ಸಿಂಗಾಪುರ ಪ್ರವಾಸ: ಪ್ರಧಾನಿ ಮೋದಿಗೆ ಪತ್ರ ಬರೆದ ಕೇಜ್ರಿವಾಲ್
Team Udayavani, Jul 17, 2022, 9:05 PM IST
ನವದೆಹಲಿ: ಸಿಂಗಾಪುರದಲ್ಲಿ ಆಗಸ್ಟ್ನಲ್ಲಿ ನಡೆಯಲಿರುವ “ವಿಶ್ವ ನಗರಗಳ ಶೃಂಗಸಭೆ’ಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ಗೆ ಆಹ್ವಾನವಿದ್ದು, ಅದಕ್ಕೆ ತೆರಳಲು ವೀಸಾ ತಡೆಹಿಡಿಯದೆ ಅನುಮತಿ ಕೊಡಬೇಕೆಂದು ಅವರು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.
“ದೆಹಲಿ ಸರ್ಕಾರದ ಮಾದರಿಯನ್ನು ವಿಶ್ವ ವೇದಿಕೆಯಲ್ಲಿ ಪ್ರಸ್ತುತಪಡಿಸುವುದು ದೊಡ್ಡ ಅವಕಾಶ. ಆ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಮುಖ್ಯಮಂತ್ರಿಯನ್ನು ತಡೆಯುವುದು ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧ’ ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.
ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಕೇಜ್ರಿವಾಲ್ ಅವರ ಸಿಂಗಾಪುರ ಪ್ರವಾಸದ ಕಡತಕ್ಕೆ ಇನ್ನೂ ಸಹಿ ಹಾಕಿಲ್ಲ ಎಂದು ಮೂಲಗಳು ತಿಳಿಸಿವೆ.ಆ ಹಿನ್ನೆಲೆ ಅವರು ಪ್ರಧಾನಿ ಮೊರೆ ಹೋಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ