ಪೌರತ್ವ ತಿದ್ದುಪಡಿ ಕಾಯ್ದೆ ಹಿಂಪಡೆಯಿರಿ; ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ
ಕೇರಳ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಈ ನಿರ್ಣಯವನ್ನು ಮಂಡಿಸಿರುವುದಾಗಿ ವರದಿ ವಿವರಿಸಿದೆ.
Team Udayavani, Dec 31, 2019, 1:44 PM IST
ತಿರುವನಂತಪುರಂ:ಪೌರತ್ವ ತಿದ್ದುಪಡಿ ಕಾಯ್ದೆಯನ್ನು(ಸಿಎಎ) ರದ್ದುಪಡಿಸುವಂತೆ ಕೇರಳ ವಿಧಾನಸಭೆ ಮಂಗಳವಾರ ನಿರ್ಣಯವನ್ನು ಕೈಗೊಂಡಿದೆ ಎಂದು ವರದಿ ತಿಳಿಸಿದೆ.
ಕೇರಳ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಈ ನಿರ್ಣಯವನ್ನು ಮಂಡಿಸಿರುವುದಾಗಿ ವರದಿ ವಿವರಿಸಿದೆ. ಲೋಕಸಭೆಯಲ್ಲಿ ಎಸ್ ಸಿ, ಎಸ್ ಟಿ ಮೀಸಲಾತಿಯನ್ನು ಇನ್ನೊಂದು ದಶಕಗಳ ಕಾಲ ಮುಂದುವರಿಸಿರುವುದಕ್ಕೆ ವಿಧಾನಸಭಾ ಸದಸ್ಯರು ಸಮ್ಮತಿ ಸೂಚಿಸಿದ್ದಾರೆ. ಆದರೆ ಸಿಎಎ ನಿರ್ಣಯ ಅಂಗೀಕಾರ ಒಪ್ಪಲು ಸಾಧ್ಯವಿಲ್ಲ ಎಂದು ಪಿಣರಾಯಿ ಹೇಳಿರುವುದಾಗಿ ವರದಿ ತಿಳಿಸಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ಅಂಗೀಕಾರಕ್ಕೂ ಮುನ್ನ ಸಾರ್ವಜನಿಕರ ಅಭಿಪ್ರಾಯ ಆಲಿಸಬೇಕಾಗಿತ್ತು ಎಂದು ಕೇರಳ ವಿಧಾನಸಭೆಯಲ್ಲಿ ಸಿಎಎ ವಿರುದ್ಧ ನಿರ್ಣಯ ಅಂಗೀಕಾರದ ವೇಳೆ ಅಭಿಪ್ರಾಯವ್ಯಕ್ತಪಡಿಸಿರುವುದಾಗಿ ಹೇಳಿದೆ.
ಸಿಎಎ ಜಾತ್ಯತೀತ ನಿಲುವಿಗೆ ವಿರುದ್ಧವಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಧಾರ್ಮಿಕ ಮತ್ತು ತಾರತಮ್ಯದಿಂದ ಕೂಡಿರುವುದಾಗಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು