ಸೋಂಕು: ಕೇರಳ ಪಾಲು ಶೇ.68


Team Udayavani, Aug 27, 2021, 6:50 AM IST

ಸೋಂಕು: ಕೇರಳ ಪಾಲು ಶೇ.68

ತಿರುವನಂತಪುರ/ಹೊಸದಿಲ್ಲಿ: ಕೇರಳದಲ್ಲಿ ಸತತ ಎರಡನೇ ದಿನವಾದ ಗುರುವಾರವೂ 30,007 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 162 ಮಂದಿ ಅಸುನೀಗಿದ್ದಾರೆ. ಹಲವು ಹಬ್ಬಗಳಿಗಾಗಿ ರಾಜ್ಯ ಸರಕಾರ ನಿಯಮ ಸಡಿಲಿಕೆ ಮಾಡಿದ್ದರಿಂದ ರಾಜ್ಯದಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿದೆ. ಬುಧವಾರದಿಂದ ಗುರುವಾರದ ಅವಧಿಯಲ್ಲಿ ದೇಶಾದ್ಯಂತ ದೃಢಪಟ್ಟ 46,164 ಹೊಸ ಪ್ರಕರಣಗಳ ಪೈಕಿ ಕೇರಳದ್ದೇ 31,445 ಕೇಸುಗಳಿವೆ. ಕಳೆದ ವಾರದ ದೇಶದ ಒಟ್ಟಾರೆ ಪ್ರಕರಣಗಳ ಪೈಕಿ ಕೇರಳದ ಪಾಲೇ ಶೇ. 68ರಷ್ಟು ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.

ರಾಜ್ಯದ ಪರಿಸ್ಥಿತಿ ಬಗ್ಗೆ ಗುರುವಾರ ಪರಿಶೀಲನೆ ನಡೆಸಿದ ಆರೋಗ್ಯ ಸಚಿವೆ ವೀಣಾ ಜಾರ್ಜ್‌, ಮನೆಗಳಲ್ಲಿ ಕ್ವಾರಂಟೈನ್‌ನಲ್ಲಿ ಇದ್ದವರಿಗೇ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ಹಬ್ಬಿದೆ. ಇತ್ತೀಚಿನ ಅಧ್ಯಯನ ಪ್ರಕಾರ ಮನೆಯಲ್ಲಿಯೇ ಇರುವ ಶೇ.35 ಮಂದಿಗೆ ಸೋಂಕು ದೃಢಪಟ್ಟಿದೆ. ಹೋಮ್‌ ಕ್ವಾರಂಟೈನ್‌ ನಿಯಮಗಳ ಉಲ್ಲಂಘನೆಯಿಂದಾಗಿ ಪರಿಸ್ಥಿತಿ ಕೈಮೀರಿದೆ ಎಂದಿದ್ದಾರೆ.

ರಾಜಕೀಯ ಲಾಭ: ಕೇಂದ್ರ ವಿದೇಶಾಂಗ ವ್ಯವಹಾರಗಳ ಖಾತೆ ಸಹಾಯಕ ಸಚಿವ ವಿ.ಮುರಳೀಧರನ್‌, “ಸೋಂಕಿನ ಪರಿಸ್ಥಿತಿಯನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ನೇತೃತ್ವದ ಸರಕಾರ ತನ್ನ ರಾಜಕೀಯ ಲಾಭಗಳಿಗಾಗಿ ಬಳಕೆ ಮಾಡುತ್ತಿದೆ. ಸೋಂಕನ್ನು ತಡೆಯಲು ವೈಜ್ಞಾನಿಕ ಮಾರ್ಗ ಅನುಸರಿಸುವ ಬದಲು, ರಾಜಕೀಯ ಲಾಭ ಹೇಗೆ ಪಡೆಯಬಹುದು ಎಂದು ಯೋಚನೆಯಲ್ಲಿದೆ. ಐಸಿಎಂಆರ್‌ನ ನೀತಿಗಳನ್ನು ರಾಜ್ಯ ಸರಕಾರ ಕಟ್ಟುನಿಟ್ಟಾಗಿ ಅನುಸರಿಸಬೇಕು’ ಎಂದು ಒತ್ತಾಯಿಸಿದ್ದಾರೆ. ರಾಜ್ಯ ಸರಕಾರ ಶೇ.54 ಮಂದಿಗೆ ಲಸಿಕೆ ಹಾಕಿಸಿರುವುದಾಗಿ ಹೇಳಿರುವುದರ ಬಗ್ಗೆಯೇ ಸಂಶಯವಿದೆ ಎಂದೂ ಹೇಳಿದ್ದಾರೆ. ಕಾಂಗ್ರೆಸ್‌ ಶಾಸಕ ರಮೇಶ್‌ ಚೆನ್ನಿತ್ತಲ ಪ್ರತಿಕ್ರಿಯೆ ನೀಡಿ, ರಾಜ್ಯ ಸರಕಾರ ಸೋಂಕಿನ ನಿರ್ವಹಣೆ ವಿಚಾರದಲ್ಲಿ ವಿಫ‌ಲವಾಗಿದೆ ಎಂದು ಟೀಕಿಸಿದ್ದಾರೆ.

ಎಚ್ಚರಿಕೆಯಿಂದ ಹಬ್ಬ: ಹೊಸದಿಲ್ಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯದರ್ಶಿ ರಾಜೇಶ್‌ ಭೂಷಣ್‌, ದೇಶ ಇನ್ನೂ ಎರಡನೇ ಅಲೆಯ ನಡುವೆ ಇದೆ. ಹಬ್ಬಗಳನ್ನು ಎಚ್ಚರಿಕೆಯಿಂದ ಆಚರಿಸಬೇಕು. ಸೆಪ್ಟಂಬರ್‌- ಅಕ್ಟೋಬರ್‌ ಅವಧಿಯಲ್ಲಿ ಹೆಚ್ಚಿನ ಎಚ್ಚರಿಕೆ ಅಗತ್ಯ ಎಂದಿದ್ದಾರೆ. ಕೇರಳದ ಸ್ಥಿತಿ ಬಗ್ಗೆ ಹೊಸದಿಲ್ಲಿಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ ಭಲ್ಲಾ ಹಿರಿಯ ಅಧಿಕಾರಿಗಳ ಜತೆಗೆ ಸಭೆ ನಡೆಸಿದ್ದಾರೆ. ಸೋಂಕು ನಿಯಂತ್ರಣ ನಿಟ್ಟಿನಲ್ಲಿ ರಾಜ್ಯಕ್ಕೆ ಹಲವು ಸಲಹೆಗಳನ್ನೂ ನೀಡಿದ್ದಾರೆ. ದೇಶದ 41 ಜಿಲ್ಲೆಗಳಲ್ಲಿ ಪ್ರಸ್ತುತ ಕೊರೊನಾ ಪಾಸಿಟಿವಿಟಿ ಪ್ರಮಾಣ ಶೇ.10ಕ್ಕಿಂತ ಹೆಚ್ಚಾಗಿದೆ ಎಂದೂ ಕೇಂದ್ರ ಸರಕಾರ ಆತಂಕ ವ್ಯಕ್ತಪಡಿಸಿದೆ.

ಅಂತರ ಇಳಿಕೆ?: ಕೊವಿಶೀಲ್ಡ್‌ನ ಎರಡು ಡೋಸ್‌ಗಳ ನಡುವಿನ ಅಂತರವನ್ನು ತಗ್ಗಿಸುವ ಕುರಿತು ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಮೂಲಗಳು ತಿಳಿಸಿವೆ. ಆದರೆ ಈ ರೀತಿಯ ಯಾವ ಪ್ರಸಾವವೂ ಸದ್ಯಕ್ಕೆ ನಮ್ಮ ಮುಂದಿಲ್ಲ ಎಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ. ಪ್ರಸ್ತುತ ಒಂದು ಡೋಸ್‌ ಪಡೆದ 12-16 ವಾರಗಳ ಬಳಿಕವೇ ಎರಡನೇ ಡೋಸ್‌ ಪಡೆಯಲು ಅವಕಾಶವಿದೆ.

ಭಾರತ- ಯುಕೆ ಅಧ್ಯಯನ ಗಿನ್ನೆಸ್‌ ದಾಖಲೆಗೆ ಸೇರ್ಪಡೆ :

ಯುಕೆ ಆರೋಗ್ಯ ತಜ್ಞರ ನೇತೃತ್ವದಲ್ಲಿ ಭಾರತದ ವಿವಿಧ ಆಸ್ಪತ್ರೆಗಳಲ್ಲಿ ನಡೆದ ಕೋವಿಡ್‌-19 ವಿಶ್ವವ್ಯಾಪಿ ಅಧ್ಯಯನವು ಈಗ ಗಿನ್ನೆಸ್‌ ವಿಶ್ವದಾಖಲೆ ಮಾಡಿದೆ. “ಜಗತ್ತಿನ ಅತೀ ದೊಡ್ಡ ವೈಜ್ಞಾನಿಕ ಸಹಭಾಗಿತ್ವ’ ಎಂದು ಇದನ್ನು ಬಣ್ಣಿಸಲಾಗಿದೆ. ಭಾರತ ಸೇರಿದಂತೆ 116 ದೇಶಗಳಲ್ಲಿ 1.40 ಲಕ್ಷ ರೋಗಿಗಳ ಮೇಲೆ ಈ ಅಧ್ಯಯನ ನಡೆದಿತ್ತು. ಕೊರೊನಾ ವೈರಸ್‌ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸುವ ಉದ್ದೇಶದಿಂದ ಈ ಅಧ್ಯಯನ ನಡೆಸಲಾಗಿತ್ತು ಎಂದು ಭಾರತೀಯ ಮೂಲದ ಸರ್ಜನ್‌, ಬರ್ಮಿಂಗ್‌ಹ್ಯಾಂ ವಿವಿಯ ಅನಿಲ್‌ ಭಾಂಗು ತಿಳಿಸಿದ್ದಾರೆ.

ಇಸ್ರೇಲ್‌ನಲ್ಲಿ “ಎ.ವೈ.12′ ಹೆಸರಿನ ಕೊರೊನಾ ಉಪವಂಶಸ್ಥ ಪತ್ತೆ! :

ಕೊರೊನಾ ವೈರಾಣುವಿನ ಹೊಸ ಪ್ರಭೇದವಾದ ಡೆಲ್ಟಾ ವೈರಾಣುವಿನ ಬಗ್ಗೆ ನಾವು ಕೇಳಿದ್ದೇವೆ. ದೂರದ ಇಸ್ರೇಲ್‌ನಲ್ಲಿ ಡೆಲ್ಟಾ ಪ್ರಭೇದವನ್ನೇ ಮೀರಿಸಬಲ್ಲ ಕೊರೊನಾದ ಉಪವಂಶವೊಂದು ಸೃಷ್ಟಿಯಾಗಿದೆ! ವಿಜ್ಞಾನಿಗಳು ಅದಕ್ಕೆ “ಎ.ವೈ. 12′ ಎಂದು ಹೆಸರಿಟ್ಟಿದ್ದಾರೆ. ಇದು ಡೆಲ್ಟಾ ವೈರಾಣುವಿನಿಂದಲೇ ಸೃಷ್ಟಿಯಾದ, ಸ್ವರೂಪದಲ್ಲಿ ಸಾಂಪ್ರದಾಯಿಕ ಕೊರೊನಾ ವೈರಾಣುವಿಗಿಂತ ಭಿನ್ನವಾಗಿರುವ ವೈರಾಣು ಎಂದು ಹೇಳಲಾಗಿದೆ. ಇದಕ್ಕೆ ಸಾರ್ಸ್‌-ಕೋವ್‌-2, ಎ.ವೈ. 12 ಎಂದು ಹೆಸರಿಡಲಾಗಿದ್ದು, ಇದನ್ನು ಅಧ್ಯಯನ ಮಾಡಲೆಂದೇ “ಸಾರ್ಸ್‌-ಕೋವ್‌-2 ಜೆನೋಮಿಕ್ಸ್‌ ಕನ್ಸೋರ್ಟಿಯಂ ಐಎನ್‌ಎಸ್‌ಎಸಿಒಜಿ’ ಎಂಬ ತಜ್ಞರುಳ್ಳ ಸಮಿತಿಯನ್ನೂ ರಚಿಸಲಾಗಿದೆ. ಈ ಹೊಸ ವೈರಾಣುವಿನಿಂದ ಉಂಟಾಗುವ ಸೋಂಕನ್ನು ಎ.ವೈ. 12 ಸೋಂಕು ಎಂದೇ ಪರಿಗಣಿಸಲಾಗುತ್ತದೆ. ಇಸ್ರೇಲ್‌ನಲ್ಲಿ ಈಗಾಗಲೇ ಶೇ. 60 ಮಂದಿಗೆ ಪೂರ್ಣಪ್ರಮಾಣದಲ್ಲಿ “ಫೈಜರ್‌’ ಲಸಿಕೆ ನೀಡಲಾಗಿದೆ. ಆದರೆ ಆ ಲಸಿಕೆಗಳು ಎ.ವೈ. 12 ಸೋಂಕನ್ನು ನಿರ್ಬಂಧಿಸಬಲ್ಲವೇ ಎಂಬುದು ಇನ್ನೂ ನಿಖರವಾಗಿ ತಿಳಿದುಬಂದಿಲ್ಲ. ಹಾಗಾಗಿ, “ಎ.ವೈ.12′ ವೈರಾಣು ಆ ದೇಶದಲ್ಲಿ ಹೊಸ ಆತಂಕ ಸೃಷ್ಟಿಸಿದೆ.

ಟಾಪ್ ನ್ಯೂಸ್

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.