ಅಭಿವೃದ್ಧಿಯ ಹಾದಿಯಲ್ಲಿದ್ದು, ಇಲ್ಲಿನ ಯುವಕರು ಇದನ್ನು ತೀವ್ರಗತಿಯಲ್ಲಿ ಮುಂದುವರಿಸಲು ಬಯಸಿದ್ದಾರೆ,” ಎಂದು ತೇಜಸ್ವಿ ಹೇಳಿದರು.
ಬಿಜೆಪಿಯಿಂದ ಹಣ ಪಡೆಯಿರಿ, ಆಪ್ಗೆ ಕೆಲಸ ಮಾಡಿ: ಕೇಜ್ರಿವಾಲ್
“ಬಿಜೆಪಿ ಕಾರ್ಯಕರ್ತರು ಬಿಜೆಪಿಯಿಂದ ಹಣ ಪಡೆಯಿರಿ. ಆದರೆ ಆಪ್ಗಾಗಿ ಕೆಲಸ ಮಾಡಿ,” ಎಂದು ದೆಹಲಿ ಸಿಎಂ ಕೇಜ್ರಿವಾಲ್ ಹೇಳಿದರು. ರಾಜ್ಕೋಟ್ನಲ್ಲಿ ಎರಡು ದಿನಗಳ ಮನೆ ಮನೆ ಪ್ರಚಾರ ಅಭಿಯಾನದಲ್ಲಿ ಪಾಲ್ಗೊಂಡಿದ್ದ ಅವರು, “ಬಿಜೆಪಿ ಕಾರ್ಯಕರ್ತರು ಕೇಸರಿ ಪಕ್ಷದಲ್ಲೇ ಉಳಿಯಿರಿ. ಆದರೆ ಆಪ್ಗಾಗಿ ದುಡಿಯಿರಿ,” ಎಂದು ಉಚಿತ ಆಫರ್ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು
Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ