ಪ್ರಧಾನಿ ಮೋದಿಯನ್ನು ಹೊಗಳಿದ್ದೇಕೆ?ವಿವರಣೆ ಕೊಡಿ-ಶಶಿ ತರೂರ್ ಗೆ ಕಾಂಗ್ರೆಸ್ ನೋಟಿಸ್!
Team Udayavani, Aug 27, 2019, 5:00 PM IST
ತಿರುವನಂತಪುರಂ:ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿರುವ ಕಾಂಗ್ರೆಸ್ ಸಂಸದ ಶಶಿ ತರೂರ್ ಗೆ ಕೇರಳ ಕಾಂಗ್ರೆಸ್ ವಿವರಣೆ ನೀಡುವಂತೆ ನೋಟಿಸ್ ಜಾರಿ ಮಾಡಿದ್ದು, ಮುಂದಿನ ಕ್ರಮದ ಬಗ್ಗೆ ನಂತರ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದೆ.
ನರೇಂದ್ರ ಮೋದಿ ಅವರನ್ನು ಯಾವ ಕಾರಣಕ್ಕೆ ಹೊಗಳಿದ್ದು ಎಂಬ ಬಗ್ಗೆ ನಾವು ಶಶಿ ತರೂರ್ ಬಳಿ ವಿವರಣೆ ಕೇಳಿದ್ದೇವೆ. ಅವರು ಉತ್ತರ ನೀಡಿದ ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ಕೇರಳ ಕಾಂಗ್ರೆಸ್ ಅಧ್ಯಕ್ಷ ಮುಲ್ಲಾಪ್ಪಲೈ ರಾಮಚಂದ್ರನ್ ಮಾಹಿತಿ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಉತ್ತಮ ಕೆಲಸ ಮಾಡಿದಾಗ ನಾವು ಹೊಗಳಬೇಕು. ಪದೇ, ಪದೇ ಎಲ್ಲಾ ವಿಚಾರದಲ್ಲಿಯೂ ಟೀಕಿಸುವುದು ಸರಿಯಲ್ಲ ಎಂದು ಶಶಿ ತರೂರ್ ಇತ್ತೀಚೆಗೆ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆದರೆ ತರೂರ್ ಹೇಳಿಕೆಯಿಂದ ಕೇರಳ ಕಾಂಗ್ರೆಸ್ ಅಸಮಾಧಾನಗೊಂಡಿದೆ.
ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಜೈರಾಂ ರಮೇಶ್, ಅಭಿಷೇಕ್ ಮನು ಸಿಂಘ್ವಿ ಕೂಡಾ ಪ್ರಧಾನಿ ನರೇಂದ್ರ ಮೋದಿಯನ್ನು ಪದೇ, ಪದೇ ಟೀಕಿಸುವುದರಲ್ಲಿ ಅರ್ಥವಿಲ್ಲ ಎಂದು ಹೇಳಿಕೆ ನೀಡಿದ್ದರು. ಬಳಿಕ ಟ್ವೀಟ್ ಮಾಡಿದ್ದ ಶಶಿ ತರೂರ್, ನಾನು ಆರು ವರ್ಷಗಳ ಹಿಂದೆಯೇ ಹೇಳಿದ್ದೆ…ಆದರೆ ನಿಮಗೆ ಈಗ ಮನವರಿಕೆಯಾಗಿದೆ. ಒಳ್ಳೆಯ ಕೆಲಸ ಮಾಡಿದಾಗ ನಾವು ಮೋದಿಯನ್ನು ಹೊಗಳಬೇಕು. ತಪ್ಪು ಮಾಡಿದಾಗ ಟೀಕಿಸಬೇಕು. ಈ ನಿಟ್ಟಿನಲ್ಲಿ ಬಂದ ಹೇಳಿಕೆಯನ್ನು ತಾನು ಸ್ವಾಗತಿಸುವುದಾಗಿ ಉಲ್ಲೇಖಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ