ಷರತ್ತಿನೊಂದಿಗೆ ಕೇರಳದಲ್ಲಿ ಬಿಜೆಪಿಗೆ ಚರ್ಚ್ ಬೆಂಬಲ
Team Udayavani, Mar 20, 2023, 5:49 AM IST
ತಿರುವನಂತಪುರ: ಕೇರಳದಲ್ಲಿನ ಕ್ರಿಶ್ಚಿಯನ್ ಸಮುದಾಯವನ್ನು ತಲುಪುವ ಬಿಜೆಪಿಯ ಪ್ರಯತ್ನಗಳ ನಡುವಯೇ, ರಾಜ್ಯದಲ್ಲಿ ಸಮುದಾಯದ ಒಂದು ವಿಭಾಗವನ್ನು ಪ್ರತಿನಿಧಿಸುವ ಸೈರೋ -ಮಲಬಾರ್ ಕ್ಯಾಥೋಲಿಕ್ ಚರ್ಚ್, ತನ್ನ ಸಂಪೂರ್ಣ ಬೆಂಬಲವನ್ನು ಬಿಜೆಪಿಗೆ ನೀಡುವುದಾಗಿ ಘೋಷಿಸಿದೆ. ಆದರೆ, ಅದರ ಜತೆಗೆ ಒಂದು ಷರತ್ತನ್ನೂ ವಿಧಿಸಿದೆ.
ಕಣ್ಣೂರಿನಲ್ಲಿ ಚರ್ಚ್ ವತಿಯಿಂದ ಆಯೋಜಿಸಲಾಗಿದ್ದ ರೈತರ ಸಭೆಯಲ್ಲಿ ಚರ್ಚ್ನ ಆರ್ಚ್ ಬಿಷಪ್ ಜೋಸೆಫ್ ಪಂಪ್ಲಾನಿ ಮಾತನಾಡಿದ್ದಾರೆ. ಈ ವೇಳೆ ರಬ್ಬರ್ ಕೃಷಿಕರ ಬಗ್ಗೆ ಪ್ರಸ್ತಾಪಿಸಿ, ರಬ್ಬರ್ ಬೆಲೆ ಕುಸಿಯುತ್ತಿದೆ. ಇದಕ್ಕೆ ಯಾರು ಹೊಣೆ ?ಕೇಂದ್ರ ಸರ್ಕಾರ ಮನಸ್ಸು ಮಾಡಿದರೆ, ಕೆಜಿಗೆ 250 ರೂ.ಬೆಲೆ ಸಿಗುತ್ತದೆ. ನೀವು ಕೆಜಿಗೆ 300 ರೂ.ಗಳಂತೆ ರಬ್ಬರ್ ಖರೀದಿಸಿದರೆ, ರಾಜ್ಯದಲ್ಲಿ ಬಿಜೆಪಿಯ ಸಂಸದರಿಲ್ಲ ಎನ್ನುವ ಸಮಸ್ಯೆ ನಾವು ಪರಿಹರಿಸುತ್ತೇವೆ. ನಮ್ಮ ಮತವನ್ನು ನೀಡುತ್ತೇವೆ ಎಂದಿದ್ದಾರೆ.
ಕೇರಳದಲ್ಲಿ ಇನ್ನುಮುಂದೆ ಕ್ರಿಶ್ಚಿಯನ್ನರು ಮತ್ತು ಆರ್ಎಸ್ಎಸ್ ನಡುವೆ ಘರ್ಷಣೆಗಳಿರುವುದಿಲ್ಲ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಹೇಳಿಕೆ ನೀಡಿದ ಬೆನ್ನಲ್ಲೇ, ಚರ್ಚ್ನ ಈ ಘೋಷಣೆ ಮಹತ್ವ ಪಡೆದುಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್